ಮೀನಾಕ್ಷಿ ನಟರಾಜನ್ ನಾಮಪತ್ರ ವಿವಾದ ನಡುವೆಯೇ ಬಿಜೆಪಿಯ ಮೂರೂ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಭೋಪಾಲ್: ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ.  ಬಿಜೆಪಿಯ ರಜನೀಶ್ ಅಗರ್ವಾಲ್, ತರುಣ ಚುಗ್ ಮತ್ತು ಮಹೇಶ ಕೇವತ್ ಅವರ ಅವಿರೋಧ ಆಯ್ಕೆಯನ್ನು ದೃಢೀಕರಿಸಿ ಚುನಾವಣಾ ಆಯೋಗವು (EC) ಪ್ರಮಾಣಪತ್ರಗಳನ್ನು ವಿತರಿಸಿದೆ. ಕಾಂಗ್ರೆಸ್ ಪಕ್ಷವು ಈ ಚುನಾವಣಾ ಫಲಿತಾಂಶವನ್ನು ತಡೆಯಲು ರಾಜಕೀಯವಾಗಿ ಮತ್ತು ಕಾನೂನುಬದ್ಧವಾಗಿ ತೀವ್ರ ಪ್ರಯತ್ನಗಳನ್ನು ನಡೆಸಿತಾದರೂ ಅಂತಿಮವಾಗಿ … Continued

ಅಮೆರಿಕ ಪಡೆಗಳಿಂದ 4 ದಿನದಲ್ಲಿ ಭಾರತೀಯ ಸಿಬ್ಬಂದಿ ಇದ್ದ ಮೂರನೇ ಹಡಗಿನ ಮೇಲೆ ಕ್ಷಿಪಣಿ ದಾಳಿ

ನವದೆಹಲಿ/ವಾಷಿಂಗ್ಟನ್ : ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ಅಮೆರಿಕ ಪಡೆಗಳು ಒಮಾನ್ ಕೊಲ್ಲಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಮೂರನೇ ಬಾರಿಗೆ ಭಾರತೀಯ ಸಿಬ್ಬಂದಿಯನ್ನು ಹೊಂದಿದ್ದ ತೈಲ ಹಡಗಿನ ಮೇಲೆ ದಾಳಿ ನಡೆಸಿವೆ. ಗಿನಿ-ಬಿಸೌ ಧ್ವಜ ಹೊತ್ತ ‘ಎಂಟಿ ಜಲವೀರ್’ (M/T Jalveer) ಹಡಗಿನ ಮೇಲೆ ಅಮೆರಿಕದ ಯುದ್ಧವಿಮಾನವು ಎರಡು ‘ಹೆಲ್‌ಫೈರ್’ (Hellfire) ಕ್ಷಿಪಣಿಗಳನ್ನು ಉಡಾಯಿಸಿದೆ. ನೌಕೆಯಲ್ಲಿದ್ದ 20 … Continued

ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅವಿರೋಧ ಆಯ್ಕೆ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದಿಂದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಬಿಜೆಪಿ ಅಭ್ಯರ್ಥಿಯಾದ ಎಂ.ನಾಗರಾಜ್ ಅವಿರೋಧವಾಗಿ ಆಯ್ಕೆಯಾದವರು. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಒಟ್ಟು ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಈ ಪೈಕಿ ರಾಜ್ಯಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಬೋಜಣ್ಣ ಸೋಮಣ್ಣ … Continued

ಕ್ರಿಕೆಟ್‌ | ಭಾರತದ ತಂಡಕ್ಕೆ ಮತ್ತೊಬ್ಬ ದ್ರಾವಿಡ್‌ ಎಂಟ್ರಿ : ಭಾರತದ ಅಂಡರ್-19 ತಂಡಕ್ಕೆ ರಾಹುಲ್‌ ದ್ರಾವಿಡ್‌ ಕಿರಿಯ ಪುತ್ರ ಆಯ್ಕೆ

ಭಾರತೀಯ ಕ್ರಿಕೆಟ್‌ನ ದಿಗ್ಗಜ ಹಾಗೂ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ, ವಿಕೆಟ್‌ಕೀಪರ್-ಬ್ಯಾಟರ್ ಅನ್ವಯ ದ್ರಾವಿಡ್ ಮುಂದಿನ ತಿಂಗಳು ಶ್ರೀಲಂಕಾ ವಿರುದ್ಧ ನಡೆಯಲಿರುವ ಏಕದಿನ ಸರಣಿಗಾಗಿ ಪ್ರಕಟಿಸಲಾದ ಭಾರತ ಅಂಡರ್-19 ತಂಡಕ್ಕೆ ಆಯ್ಕೆಯಾಗಿದ್ದಾರೆ. ಎಸ್‌. ಶ್ರೀಧರನ್ ನೇತೃತ್ವದ ಜೂನಿಯರ್ ಕ್ರಿಕೆಟ್ ಆಯ್ಕೆ ಸಮಿತಿಯು ಗುರುವಾರ ಈ ಸರಣಿಗಾಗಿ ಏಕದಿನ ಮತ್ತು ಟೆಸ್ಟ್ (ಮಲ್ಟಿ-ಡೇ) … Continued

ಅಭಿಷೇಕ ಬೇಕೋ ಅಥವಾ ನಾವು ಬೇಕೋ ಆಯ್ಕೆ ಮಾಡಿ’ ; ಮಮತಾಗೆ ಗಡುವು ನೀಡಿದ ಆಪ್ತ ಕಲ್ಯಾಣ ಬ್ಯಾನರ್ಜಿ

 ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಭಿನ್ನಮತ ಈಗ ಸಾರ್ವಜನಿಕವಾಗಿ ಸ್ಫೋಟಗೊಂಡಿದೆ. ಇತ್ತೀಚಿನ ದಿನಗಳಲ್ಲಿ ಹಲವು ನಾಯಕರು ಮತ್ತು ಸಂಸದರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದರೂ, ಪಕ್ಷ ಹಾಗೂ ಮಮತಾ ಬ್ಯಾನರ್ಜಿಗೆ ನಿಷ್ಠರಾಗಿ ಉಳಿದಿದ್ದ ಹಿರಿಯ ಸಂಸದ ಕಲ್ಯಾಣ ಬ್ಯಾನರ್ಜಿ ಅವರು ಗುರುವಾರ ಮಮತಾ ಬ್ಯಾನರ್ಜಿ ಮತ್ತು … Continued

ಎಐ(AI) ಬಳಕೆ ಹೆಚ್ಚಳ ; ಭಾರತದಲ್ಲಿನ ಎಲ್ಲ ಉದ್ಯೋಗಿಗಳನ್ನು ವಜಾಗೊಳಿಸಿದ ಅಮೆರಿಕದ ‘ಓಪನ್‌ಡೋರ್’ ಕಂಪನಿ !

ನವದೆಹಲಿ: ಕೃತಕ ಬುದ್ಧಿಮತ್ತೆ ಜಾಗತಿಕ ಕಾರ್ಯಾಚರಣೆಗಳನ್ನು ಹೇಗೆ ಮರುರೂಪಿಸುತ್ತಿದೆ ಎಂಬುದನ್ನು ಎತ್ತಿ ತೋರಿಸುವ ಒಂದು ಕ್ರಮದಲ್ಲಿ, ಅಮೆರಿಕದ ರಿಯಲ್ ಎಸ್ಟೇಟ್ ತಂತ್ರಜ್ಞಾನ ಕಂಪನಿ ಓಪನ್‌ಡೋರ್ ಭಾರತ ಮೂಲದ ತನ್ನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ, ಇದು ಸುಮಾರು 250 ಉದ್ಯೋಗಿಗಳ ಮೇಲೆ ಪರಿಣಾಮ ಬೀರುತ್ತದೆ. ತನ್ನ ವ್ಯವಹಾರದ ಸ್ಥಿತ್ಯಂತರ ಕಾರ್ಯತಂತ್ರದ (business transformation strategy) ಭಾಗವಾಗಿ, ಕಂಪನಿಯ … Continued

ಒಮಾನ್ ಕರಾವಳಿಯಲ್ಲಿ ಹಡಗಿನ ಮೇಲೆ ಅಮೆರಿಕ ಪಡೆಗಳ ದಾಳಿ: ನಾಪತ್ತೆಯಾಗಿದ್ದ ಮೂವರು ಭಾರತೀಯ ನಾವಿಕರು ಸಾವು

