ಚಡಚಣ | ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ 6 ಮಂದಿಯ ಬರ್ಬರ ಹತ್ಯೆ

ವಿಜಯಪುರ: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ಘಟನೆ ಜಿಲ್ಲೆಯ ಚಡಚಣದ ಗೋವಿಂದಪುರದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ನಿರಾಳೆ ಕುಟುಂಬದವರ ಮೇಲೆ ದುಷ್ಕರ್ಮಿಗಳ ಗುಂಪು ಏಕಾಏಕಿ ದಾಳಿ ನಡೆಸಿ, ಕಣ್ಣಿಗೆ ಖಾರದ ಪುಡಿ ಎರಚಿ, ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿದೆ. ಎರಡು ಕುಟುಂಬಗಳ … Continued

ನಾಳೆ (ಮೇ 30) ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ : ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ ಆಯ್ಕೆ ಬಹುತೇಕ ಖಚಿತ

ಬೆಂಗಳೂರು : ಇಲ್ಲಿನ ವಿಧಾನ ಸೌಧದಲ್ಲಿ ಶನಿವಾರ (ಮೇ 30) ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಿಗದಿಯಾಗಿದ್ದು, ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಶಿವಕುಮಾರ ಅವರನ್ನು ಹೆಸರಿಸಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ … Continued

ಶಾಕಿಂಗ್‌ ಸುದ್ದಿ ; ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ-ಜೂನ್‌ನಲ್ಲಿ ಕ್ಷೀಣ ; ಶಾಖದ ಅಲೆ ತೀವ್ರ : ಹವಾಮಾನ ಇಲಾಖೆ

ನವದೆಹಲಿ: ದೇಶದ ಬಹುತೇಕ ಭಾಗಗಳು ಭೀಕರ ಬೇಸಿಗೆಯ ಬಿಸಿಲ ಧಗೆಯಿಂದ ತತ್ತರಿಸುತ್ತಿರುವ ಬೆನ್ನಲ್ಲೇ, ಸಾರ್ವಜನಿಕರಿಗೆ ಹಾಗೂ ಕೃಷಿ ವಲಯಕ್ಕೆ ಭಾರತೀಯ ಹವಾಮಾನ ಇಲಾಖೆ (IMD) ಮತ್ತೊಂದು ಆಘಾತಕಾರಿ ಸುದ್ದಿ ನೀಡಿದೆ. ಹವಾಮಾನ ಇಲಾಖೆಯು ಶುಕ್ರವಾರದ ತನ್ನ ಮುನ್ಸೂಚನೆಯಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ ಅವಧಿಯ ನೈಋತ್ಯ ಮುಂಗಾರು ಮಳೆಯ ಪ್ರಮಾಣವನ್ನು ಶೇ. 92 ರಿಂದ ಶೇ. 90ಕ್ಕೆ ಇಳಿಕೆ … Continued

ಚಂದ್ರನ ಮೇಲೆ ಇಸ್ರೋದ ಮಹತ್ವದ ಆವಿಷ್ಕಾರ ; ಚಂದ್ರನ ದಕ್ಷಿಣ ಧ್ರುವದಲ್ಲಿ ʼಹಿಮʼ ಪತ್ತೆ ಮಾಡಿದ ಚಂದ್ರಯಾನ-2; ಇದು ಯಾಕೆ ಮುಖ್ಯ?

ಅಹಮದಾಬಾದ್: ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ ಯೋಜನೆ ಮತ್ತೊಂದು ಐತಿಹಾಸಿಕ ವೈಜ್ಞಾನಿಕ ಮೈಲಿಗಲ್ಲನ್ನು ಸಾಧಿಸಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹಮ್ಮಿಕೊಂಡಿದ್ದ ಎರಡನೇ ಚಂದ್ರಯಾನ (ಚಂದ್ರಯಾನ-2) ಮಿಷನ್‌ನ ದತ್ತಾಂಶಗಳನ್ನು ವಿಶ್ಲೇಷಿಸಿರುವ ವಿಜ್ಞಾನಿಗಳು, ಚಂದ್ರನ ದಕ್ಷಿಣ ಧ್ರುವದ ಬಳಿಯ ಕುಳಿಗಳ (Craters) ಮೇಲ್ಮೈ ಅಡಿಯಲ್ಲಿ ನೀರ್ಗಲ್ಲು ಅಥವಾ ಹಿಮ (Water-ice) ಇರುವುದಕ್ಕೆ ಬಲವಾದ ಪುರಾವೆಗಳನ್ನು ಪತ್ತೆಹಚ್ಚಿದ್ದಾರೆ. ಸೌರಮಂಡಲದ … Continued

ಡಿಕೆ ಶಿವಕುಮಾರ ಉತ್ತರಾಧಿಕಾರಿ ಯಾರು? ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಸತೀಶ ಜಾರಕಿಹೊಳಿ ಫ್ರಂಟ್‌ ರನ್ನರ್..?

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಹಠಾತ್ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಕಮಿಟಿ (KPCC)ಯ  ಪುನರ್ರಚನೆಗೆ ಹೈಕಮಾಂಡ್ ಮುಂದಾಗಿದೆ. ಡಿ.ಕೆ. ಶಿವಕುಮಾರ  ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗುತ್ತಿರುವುದರಿಂದ ಅವರಿಂದ ತೆರವಾಗಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನಕ್ಕೆ ಇದೀಗ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ … Continued

ಗಾಜಾದ ಶೇ.70ರಷ್ಟು ಭಾಗ ವಶಪಡಿಸಿಕೊಳ್ಳಲು ಸೇನೆಗೆ ಇಸ್ರೇಲ್‌ ಪ್ರಧಾನಿ ಸೂಚನೆ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಿಚ್ಚು ದಿನದಿಂದ ದಿನಕ್ಕೆ ಮತ್ತಷ್ಟು ತೀವ್ರಗೊಳ್ಳುತ್ತಿದ್ದು, ಇಡೀ ಗಾಜಾ ಪಟ್ಟಿಯನ್ನು ಸಂಪೂರ್ಣವಾಗಿ ತನ್ನ ಹತೋಟಿಗೆ ತೆಗೆದುಕೊಳ್ಳಲು ಇಸ್ರೇಲ್ ಸಿದ್ಧತೆ ನಡೆಸಿದೆ. ಗಾಜಾ ಪಟ್ಟಿಯ ಒಟ್ಟು ಭೂಪ್ರದೇಶದ ಪೈಕಿ ಶೇಕಡಾ 70 ರಷ್ಟನ್ನು ತನ್ನ ಮಿಲಿಟರಿ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಯೋಜನೆಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಈಗಾಗಲೇ ಗಾಜಾದ ಬಹುತೇಕ ಜನಸಂಖ್ಯೆಯನ್ನು … Continued

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಅವರು ಇಂದು ಶುಕ್ರವಾರ ಅಂಗೀಕರಿಸಿದ್ದಾರೆ. ಬೇರೆ ವ್ಯವಸ್ಥೆ ಆಗುವವರೆಗೂ ಉಸ್ತುವಾರಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯಲಿದ್ದಾರೆ. ಅವರ … Continued

ಇರಾನ್-ಅಮೆರಿಕ ಶಾಂತಿ ಒಪ್ಪಂದದ ಕರಡು ಸಿದ್ಧ: ಇದಕ್ಕೆ ಟ್ರಂಪ್ ಅಂಕಿತವೊಂದೇ ಬಾಕಿ

ವಾಷಿಂಗ್ಟನ್/ತೆಹ್ರಾನ್‌ : ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ಇರಾನ್‌-ಅಮೆರಿಕ ಸೇನಾ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮವನ್ನು ವಿಸ್ತರಿಸಲು ಹಾಗೂ ಇರಾನಿನ ವಿವಾದಿತ ಪರಮಾಣು ಯೋಜನೆಯ ಕುರಿತು ಪುನಃ ಮಾತುಕತೆ ಆರಂಭಿಸಲು ಉಭಯ ದೇಶಗಳು ಪ್ರಾಥಮಿಕ ಒಪ್ಪಂದವೊಂದನ್ನು ಮಾಡಿಕೊಂಡಿವೆ. ಆದರೆ, ಈ ಪ್ರಸ್ತಾವನೆಗೆ ಅಮೆರಿಕ ಅಧ್ಯಕ್ಷ … Continued

ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡಿಂಗ್‌

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಮುಂದಿನ ಉತ್ತರಾಧಿಕಾರಿ ಆಯ್ಕೆ ಹಾಗೂ ಸಂಪುಟ ರಚನೆ ಕುರಿತು ಚರ್ಚಿಸಲು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿದ್ದ ವಿಶೇಷ ವಿಮಾನವು ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ದೆಹಲಿ ಬದಲು ಜೈಪುರದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ. ಗುರುವಾರ ಈ ಕುರಿತು ಅಧಿಕೃತ ಮಾಹಿತಿ ನೀಡಿರುವ … Continued

ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ನೇಮಿಸಿದ ಬಿಜೆಪಿ

ನವದೆಹಲಿ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು ಗುರುವಾರ ಪಕ್ಷದ ಸಂಘಟನಾತ್ಮಕ ವಿಭಾಗದಲ್ಲಿ ಮಹತ್ವದ ಬದಲಾವಣೆಗಳನ್ನು ಪ್ರಕಟಿಸಿದ್ದು, ದೇಶದ ಪ್ರಮುಖ ನಾಲ್ಕು ರಾಜ್ಯಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ. ಪಂಜಾಬ್, ಹರಿಯಾಣ, ದೆಹಲಿ ಮತ್ತು ತ್ರಿಪುರಾ ರಾಜ್ಯಗಳ ಬಿಜೆಪಿ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಈ ಕುರಿತು ಪಕ್ಷದ … Continued