ಅಣ್ಣಾಮಲೈ ಬೆನ್ನಲ್ಲೇ ಬಿಜೆಪಿಗೆ ಮತ್ತೊಂದು ಶಾಕ್ : ತಮಿಳುನಾಡಿನ ಇಬ್ಬರು ಹಿರಿಯ ನಾಯಕರು ಪಕ್ಷಕ್ಕೆ ಗುಡ್‌ಬೈ !

 ಚೆನ್ನೈ: ತಮಿಳುನಾಡು ಭಾರತೀಯ ಜನತಾ ಪಾರ್ಟಿಯಲ್ಲಿ (BJP) ತಲ್ಲಣ ಸೃಷ್ಟಿಯಾಗಿದೆ. ತಮಿಳುನಾಡು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ, ಪಕ್ಷದ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ ನೀಡಿ ಹೊರನಡೆದಿದ್ದು, ಬಿಜೆಪಿಗೆ ಭಾರಿ ಆಘಾತ ಎದುರಾಗಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಕರು ನಾಗರಾಜನ್ ಮತ್ತು ರಾಜ್ಯ ಕಾರ್ಯದರ್ಶಿ … Continued

ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಮನವೊಲಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ಹೈಕಮಾಂಡ್ ತೀರ್ಮಾನವನ್ನು ಅವರಿಗೆ ಮನವರಿಕೆ ಮಾಡಿಕೊಟ್ಟು, ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರುವುದಾಗಿ ಅವರು ಹೇಳಿದ್ದಾರೆ. ಬಿಟಿಎಂ ಲೇಔಟ್ ಶಾಸಕರಾದ ರಾಮಲಿಂಗಾರೆಡ್ಡಿ ಅವರು ತಾವು … Continued

ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ಗುಡ್‌ ಬೈ: ‘ವಿ ದ ಲೀಡರ್ಸ್’ ಆಂದೋಲನ ಘೋಷಣೆ

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಬಲ್ಲ ಮಹತ್ವದ ಬೆಳವಣಿಗೆಯೊಂದರಲ್ಲಿ, ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದೊಂದಿಗೆ (BJP) ಔಪಚಾರಿಕವಾಗಿ ಸಂಬಂಧ ಕಡಿದುಕೊಂಡಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರು ‘ವಿ ದ ಲೀಡರ್ಸ್’ (We the Leaders) ಹೆಸರಿನ ಹೊಸ ರಾಜಕೀಯ ಆಂದೋಲನವನ್ನು ಘೋಷಿಸುವ ಮೂಲಕ … Continued

ಜಗತ್ತಿನಲ್ಲೇ ಬೆಸ್ಟ್ 5ನೇ ತಲೆಮಾರಿನ ತಂತ್ರಜ್ಞಾನ” : Su-57 ಸ್ಟೆಲ್ತ್ ಯುದ್ಧ ವಿಮಾನ ಜಂಟಿ ಉತ್ಪಾದನೆಗೆ ಭಾರತಕ್ಕೆ ರಷ್ಯಾ ಅಧ್ಯಕ್ಷರ ದೊಡ್ಡ ಆಫರ್‌ !

ನವದೆಹಲಿ/ಮಾಸ್ಕೋ : ರಷ್ಯಾದ ಅತ್ಯಾಧುನಿಕ ಹಾಗೂ ಐದನೇ ತಲೆಮಾರಿನ (5th Generation) ರಹಸ್ಯ ಕಾರ್ಯಾಚರಣೆ ನಡೆಸಬಲ್ಲ ಸಾಮರ್ಥ್ಯದ ‘ಸುಖೋಯ್ ಸು-57’ (Sukhoi Su-57) ಸ್ಟೆಲ್ತ್ ಯುದ್ಧ ವಿಮಾನವನ್ನು ಭಾರತಕ್ಕೆ ನೀಡುವುದಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಆಫರ್ ನೀಡಿದ್ದಾರೆ. ಅಷ್ಟೇ ಅಲ್ಲದೆ, ಈ ಅತ್ಯಾಧುನಿಕ ವಿಮಾನವನ್ನು ಭಾರತದಲ್ಲೇ ಜಂಟಿಯಾಗಿ ಉತ್ಪಾದಿಸುವ ಪ್ರಸ್ತಾಪವನ್ನೂ ಅವರು ಮುಂದಿಟ್ಟಿದ್ದಾರೆ. ಇದು … Continued

ರಾಜ್ಯಸಭೆ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ (Rajya Sabha elections) ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಧಾನಸೌಧದಲ್ಲಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಕರ್ನಾಟಕ ವಿಧಾನಸಭೆಯಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ 3 ಸ್ಥಾನಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ವಕ್ತಾರ ಪವನ್ ಖೇರಾ, ಮನ್ಸೂರ್ ಅಲಿಖಾನ್ ಅವರನ್ನು ಅಭ್ಯರ್ಥಿಗಳಾಗಿ ಕಾಂಗ್ರೆಸ್ ಹೆಸರಿಸಿದೆ. ಖರ್ಗೆಯವರು ರಾಜ್ಯಸಭೆಯ ವಿರೋಧ ಪಕ್ಷದ … Continued

ಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !

ಬೆಂಗಳೂರು: ಬೆಂಗಳೂರು: ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತಾದ ಅಸಮಾಧಾನ ತೀವ್ರಗೊಳ್ಳುತ್ತಿರುವುದು ಸ್ಪಷ್ಟವಾಗುತ್ತಿದೆ. ಪ್ರಮುಖ ಖಾತೆ ಸಿಗದ ಕಾರಣಕ್ಕೆ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಈಗಾಗಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಆಘಾತ ಮೂಡಿಸಿದ ಬೆನ್ನಲ್ಲೇ ಮತ್ತೊಬ್ಬ ಹಿರಿಯ ನಾಯಕ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಕೂಡ ತಮಗೆ ನೀಡಿರುವ ಇಲಾಖೆಯ … Continued

ಕಚೇರಿಯಲ್ಲೇ ಸಹೋದ್ಯೋಗಿ ಯುವತಿಗೆ 20 ಬಾರಿ ಚಾಕುವಿನಿಂದ ಇರಿದು ಕೊಲೆ ; ನಂತರ ತನ್ನ ಗಂಟಲನ್ನೇ ಸೀಳಿಕೊಂಡ ಪಾಗಲ್‌ ಪ್ರೇಮಿ !

ನವದೆಹಲಿ: ಪಂಜಾಬ್‌ನ ಮೊಹಾಲಿಯಲ್ಲಿ ಅತ್ಯಂತ ಭೀಕರ ಮತ್ತು ನಡುಕ ತರಿಸುವ ಘಟನೆಯೊಂದು ನಡೆದಿದೆ. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಆಕೆಯ ಮಾಜಿ ಪ್ರಿಯಕರ ಎಂದು ನಂಬಲಾದ ಸಹೋದ್ಯೋಗಿ ಕಚೇರಿಯ ಒಳಗಡೆಯೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಯುವತಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿಯೂ ಸಹ ತನ್ನದೇ … Continued

ಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ

ಚೆನ್ನೈ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ತೀವ್ರ ಊಹಾಪೋಹಗಳಿಗೆ ಕೊನೆಗೂ ತೆರೆ ಬಿದ್ದಿದ್ದು, ತಮಿಳುನಾಡು ಬಿಜೆಪಿಯ ಪ್ರಭಾವಿ ನಾಯಕ ಕೆ. ಅಣ್ಣಾಮಲೈ ಅವರು ಶುಕ್ರವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಹಾಗೂ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಬಿಜೆಪಿ ಮುಖ್ಯಸ್ಥ ನಿತಿನ್ ನಬಿನ್ ಅಂಗೀಕರಿಸಿದ್ದಾರೆ. ಅಣ್ಣಾಮಲೈ ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಬಿಜೆಪಿ … Continued

ಶಿವಕುಮಾರ ಸರ್ಕಾರಕ್ಕೆ ಆರಂಭದಲ್ಲೇ ಶಾಕ್ : ಖಾತೆ ಹಂಚಿಕೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ ಬೆನ್ನಲ್ಲೇ ಡಿ.ಕೆ.ಶಿವಕುಮಾರ ನೇತೃತ್ವದ ಸರ್ಕಾರದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ತಮಗೆ ಹಂಚಿಕೆಯಾಗಿರುವ ಖಾತೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರು ಶುಕ್ರವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ. ಖಾತೆ ಹಂಚಿಕೆಯಾದ ಮರುದಿನ ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಮಲಿಂಗಾರೆಡ್ಡಿ, “ನಾನು ಯಾರ ಮೇಲೂ … Continued