ವೀಡಿಯೊ | ಚನ್ನಪಟ್ಟಣ : ಬೈಕ್‌ ಸವಾರನ ಮೇಲೆ ಕರಡಿ ದಾಳಿ

ರಾಮನಗರ: ರಾಮನಗರ (ಬೆಂಗಳೂರು ಗ್ರಾಮಾಂತರ) ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಕಾಡು ಕರಡಿಯೊಂದು ಜನವಸತಿ ಪ್ರದೇಶಕ್ಕೆ ನುಗ್ಗಿ, ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಘಟನೆ ನಡೆದ ಕೆಲವು ಗಂಟೆಗಳ ನಂತರ, ಗ್ರಾಮಸ್ಥರ ಗುಂಪೊಂದು ಕರಡಿಯನ್ನು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದೆ.
ಗ್ರಾಮಸ್ಥರು ನೀಡಿದ ಮಾಹಿತಿಯ ಪ್ರಕಾರ, ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರರ ಮೇಲೆ ಕರಡಿ ಏಕಾಏಕಿ ದಾಳಿಗೆ ಮುಂದಾಗಿದೆ.  ಗ್ರಾಮದ ಹೊರವಲಯದಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರ ಮೇಲೆ ಕರಡಿ ಇದ್ದಕ್ಕಿದ್ದಂತೆ ದಾಳಿ ಮಾಡಿದೆ ಎನ್ನಲಾಗಿದೆ.

ಅವರು ಹೇಗೋ ತಪ್ಪಿಸಿಕೊಂಡು ಓಡಿಹೋದರೂ, ಕರಡಿಯು ಬೈಕನ್ನು ಬಿಡದೆ ಅಲ್ಲಿಯೇ ಇತ್ತು. ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಘಟನೆಯಿಂದ ಗಾಬರಿಗೊಂಡ ಯುವಕರು ಗ್ರಾಮದ ಇತರರಿಗೆ ವಿಷಯ ಮುಟ್ಟಿಸಿದರು. ಕೆಲವೇ ನಿಮಿಷಗಳಲ್ಲಿ, ಗ್ರಾಮಸ್ಥರೆಲ್ಲರೂ ಬಲೆಗಳೊಂದಿಗೆ ಸಜ್ಜಾಗಿ ಸ್ಥಳಕ್ಕೆ ಧಾವಿಸಿದರು. ತಕ್ಷಣ ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಯಿತು. ನಂತರ ಕರಡಿಯನ್ನು ಬಲೆಯಲ್ಲಿ ಕೆಡವಿ ಸೆರೆ ಹಿಡಿಯಲಾಯಿತು.

 ಅರಣ್ಯ ಇಲಾಖೆ ಸಿಬ್ಬಂದಿ, ನಂತರ ಕರಡಿಯನ್ನು ವಶಕ್ಕೆ ಪಡೆದು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಿ ಪಶುವೈದ್ಯಕೀಯ ತಪಾಸಣೆಗೆ ಒಳಪಡಿಸಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement