ನಾಗ್ಪುರ : ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ; 15 ಸಾವು, 18 ಮಂದಿಗೆ ಗಾಯ

ಮುಂಬೈ: ನಾಗ್ಪುರ ನಗರದಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಕಲ್ಮೇಶ್ವರ ತಹಸಿಲ್‌ನ ರಾವುಲ್‌ಗಾಂವ್ ಗ್ರಾಮದ ಮದ್ದುಗುಂಡು ತಯಾರಿಕಾ ಕಂಪನಿಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 15 ಜನರು ಸಾವಿಗೀಡಾಗಿದ್ದಾರೆ ಮತ್ತು 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದುವರದಿಯಾಗಿದೆ.
ಸ್ಥಳೀಯ ನಿವಾಸಿಗಳ ಪ್ರಕಾರ, ಭಾನುವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಪ್ರಬಲ ಸ್ಫೋಟ ಸಂಭವಿಸಿದೆ. ಇದು ಕಾರ್ಖಾನೆಯ ‘ನೋನೆಲ್ ಕ್ರಿಂಪಿಂಗ್ ಪ್ಲಾಂಟ್’ ಪ್ರದೇಶದಲ್ಲಿ ಸರಣಿ ಸ್ಫೋಟಗಳು ಭಾರಿ ಬೆಂಕಿಗೆ ಕಾರಣವಾಯಿತು. ನಂತರ ಬೆಂಕಿಯು ಕಾರ್ಖಾನೆಯ ಪಕ್ಕದ ವಿಭಾಗಗಳಿಗೂ ಹರಡಿತು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಬೆಳಿಗ್ಗೆ 6 ಗಂಟೆಗೆ ಶಿಫ್ಟ್ ಆರಂಭವಾಗಿತ್ತು. ಘಟನೆ ನಡೆದಾಗ ಇಬ್ಬರು ಮೇಲ್ವಿಚಾರಕರ ಅಡಿಯಲ್ಲಿ ಸುಮಾರು 35 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ಕಂಪನಿಯು ಗಣಿಗಾರಿಕೆ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಬಳಸುವ ಡಿಟೋನೇಟರ್‌ಗಳು ಮತ್ತು ಸ್ಫೋಟಕ ಕಾರ್ಟ್ರಿಡ್ಜ್‌ಗಳು ಸೇರಿದಂತೆ ಕೈಗಾರಿಕಾ ಸ್ಫೋಟಕಗಳ ಪ್ರಮುಖ ತಯಾರಕ ಸಂಸ್ಥೆಯಾಗಿದೆ.
ಸ್ಥಳೀಯ ಶಾಸಕ ಚರಣಸಿಂಗ್ ಠಾಕೂರ್ ಅವರು ಸಾವಿನ ಸಂಖ್ಯೆಯನ್ನು ಖಚಿತಪಡಿಸಿದ್ದಾರೆ. ಕಾರ್ಖಾನೆಯು ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದೆ ಮತ್ತು ಕಾರ್ಮಿಕರಿಗೆ ಕೆಲಸಕ್ಕೆ ನಿಯೋಜಿಸುವ ಮೊದಲು ಸರಿಯಾದ ತರಬೇತಿ ನೀಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಕೇವಲ 23ನೇ ವಯಸ್ಸಿಗೆ 19 ಸರ್ಕಾರಿ ಪರೀಕ್ಷೆ ಪಾಸ್ ! ರಾಷ್ಟ್ರಪತಿಯಿಂದ 'ಅಟ್-ಹೋಮ್' ಗೌರವಕ್ಕೆ ಆಯ್ಕೆಯಾದ ಯುವತಿ

ರಕ್ಷಣಾ ಕಾರ್ಯಾಚರಣೆ ಮತ್ತು ತನಿಖೆ
ದಟ್ಟವಾದ ಹೊಗೆ ಮತ್ತು ಅವಶೇಷಗಳ ನಡುವೆ ಶೋಧ ಕಾರ್ಯ ಮುಂದುವರೆದಿದ್ದು, ಅಧಿಕಾರಿಗಳು ಸ್ಫೋಟದ ಕಾರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಅಗ್ನಿಶಾಮಕ ದಳ ಮತ್ತು ಕಲ್ಮೇಶ್ವರ ಪೊಲೀಸರು ತಕ್ಷಣವೇ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದ್ದಾರೆ. ಐಜಿಪಿ ಸಂದೀಪ ಪಾಟೀಲ, ಜಿಲ್ಲಾಧಿಕಾರಿ ವಿಪಿನ್ ಇಟಂಕರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಹರ್ಷ ಎ. ಪೋದ್ದಾರ ಅವರ ನೇತೃತ್ವದ ತಂಡ ಸ್ಥಳದಲ್ಲಿದ್ದು ಪರಿಶೀಲನೆ ನಡೆಸುತ್ತಿದೆ.
“ನಾವು ತಾಂತ್ರಿಕ ಮತ್ತು ವೈಜ್ಞಾನಿಕ ತನಿಖೆಯನ್ನು ಖಚಿತಪಡಿಸಿಕೊಳ್ಳುತ್ತಿದ್ದೇವೆ. ಹಿರಿಯ ಅಧಿಕಾರಿಗಳು ಕಾರ್ಯಾಚರಣೆ ಮತ್ತು ಮುಂದಿನ ಕ್ರಮಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ,” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement