13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆ ಶಿವಕುಮಾರ ; ಯಾರಿಗೆ ಯಾವ ಖಾತೆ ?

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ ಅವರು, ತಮ್ಮೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸೇರಿದಂತೆ ಒಟ್ಟು 13 ಸಚಿವರಿಗೆ ಗುರುವಾರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.  ಸಿಎಂ ಕಚೇರಿಯಿಂದ ಸಚಿವರ ಖಾತೆಯ ವಿವರಗಳನ್ನು ಅಂಕಿತಕ್ಕಾಗಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಳುಹಿಸಲಾಗಿದೆ ಎಂದು … Continued

ರಾಜ್ಯಸಭಾ ಚುನಾವಣೆ: 11 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಮುಂಬರುವ 2026ರ ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆ ಹಾಗೂ ಒಡಿಶಾ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗುರುವಾರ 11  ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ (CEC) ಸಭೆಯ ಬಳಿಕ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ ಸಿಂಗ್ ಅಭ್ಯರ್ಥಿಗಳ … Continued

ಡಿಎಂಕೆ-ಕಾಂಗ್ರೆಸ್ ಮೈತ್ರಿಯಲ್ಲಿ ಬಿರುಕು ಹೆಚ್ಚಳ : ಮಹತ್ವದ ‘ಇಂಡಿಯಾ’ ಮೈತ್ರಿಕೂಟದ ಸಭೆಗೆ ಸ್ಟಾಲಿನ್ ಗೈರು !

ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ದಕ್ಷಿಣ ಭಾರತದ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು, ವಿಪಕ್ಷಗಳ ರಾಷ್ಟ್ರೀಯ ಒಕ್ಕೂಟವಾದ ‘ಇಂಡಿಯಾ’ (INDIA)ಮೈತ್ರಿಕೂಟದಲ್ಲಿ ದೊಡ್ಡ ಬಿರುಕು ಮೂಡಿದೆ. ತಮಿಳುನಾಡಿನಲ್ಲಿ ಉಂಟಾದ ರಾಜಕೀಯ ಮರುಮೈತ್ರಿಯಿಂದ ಬೇಸತ್ತಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ (DMK), ಜೂನ್ 8 ರಂದು ನವದೆಹಲಿಯಲ್ಲಿ ಕರೆಯಲಾಗಿರುವ ‘ಇಂಡಿಯಾ’ ಮೈತ್ರಿಕೂಟದ ಮಹತ್ವದ ಸಭೆಯನ್ನು ಬಹಿಷ್ಕರಿಸಲು … Continued

ಟ್ರಂಪ್‌ಗೆ ಭಾರಿ ಹಿನ್ನಡೆ: ಇರಾನ್‌ನಿಂದ ಅಮೆರಿಕ ಸೇನೆ ವಾಪಸಾತಿಗೆ ಅಮೆರಿಕದ ಸಂಸತ್ತಿನಲ್ಲಿ ನಿರ್ಣಯ ಅಂಗೀಕಾರ !

ವಾಷಿಂಗ್ಟನ್, ಡಿಸಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧದ ಅಧಿಕಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ (ಕೆಳಮನೆ) ಬುಧವಾರ ಮಹತ್ವದ ನಿರ್ಣಯವೊಂದನ್ನು ಅಂಗೀಕರಿಸಿದೆ. ಇರಾನ್‌ನಲ್ಲಿ ನಡೆಯುತ್ತಿರುವ ಯುದ್ಧವನ್ನು ತಡೆಹಿಡಿಯುವ ಮತ್ತು ಕಾಂಗ್ರೆಸ್‌ನ (ಅಮೆರಿಕ ಸಂಸತ್ತು) ಅಧಿಕೃತ ಅನುಮೋದನೆ ಇಲ್ಲದೆ ಯಾವುದೇ ಮಿಲಿಟರಿ ಕ್ರಮ ಕೈಗೊಳ್ಳದಂತೆ ತಡೆಯುವ ಉದ್ದೇಶದಿಂದ, ಅಲ್ಲಿಂದ ಅಮೆರಿಕ … Continued

ಕೇರಳಕ್ಕೆ ಮುಂಗಾರು ಪ್ರವೇಶ: 8 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ತಿರುವನಂತಪುರಂ: ನೈಋತ್ಯ ಮುಂಗಾರು ಗುರುವಾರ ಕೇರಳವನ್ನು ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ದೃಢಪಡಿಸಿದೆ. ಇದು ವಾಡಿಕೆಗಿಂತ ಮೂರು ದಿನ ವಿಳಂಬವಾಗಿದೆ. ಮುಂಗಾರು ಮಾರುತಗಳ ಆಗಮನದಿಂದಾಗಿ ಕೇರಳ ಮತ್ತು ಲಕ್ಷದ್ವೀಪದಾದ್ಯಂತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್‌ … Continued

ದೆಹಲಿ ಹೊಟೇಲ್‌ ಅಗ್ನಿ ದುರಂತ : ಐಸಿಯುನಲ್ಲಿದ್ದ ತಂದೆ ಸನಿಹ ಇರಲು ಹೊಟೇಲ್‌ನಲ್ಲಿ ತಂಗಿದ್ದ ಸಿಎ ಕುಟುಂಬದ 8 ಮಂದಿ ಸಾವು

ನವದೆಹಲಿ: ಇಲ್ಲಿನ ದಕ್ಷಿಣ ದೆಹಲಿಯ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿರುವ ‘ಫ್ಲರಿಶ್ ಸ್ಟೇ’ (Flourish Stay) ಹೋಟೆಲ್‌ನಲ್ಲಿ ಬುಧವಾರ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಎಂಟು ಸದಸ್ಯರು ಸೇರಿದಂತೆ ಕನಿಷ್ಠ 21 ಜನರು ಜೀವಂತವಾಗಿ ದಹನವಾಗಿದ್ದಾರೆ. ಮೃತರ ಪೈಕಿ 12 ಮಂದಿ ವಿದೇಶಿ ಪ್ರಜೆಗಳಾಗಿದ್ದಾರೆ ಎಂದು ವರದಿಯಾಗಿದೆ. ಗುರುಗ್ರಾಮದ ಸೆಕ್ಟರ್ 46 … Continued

ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ: ಬೆಂಕಿ ಉಂಡೆಯಾದ ಟರ್ಮಿನಲ್, ವಿನಾಶದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕುವೈತ್ ಸಿಟಿ: ಇರಾನ್ ಮತ್ತು ಅಮೆರಿಕ ನಡುವಿನ ಕದನ ವಿರಾಮದ ನಡುವೆಯೇ ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರ ಮೇಲೆ ಭೀಕರ ಡ್ರೋನ್ ದಾಳಿ ನಡೆದಿದೆ. ಈ ಘಟನೆಯಲ್ಲಿ ಓರ್ವ ಭಾರತೀಯ ನಾಗರಿಕ ಮೃತಪಟ್ಟಿದ್ದು, ಕನಿಷ್ಠ 63 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ದಾಳಿಯ ಬೆನ್ನಲ್ಲೇ ಕುವೈತ್ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಸ್ಫೋಟದ ಸಿಸಿಟಿವಿ … Continued

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ನಾಲ್ವರಿಗೆ ಟಿಕೆಟ್‌ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಬುಧವಾರ (ಜೂನ್ 3) ತನ್ನ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿ. ಕೆ. ಹರಿಪ್ರಸಾದ, ತಿಪ್ಪಣ್ಣಪ್ಪ ಕಮಕನೂರ, ಪಿ. ವಿ. ಮೋಹನ ಮತ್ತು ಶಿವಣ್ಣ ಮಳವಳ್ಳಿ ಅವರು ಅಭ್ಯರ್ಥಿಗಳಾಗಲು ಅನುಮೋದನೆ ನೀಡಿದ್ದಾರೆ ಎಂದು … Continued

ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ; ಸಿಎಂ ಡಿಕೆ ಶಿವಕುಮಾರ ಘೋಷಣೆ

ಬೆಂಗಳೂರು: ಡಿಕೆ ಶಿವಕುಮಾರ ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ  ನಡೆದ ಮೊದಲು ಸಂಪುಟ ಸಭೆಯಲ್ಲಿ  ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧಾರ ತೆಗೆದುಕೊಂಡಿದ್ದಾರೆ. ಅಲ್ಲದೆ, 6  ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌, ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಸೇರಿದಂತೆ ಮಹತ್ವದ … Continued