ಚಂಡಿಗಢ : ಬುಧವಾರ ಬೆಳಿಗ್ಗೆ ನಡೆದ ಕ್ಷಿಪ್ರ ಮತ್ತು ದಿಟ್ಟ ಕಾರ್ಯಾಚರಣೆಯಲ್ಲಿ, ಭಾರತೀಯ ಸೇನೆಯ ಹೆಲಿಕಾಪ್ಟರ್ಗಳು ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್ ಗಡಿಯಲ್ಲಿರುವ ಪಂಜಾಬಿನ ಮಾಧೋಪುರ ಹೆಡ್ವರ್ಕ್ಸ್ ಬಳಿ ಸಿಲುಕಿಕೊಂಡಿದ್ದ 22 ಸಿಆರ್ಪಿಎಫ್ ಸಿಬ್ಬಂದಿ ಮತ್ತು ಮೂವರು ನಾಗರಿಕರನ್ನು ರಕ್ಷಣೆ ಮಾಡಿವೆ.
ಇಂದು, ಬುಧವಾರ ಬೆಳಿಗ್ಗೆ 6 ಗಂಟೆಗೆ, ಕಠಿಣ ಸವಾಲಿನ ಪರಿಸ್ಥಿತಿಗಳ ಹೊರತಾಗಿಯೂ ರಕ್ಷಣಾ ಕಾರ್ಯವನ್ನು ಕೈಗೊಳ್ಳಲು ಸೇನಾ ವಿಮಾನಯಾನ ಹೆಲಿಕಾಪ್ಟರ್ಗಳನ್ನು ಕಳುಹಿಸಿತು. ಎಲ್ಲಾ ಸಿಲುಕಿಕೊಂಡಿರುವ ವ್ಯಕ್ತಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಕಾರ್ಯಾಚರಣೆಯ ಅತ್ಯಂತ ತುರ್ತುಸ್ಥಿತಿಯಲ್ಲಿ ನಡೆಯಿತು. ಸಿಆರ್ಪಿಎಫ್ ಸಿಬ್ಬಂದಿ ಆಶ್ರಯ ಪಡೆದಿದ್ದ ಕಟ್ಟಡವು ಸೇನಾ ಹೆಲಿಕಾಪ್ಟರ್ ಸಿಆರ್ಪಿಎಫ್ ಸಿಬ್ಬಂದಿಯನ್ನು ಅಲ್ಲಿಂದ ಸ್ಥಳಾಂತರಿಸಿದ ಕೆಲವೇ ಕ್ಷಣಗಳಲ್ಲಿ ಅವರು ಆಶ್ರಯ ಪಡೆದಿದ್ದ ಕಟ್ಟಡ ಕುಸಿದುಬಿತ್ತು ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಭಾರತೀಯ ಸೇನೆ ಮತ್ತು ಸ್ಥಳೀಯ ಅಧಿಕಾರಿಗಳ ನಡುವಿನ ಸಮನ್ವಯವು ಸಂಭಾವ್ಯ ದುರಂತವನ್ನು ತಪ್ಪಿಸಿದೆ ಎಂದು ಅವರು ಹೇಳಿದ್ದಾರೆ.
ನಿರಂತರ ಭಾರೀ ಮಳೆಯಿಂದಾಗಿ ಪಂಜಾಬ್ನ ಕೆಲವು ಭಾಗಗಳ ವಿವಿಧ ಪ್ರದೇಶಗಳಲ್ಲಿ ಹಠಾತ್ ಪ್ರವಾಹ ಉಂಟಾಗಿದ್ದು, ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳು ಮತ್ತು ಕೆಲವು ಹೊಳೆಗಳು ಉಕ್ಕಿ ಹರಿಯುತ್ತಿವೆ.
ಇಂದು, ಬುಧವಾರ ಬೆಳಗಿನ ಜಾವ ರಾವಿ ನದಿಯಲ್ಲಿ ನೀರಿನ ಮಟ್ಟ 4.60 ಲಕ್ಷ ಕ್ಯೂಸೆಕ್ಗಳಷ್ಟಿದ್ದು, ಗುರುದಾಸ್ಪುರ, ಪಠಾಣಕೋಟ ಮತ್ತು ಅಮೃತಸರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ.
ರಾವಿ ನದಿಯ ರಂಜಿತಸಾಗರ ಅಣೆಕಟ್ಟಿನ ನೀರಿನ ಮಟ್ಟ 527.91 ಮೀಟರ್ ಅಪಾಯದ ಮಟ್ಟವನ್ನು ದಾಟಿದ್ದು, ಅಧಿಕಾರಿಗಳು ಜಲಾಶಯದಿಂದ ನಿಯಂತ್ರಿತ ರೀತಿಯಲ್ಲಿ ನೀರನ್ನು ಬಿಡುಗಡೆ ಮಾಡಲಾಗಿದೆ. ಮಂಗಳವಾರ ಅಣೆಕಟ್ಟಿನಿಂದ ಸುಮಾರು 1.95 ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಭಾಕ್ರಾ ಮತ್ತು ಪಾಂಗ್ ಅಣೆಕಟ್ಟುಗಳಿಂದ ನಿಯಂತ್ರಿತ ಬಿಡುಗಡೆಗಳನ್ನು ಸಹ ಮಾಡಲಾಗುತ್ತಿದೆ.


ನಿಮ್ಮ ಕಾಮೆಂಟ್ ಬರೆಯಿರಿ