ಹಾಸ್ಟೆಲಿನಲ್ಲಿ ತಮಾಷೆ ಮಾಡಲು ಹೋಗಿ 8 ಮಕ್ಕಳು ಆಸ್ಪತ್ರೆಗೆ ದಾಖಲು; ಅಂಟು ಹಾಕಿದ್ದರಿಂದ ಕಣ್ಣನ್ನೇ ತೆರೆಯಲು ಬರುತ್ತಿಲ್ಲ…!

ಭುವನೇಶ್ವರ: ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ತಮಾಷೆ ಮಾಡಲು ಹೋಗಿ ಎಂಟು ವಿದ್ಯಾರ್ಥಿಗಳು ಮಲಗಿದ್ದಾಗ ಅವರ ಕಣ್ಣುಗಳಿಗೆ ತಕ್ಷಣವೇ ಹಿಡಿದುಕೊಳ್ಳುವ ಅಂಟು ಹಾಕಿದ್ದರಿಂದ ಅದು ಗಂಭೀರವಾಗಿ ಪರಿಣಮಿಸಿತು.
ಮಕ್ಕಳು ಎಚ್ಚರವಾದಾಗ ಅವರ ಕಣ್ಣುರೆಪ್ಪೆಗಳನ್ನು ತೆರೆಯಲು ಬರುತ್ತಿರಲಿಲ್ಲ. ಈಗ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಡಳಿತವು ಆಘಾತಕಾರಿ ಪ್ರಕರಣದ ತನಿಖೆಗೆ ಆದೇಶಿಸಿದೆ.
ಕಂಧಮಾಲ್‌ನ ಸಲಗುಡದಲ್ಲಿರುವ ಸೇವಾಶ್ರಮ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. 3, 4 ಮತ್ತು 5 ನೇ ತರಗತಿಯ ಎಂಟು ವಿದ್ಯಾರ್ಥಿಗಳು ರಾತ್ರಿ ಹಾಸ್ಟೆಲ್‌ನಲ್ಲಿ ಮಲಗಿದ್ದಾಗ ಅವರ ಕೆಲವು ಸಹಪಾಠಿಗಳು ಅವರ ಕಣ್ಣುಗಳಿಗೆ ಫಾಸ್ಟ್‌ ಅಂಟು (instant glue) ಹಾಕಿದ್ದಾರೆ. ಮಕ್ಕಳು ನೋವು ಮತ್ತು ಕಿರಿಕಿರಿಯಿಂದ ಎಚ್ಚರಗೊಂಡರು. ಆಗ ಅವರಿಗೆ ಕಣ್ಣುರೆಪ್ಪೆಗಳು ತೆರೆಯಲು ಬರುತ್ತಿರಲಿಲ್ಲ. ಅವರ ಕಿರುಚಾಟವು ಹಾಸ್ಟೆಲ್ ಅಧಿಕಾರಿಗಳ ಗಮನಕ್ಕೆ ಬಂತು. ಅಧಿಕಾರಿಗಳು ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ನಂತರ ಅವರನ್ನು ವಿಶೇಷ ಆರೈಕೆಗಾಗಿ ಫುಲ್ಬಾನಿಯಲ್ಲಿರುವ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ತೀವ್ರವಾದ ಅಂಟಿನ ಅಂಶದಿಂದಾಗಿ ಕಣ್ಣಿಗೆ ಗಮನಾರ್ಹ ಹಾನಿಯಾಗಿದೆ ಎಂದು ವೈದ್ಯರು ಹೇಳಿದ್ದಾರೆ, ಆದರೆ

ಪ್ರಮುಖ ಸುದ್ದಿ :-   ಉಪವಾಸ ಸತ್ಯಾಗ್ರಹದ 21ನೇ ದಿನ : ಜಂತರ್ ಮಂತರ್‌ನಿಂದ ಸೋನಂ ವಾಂಗ್ಚುಕ್‌ರನ್ನು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ಸಮಯಕ್ಕೆ ಸರಿಯಾಗಿ ವೈದ್ಯಕೀಯ ಚಿಕಿತ್ಸೆ ನೀಡಿದ್ದರಿಂದ ಮಕ್ಕಳ ದೃಷ್ಟಿ ಶಾಶ್ವತವಾಗಿ ನಷ್ಟವಾಗುವುದನ್ನು ತಡೆಯಬಹುದಾಗಿದೆ. ಒಬ್ಬ ವಿದ್ಯಾರ್ಥಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಇತರ ಏಳು ಮಂದಿಯನ್ನು ವೀಕ್ಷಣೆಯಲ್ಲಿ ಇರಿಸಲಾಗಿದೆ.
ನಿರ್ಲಕ್ಷ್ಯದ ಕಾರಣದಿಂದ ಕಂಧಮಲ್ ಜಿಲ್ಲಾಡಳಿತವು ಶಾಲೆಯ ಮುಖ್ಯೋಪಾಧ್ಯಾಯ ಮನೋರಂಜನ್ ಸಾಹು ಅವರನ್ನು ಅಮಾನತುಗೊಳಿಸಿದೆ. ಇಂತಹ ಘಟನೆ ಹೇಗೆ ಸಂಭವಿಸಿತು ಎಂಬುದನ್ನು ಪತ್ತೆ ಮಾಡಲು ಉನ್ನತ ಮಟ್ಟದ ತನಿಖೆಯನ್ನು ಪ್ರಾರಂಭಿಸಲಾಗಿದೆ.
ಜಿಲ್ಲಾ ಮಕ್ಕಳ ಕಲ್ಯಾಣ ಅಧಿಕಾರಿಯೊಬ್ಬರು ವಿದ್ಯಾರ್ಥಿಗಳನ್ನು ಪರಿಶೀಲಿಸಲು ಆಸ್ಪತ್ರೆಗೆ ಭೇಟಿ ನೀಡಿದರು. ಹೊಣೆಗಾರರೆಂದು ಕಂಡುಬಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement