ಚಿಂತೆ ಬೇಡ, ಭಾರತೀಯರು ಸುರಕ್ಷಿತ”: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಭರವಸೆ

ತೆಹ್ರಾನ್/ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಇರಾನ್ ರಾಯಭಾರ ಕಚೇರಿಯು ಭಾರತಕ್ಕೆ ಮಹತ್ವದ ಭರವಸೆ ನೀಡಿದೆ. ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಸಾಗುವ ಭಾರತದ ಹಡಗುಗಳು ಮತ್ತು ನಾಗರಿಕರ ಸುರಕ್ಷತೆಯ ಬಗ್ಗೆ ಯಾವುದೇ ಆತಂಕ ಬೇಡ ಎಂದು ಇರಾನ್ ಭರವಸೆ ನೀಡಿದೆ.
“ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ, ಚಿಂತಿಸುವ ಅಗತ್ಯವಿಲ್ಲ” ಎಂದು ಇರಾನ್ ರಾಯಭಾರ ಕಚೇರಿ ‘X’ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವಾಲಯವು ಇರಾನ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಭಾರತೀಯ ನೌಕೆಗಳ ಸುಗಮ ಸಂಚಾರಕ್ಕೆ ಆದ್ಯತೆ ನೀಡಿದ್ದಾರೆ.

ಹಾರ್ಮುಜ್ ಜಲಸಂಧಿ ಪರ್ಷಿಯನ್ ಕೊಲ್ಲಿಯನ್ನು ಓಮನ್ ಕೊಲ್ಲಿಯೊಂದಿಗೆ ಸಂಪರ್ಕಿಸುವ ಆಯಕಟ್ಟಿನ ಮಾರ್ಗವಾಗಿದೆ. ವಿಶ್ವದ ಬಹುತೇಕ ತೈಲ ಮತ್ತು ಅನಿಲ ಸಾಗಣೆ ಈ ಮಾರ್ಗದ ಮೂಲಕವೇ ನಡೆಯುತ್ತದೆ.
ಪ್ರಾದೇಶಿಕ ಶಾಂತಿಗಾಗಿ ಪ್ರಧಾನಿ ಮೋದಿ ಅವರು ಮಧ್ಯಪ್ರಾಚ್ಯದ ಇತರ ನಾಯಕರೊಂದಿಗೂ ಸತತವಾಗಿ ಮಾತುಕತೆ ನಡೆಸುತ್ತಿದ್ದಾರೆ. ಇರಾನ್‌ನ ತೈಲ ಅಥವಾ ನೈಸರ್ಗಿಕ ಸಂಪನ್ಮೂಲಗಳನ್ನು ನಿಯಂತ್ರಿಸುವುದು ನಮ್ಮ ಉದ್ದೇಶವಲ್ಲ, ಬದಲಾಗಿ ನಮ್ಮ ಮಿತ್ರರಾಷ್ಟ್ರಗಳನ್ನು ರಕ್ಷಿಸುವುದು ನಮ್ಮ ಗುರಿ ಎಂಬುದಾಗಿ ಅಮೆರಿಕ ಹೇಳಿದೆ.

ವಿಶ್ವದ ಇಂಧನ ಪೂರೈಕೆಯ ಸುಮಾರು ಶೇ. 20 ರಷ್ಟು ನಿರ್ವಹಿಸುವ ನಿರ್ಣಾಯಕ ಜಾಗತಿಕ ಹಡಗು ಕಾರಿಡಾರ್ ಆಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಫೆಬ್ರವರಿ 28 ರಂದು ಸಂಘರ್ಷ ಉಲ್ಬಣಗೊಂಡಾಗಿನಿಂದ ನಿರ್ಬಂಧಿತ ಸಂಚಾರವಿದೆ. ಜಲಸಂಧಿಗೆ ಪ್ರವೇಶವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಇರಾನ್, ಸೀಮಿತವಾದ ಹಡಗುಗಳಿಗೆ ಅನುಮತಿಸಿದೆ. ಮುಖ್ಯವಾಗಿ ಭಾರತ, ಚೀನಾ, ರಷ್ಯಾ, ಇರಾಕ್ ಮತ್ತು ಸೇರಿದಂತೆ “ಸ್ನೇಹಪರ ರಾಷ್ಟ್ರಗಳು” ಎಂದು ಕರೆಯುವ ದೇಶಗಳ ಹಡಗುಗಳ ಸಂಚಾರಕ್ಕೆ ಆದ್ಯತೆ ನೀಡಿದೆ.

ಪ್ರಮುಖ ಸುದ್ದಿ :-   8 ವರ್ಷಗಳ ಪ್ರೇಮದಲ್ಲಿ ಬಿರುಕು ; ಯುವತಿ ಆತ್ಮಹತ್ಯೆ, ಮೃತದೇಹಕ್ಕೆ ಪ್ರಿಯಕರ ಮಂಗಳಸೂತ್ರ ಕಟ್ಟಬೇಕು ಎಂದು ಕುಟುಂಬಸ್ಥರ ಪಟ್ಟು...

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement