ವಿಡಿಯೋ | ಶ್ರೀನಗರ ಗಾಲ್ಫ್ ಮೈದಾನಕ್ಕೆ ನುಗ್ಗಿ ಬಾವುಟ ಹೊತ್ತೊಯ್ದ ಕರಡಿಗಳು…!

ಶ್ರೀನಗರ : ಗಾಲ್ಫ್ ಮೈದಾನ ಪ್ರವೇಶಿಸಿದ ಎರಡು ದೈತ್ಯ ಕರಡಿಗಳು, ಕ್ರೀಡಾಂಗಣವನ್ನೇ ತಮ್ಮ ಆಟದ ಮೈದಾನವನ್ನಾಗಿ ಮಾಡಿಕೊಂಡ ವಿಚಿತ್ರ ಹಾಗೂ ತಮಾಷೆಯ ಘಟನೆಯೊಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ. ಶ್ರೀನಗರದ ವಿಶ್ವಪ್ರಸಿದ್ಧ ರಾಯಲ್ ಸ್ಪ್ರಿಂಗ್ಸ್ ಗಾಲ್ಫ್ ಕೋರ್ಸ್ (RSGC) ನಲ್ಲಿ ಗಾಲ್ಫ್ ಆಟಗಾರರು ಆಟದಲ್ಲಿ ಮಗ್ನರಾಗಿದ್ದಾಗ, ಅನಿರೀಕ್ಷಿತವಾಗಿ ಎರಡು ಕರಡಿಗಳು ಗಾಲ್ಫ್‌ ಮೈದಾನದೊಳಗೆ ಪ್ರವೇಶಿಸಿವೆ. ಅಲ್ಲಿ … Continued

ಆನ್‌ಲೈನ್ ಗೇಮಿಂಗ್‌ಗೆ ಲಗಾಮು: ಮೇ 1 ರಿಂದ ದೇಶಾದ್ಯಂತ ಕಟ್ಟುನಿಟ್ಟಿನ ನಿಯಮ ಜಾರಿ

ನವದೆಹಲಿ: ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಆನ್‌ಲೈನ್ ಗೇಮಿಂಗ್ ಕ್ಷೇತ್ರವನ್ನು ವ್ಯವಸ್ಥಿತವಾಗಿ ನಿಯಂತ್ರಿಸಲು ಮುಂದಾಗಿರುವ ಕೇಂದ್ರ ಸರ್ಕಾರವು, ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ-2025’ (Promotion and Regulation of Online Gaming Act, 2025)ರ ಅಡಿಯಲ್ಲಿ ಸಿದ್ಧಪಡಿಸಲಾದ ಹೊಸ ನಿಯಮಾವಳಿಗಳನ್ನು ಮೇ 1, 2026 ರಿಂದ ಜಾರಿಗೆ ತಂದಿದೆ. ಈ ಮೂಲಕ ಹಾನಿಕಾರಕ ಆನ್‌ಲೈನ್ … Continued

ಪಶ್ಚಿಮ ಬಂಗಾಳ ಚುನಾವಣೆ ; ಮತ ಎಣಿಕೆ ಸಿಬ್ಬಂದಿ ನೇಮಕ ವಿಚಾರ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ

ನವದೆಹಲಿ: ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಮತ ಎಣಿಕೆ ಸಿಬ್ಬಂದಿ ನೇಮಕಾತಿ ವಿಷಯದಲ್ಲಿ ಈಗ ಕಾನೂನು ಸಮರ ಶುರುವಾಗಿದೆ. ಮೇ 4ರಂದು ನಡೆಯಲಿರುವ ಮತ ಎಣಿಕೆ ಕಾರ್ಯಕ್ಕೆ ಕೇವಲ ಕೇಂದ್ರ ಸರ್ಕಾರ ಮತ್ತು ಸಾರ್ವಜನಿಕ ವಲಯದ ಉದ್ದಿಮೆಗಳ (PSU) ನೌಕರರನ್ನು ಮಾತ್ರ ಮೇಲ್ವಿಚಾರಕರು ಮತ್ತು ಸಹಾಯಕರನ್ನಾಗಿ ನೇಮಿಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ (TMC) … Continued

ಹೊನ್ನಾವರ : ಪಂಪ್ ಸೆಟ್ಟಿನ ವಿದ್ಯುತ್ ತಂತಿ ತಗುಲಿ 5 ವರ್ಷದ ಮಗು ಸಾವು

ಹೊನ್ನಾವರ : ಪಂಪ್ ಸೆಟ್ಟಿನ ವಿದ್ಯುತ್ ತಂತಿ ತಗುಲಿ ಐದು ವರ್ಷದ ಮಗು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ (Honnavar)ಹೊಸಪಟ್ಟಣದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಆಶಿಕಾ  ನಾಯ್ಕ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಪಂಪ್‌ಸೆಟ್‌ ಸ್ಟಾರ್ಟ್‌ ಮಾಡಿ ಮನೆ ಬಳಕೆಗೆ ನೀರು ತುಂಬಿಸುತ್ತಿರುವಾಗ ವಿದ್ಯುತ್ ತಂತಿಗೆ ಕಾಲು … Continued

ಹೋಟೆಲ್‌ ರೂಂನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳಾ ವೈದ್ಯರ ವಿಡಿಯೋ ಚಿತ್ರೀಕರಿಸಿದ ಶ್ರೀಲಂಕಾದ ಇಬ್ಬರು ಕ್ರಿಕೆಟಿಗರು ಬಂಧನ

ಕೊಲೊಂಬೊ: ಶ್ರೀಲಂಕಾ ಕ್ರಿಕೆಟಿಗರು ಮೈದಾನದ ಹೊರಗಿನ ಅಶಿಸ್ತಿನ ಕಾರಣಗಳಿಗಾಗಿ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ದೇಶದ ಇಬ್ಬರು 19 ವರ್ಷದೊಳಗಿನ (U-19) ಕ್ರಿಕೆಟಿಗರು ಖಾಸಗಿ ಹೋಟೆಲ್‌ನಲ್ಲಿ ಸ್ನಾನ ಮಾಡುತ್ತಿದ್ದ ಮಹಿಳಾ ವೈದ್ಯರ ವಿಡಿಯೋವನ್ನು ಗುಟ್ಟಾಗಿ ಚಿತ್ರೀಕರಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾರೆ. ವೃತ್ತಿಪರ ಸಮ್ಮೇಳನವೊಂದರಲ್ಲಿ ಭಾಗವಹಿಸಲು ಮಹಿಳಾ ವೈದ್ಯರು ಆ ಹೋಟೆಲ್‌ನಲ್ಲಿ ತಂಗಿದ್ದರು ಎನ್ನಲಾಗಿದೆ. ಪೊಲೀಸರ ಮಾಹಿತಿ … Continued

ವಿಶ್ವದ ಅತ್ಯುತ್ತಮ ಪ್ಯಾನ್‌ಕೇಕ್ ಪಟ್ಟಿಯಲ್ಲಿ ಭಾರತದ ದೋಸೆಗಳದ್ದೇ ದರ್ಬಾರ್ : ಮಸಾಲ ದೋಸೆಗೆ 6ನೇ ಸ್ಥಾನ : ಟಾಪ್ 100ರಲ್ಲಿ ಭಾರತದ 11 ತಿನಿಸುಗಳು…!

ನವದೆಹಲಿ: ಭಾರತೀಯ ಆಹಾರ ಪದ್ಧತಿಯಲ್ಲಿ ಅತ್ಯಂತ ಪ್ರಿಯವಾದ ಮಸಾಲೆ ದೋಸೆ ಈಗ ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಪ್ರಸಿದ್ಧ ಆಹಾರ ವಿಮರ್ಶಾ ಸಂಸ್ಥೆ ‘ಟೇಸ್ಟ್ ಅಟ್ಲಾಸ್’ (TasteAtlas) ಬಿಡುಗಡೆ ಮಾಡಿರುವ ವಿಶ್ವದ ಅತ್ಯುತ್ತಮ ಪ್ಯಾನ್‌ಕೇಕ್‌ಗಳ ಪಟ್ಟಿಯಲ್ಲಿ ಭಾರತದ ಮಸಾಲೆ ದೋಸೆ ವಿಶ್ವದಲ್ಲಿ 6ನೇ ಸ್ಥಾನ ಪಡೆದುಕೊಂಡಿದೆ. ಟಾಪ್ 100 ಪಟ್ಟಿಯಲ್ಲಿ 10 ಭಾರತೀಯ ತಿನಿಸುಗಳು! … Continued