ನವದೆಹಲಿ: ಒಮಾನ್ ಕರಾವಳಿಯ ಬಳಿ ಅಮೆರಿಕ ಸೇನಾ ಪಡೆಗಳು ನಡೆಸಿದ ಭೀಕರ ದಾಳಿಗೆ ತುತ್ತಾಗಿದ್ದ ‘ಎಂಟಿ ಸೆಟ್ಟೆಬೆಲ್ಲೊ’ (MT Settebello) ತೈಲ ಟ್ಯಾಂಕರ್‌ನಲ್ಲಿದ್ದ, ಆರಂಭದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದ ಮೂವರು ಭಾರತೀಯ ನಾವಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ವಿಷಯವನ್ನು ಕೇಂದ್ರ ಹಡಗು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನೋವಾಲ್ ಅವರು ಅಧಿಕೃತವಾಗಿ ದೃಢಪಡಿಸಿದ್ದು, ಮೃತಪಟ್ಟ ಮೂವರು … Continued

ರಾಜ್ಯಸಭಾ ಚುನಾವಣೆ : ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್

ನವದೆಹಲಿ: ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ತಮ್ಮ ನಾಮಪತ್ರ ತಿರಸ್ಕಾರಗೊಂಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ತೆಲಂಗಾಣದಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣವೊಂದರ ವಿವರಗಳನ್ನು ನಾಮಪತ್ರದಲ್ಲಿ “ಮುಚ್ಚಿಟ್ಟಿದ್ದಾರೆ” ಎಂಬ ಆರೋಪದ ಹಿನ್ನೆಲೆಯಲ್ಲಿ, ಚುನಾವಣಾ ಅಧಿಕಾರಿ (ರಿಟರ್ನಿಂಗ್ ಆಫೀಸರ್) ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ತಿರಸ್ಕರಿಸಿದ್ದರು. ತಮ್ಮ ನಾಮಪತ್ರ ಅನರ್ಹಗೊಳಿಸಿದ … Continued

ಮಮತಾಗೆ ಮತ್ತೊಂದು ಆಘಾತ : ಟಿಎಂಸಿಗೆ ಮತ್ತೊಬ್ಬ ರಾಜ್ಯಸಭಾ ಸದಸ್ಯ ರಾಜೀನಾಮೆ…!

ನವದೆಹಲಿ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಗುರುವಾರ ರಾಜ್ಯಸಭಾ ಸದಸ್ಯ ಪ್ರಕಾಶ ಬಾರೈಕ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮಮತಾ ಬ್ಯಾನರ್ಜಿಗೆ ಮತ್ತೊಂದು ಭಾರಿ ಆಘಾತ ನೀಡಿದ್ದಾರೆ. ಇವರು ಒಂದು ವಾರದೊಳಗೆ ಟಿಎಂಸಿ ತೊರೆದ ಮೂರನೇ ರಾಜ್ಯಸಭಾ ಸಂಸದರಾಗಿದ್ದಾರೆ. ಇದಕ್ಕೂ ಮುನ್ನ … Continued

ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟ ; ಕೆರೆಮನೆ ಶಿವಾನಂದ ಹೆಗಡೆ, ಅನಂತಕೃಷ್ಣ ಶರ್ಮ, ಜ್ಯೋತಿ ಹೆಗಡೆ ಸೇರಿ ಕರ್ನಾಟಕದ 6 ಸಾಧಕರಿಗೆ ಪ್ರಶಸ್ತಿ

ನವದೆಹಲಿ: ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಅತ್ಯುನ್ನತ ಫೆಲೋಶಿಪ್ (ಅಕಾಡೆಮಿ ರತ್ನ) ಹಾಗೂ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ 2024 ಮತ್ತು 2025ನೇ ಸಾಲಿನ ಪ್ರತಿಷ್ಠಿತ ‘ಅಕಾಡೆಮಿ ಪ್ರಶಸ್ತಿಗಳು’ ಹಾಗೂ ಫೆಲೊಶಿಪ್‌ಗಳನ್ನು ಪ್ರಕಟಿಸಲಾಗಿದೆ. ಒಟ್ಟು ಏಳು ಸಾಧಕರನ್ನು ಅಕಾಡೆಮಿ ಫೆಲೋಶಿಪ್‌ ಗೌರವಕ್ಕೆ ಭಾಜನರಾಗಿದ್ದಾರೆ ಹಾಗೂ 108 ಸಾಧಕರನ್ನು ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕದಿಂದ ಮೃದಂಗ … Continued