ಅತ್ಯಾಚಾರ ಸಂತ್ರಸ್ತರ ಗರ್ಭಪಾತ ಕಾನೂನು ತಿದ್ದುಪಡಿಗೆ ಪರಿಗಣಿಸಿ; ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯರ ಗರ್ಭಪಾತದ ವಿಷಯದಲ್ಲಿ ಕಾನೂನು ಬದಲಾಗಬೇಕು ಮತ್ತು ಅಲ್ಲಿ ಗರ್ಭಧಾರಣೆಯ ಅವಧಿಯ ನಿರ್ಬಂಧಗಳು ಇರಬಾರದು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಸಮಾಜದ ಬದಲಾವಣೆಗೆ ತಕ್ಕಂತೆ ಕಾನೂನುಗಳು ರೂಪಾಂತರಗೊಳ್ಳಬೇಕು ಮತ್ತು ಸಂತ್ರಸ್ತೆಯರ ಘನತೆ ಹಾಗೂ ಮಾನಸಿಕ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ನ್ಯಾಯಾಲಯ ಪ್ರತಿಪಾದಿಸಿದೆ. 15 ವರ್ಷದ ಅತ್ಯಾಚಾರ ಸಂತ್ರಸ್ತ … Continued

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಹೆಚ್ಚಳ

ನವದೆಹಲಿ: ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ವಾಣಿಜ್ಯ ಬಳಕೆ (Commercial) ಸಿಲಿಂಡರ್ ಬೆಲೆಯನ್ನು ಸರಿಸುಮಾರು 993 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಆದರೆ, ಗೃಹ ಬಳಕೆ (Domestic) ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಫೆಬ್ರವರಿ 28 ರಂದು ಇರಾನ್ ಯುದ್ಧ ಆರಂಭವಾದಾಗಿನಿಂದ ಇದು ಮೂರನೇ ಬಾರಿಗೆ ಆಗುತ್ತಿರುವ ಬೆಲೆ ಏರಿಕೆಯಾಗಿದೆ. … Continued

ವಾಹನ ಚಲಾಯಿಸುತ್ತಿದ್ದಾಗಲೇ ಪ್ರಜ್ಞೆ ತಪ್ಪಿದ ಶಾಲಾ ಬಸ್‌ ಡ್ರೈವರ್‌: ಸಮಯಪ್ರಜ್ಞೆ ತೋರಿ ಹಲವರ ಪ್ರಾಣ ಉಳಿಸಿದ ವಿದ್ಯಾರ್ಥಿಗಳು…!

ಚಲಿಸುತ್ತಿದ್ದ ಶಾಲಾ ಬಸ್‌ನ ಚಾಲಕಿ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದರೂ, ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಸಮಯಪ್ರಜ್ಞೆ ಮೆರೆದು ಭಾರಿ ಅಪಘಾತವನ್ನು ತಪ್ಪಿಸಿರುವ ರೋಮಾಂಚನಕಾರಿ ಘಟನೆ ಅಮೆರಿಕದ ಮಿಸಿಸ್ಸಿಪ್ಪಿಯಲ್ಲಿ ನಡೆದಿದೆ. ಬುಧವಾರ ಹ್ಯಾನ್‌ಕಾಕ್ ಕೌಂಟಿ ಶಾಲೆಯ ಬಸ್ ಚಾಲಕಿ ಲಿಯಾ ಟೇಲರ್ ಅವರಿಗೆ ಬಸ್ ಚಲಾಯಿಸುತ್ತಿದ್ದಾಗಲೇ ತೀವ್ರವಾದ ಆಸ್ತಮಾ ಅಟ್ಯಾಕ್ (Asthma Attack) ಉಂಟಾಗಿದೆ. ಇದರಿಂದ ಅವರು … Continued