ಜೂನ್ ಮೊದಲಾರ್ಧದಲ್ಲಿ ಕೈಕೊಟ್ಟ ಮುಂಗಾರು ; ದೇಶಾದ್ಯಂತ ಶೇ. 32 ರಷ್ಟು ಮಳೆ ಕೊರತೆ; ಐಎಂಡಿ ಕಳವಳಕಾರಿ ವರದಿ

ನವದೆಹಲಿ: ಜೂನ್ 1ರಿಂದ ಆರಂಭವಾಗಿರುವ ಪ್ರಸಕ್ತ ಸಾಲಿನ ನೈಋತ್ಯ ಮುಂಗಾರು ಋತುವಿನ ಮೊದಲ ಹದಿನೈದು ದಿನಗಳಲ್ಲಿ ದೇಶಾದ್ಯಂತ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಜೂನ್ 1 ರಿಂದ ಜೂನ್ 15 ರವರೆಗಿನ ಅವಧಿಯಲ್ಲಿ ದೇಶದ ಶೇಕಡಾ 65 ರಷ್ಟು ಭಾಗದಲ್ಲಿ ಭಾರಿ ಮಳೆ ಕೊರತೆಯಾದೆ. ಈ ಅವಧಿಯಲ್ಲಿ ಭಾರತದಾದ್ಯಂತ 42.4 ಮಿ.ಮೀ ಮಳೆ ಸುರಿದಿದ್ದು, ಇದು ವಾಡಿಕೆ … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ವಿರೋಧಿಸಿ ಸರ್ಕಾರಕ್ಕೆ 10 ಸಾವಿರಕ್ಕೂ ಅಧಿಕ ಪತ್ರ ಸಲ್ಲಿಕೆ

 ಶಿರಸಿ: ಬೇಡ್ತಿ-ವರದಾ ಹಾಗೂ ಅಘನಾಶಿನಿ-ವೇದಾವತಿ ನದಿ ತಿರುವು ಯೋಜನೆ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಜನರು ಸೋಮವಾರ ಶಿರಸಿಯ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ಮುಖ್ಯಮಂತ್ರಿಗೆ ಸುಮಾರು 10 ಸಾವಿರಕ್ಕೂ ಅಧಿಕ ಪತ್ರಗಳನ್ನು ಸಲ್ಲಿಸಿದರು. ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳ ಸಮ್ಮುಖದಲ್ಲಿ ಸೇರಿದ್ದ ಸಾವಿರಾರು ಜನರು … Continued

‘ಹಿಂದೂ ಧರ್ಮ ನೋಂದಣಿಯಾಗಿಲ್ಲ’…: ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್

ನವದೆಹಲಿ/ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನನ್ನು ತಾನು ನೋಂದಾಯಿಸಿಕೊಳ್ಳಬೇಕು ಹಾಗೂ ತನ್ನ ಹಣಕಾಸು ಸೇರಿದಂತೆ ಇತರೆ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಬಹಿರಂಗ ಪತ್ರಕ್ಕೆ ತಾನು “ಪ್ರತಿಕ್ರಿಯಿಸುವುದಿಲ್ಲ” ಎಂದು ಆರ್‌ಎಸ್‌ಎಸ್ ಮುಖ್ಯಸ್ಥ (ಸರಸಂಘಚಾಲಕ) ಮೋಹನ ಭಾಗವತ್ ಸೋಮವಾರ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, “ಇದೆಲ್ಲವೂ … Continued

ಆಕ್ಷೇಪಾರ್ಹ ವಿಡಿಯೋ ವಿವಾದ: ಪಂಜಾಬ್ ಸಿಎಂ ಭಗವಂತ ಮಾನ್ ‘ಗುರು ದ್ರೋಹಿ’, ‘ಸಮುದಾಯ ವಿರೋಧಿ’ ಎಂದು ಅಕಾಲ ತಖ್ತ್ ಘೋಷಣೆ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ವಿರುದ್ಧ ಅತ್ಯಂತ ಕಠಿಣ ನಿಲುವು ತಳೆದಿರುವ ಸಿಖ್ ಧರ್ಮದ ಅತ್ಯುನ್ನತ ಧಾರ್ಮಿಕ ಪೀಠವಾದ ‘ಅಕಾಲ ತಖ್ತ್’, ಭಗವಂತ ಮಾನ್ ಅವರನ್ನು ‘ಗುರು ವಿರೋಧಿ’ ಎಂದು ಘೋಷಿಸಿದೆ. ಅಲ್ಲದೆ, ಸಿಖ್ ಸಮುದಾಯವು (ಪಂಥ) ಅವರ ಜೊತೆ ಯಾವುದೇ ರೀತಿಯ ಸಂಬಂಧವನ್ನು ಇಟ್ಟುಕೊಳ್ಳಬಾರದು ಎಂದು ಕರೆ ನೀಡಿದೆ. ಸಿಖ್ ಭಕ್ತರ ಕುರಿತು … Continued

ವಿಡಿಯೋ | ಪ್ರತಿಭಟನೆ ವೇಳೆ ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕನಿಗೆ ಪದೇ ಪದೇ ಕಪಾಳಮೋಕ್ಷ ಮಾಡಿದ ಕಿಡಿಗೇಡಿಗಳು

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಮುನ್ನವೇ ಕಾಕ್ರೋಚ್‌ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಜೈಪುರದ ಶಹೀದ್ ಸ್ಮಾರಕದಲ್ಲಿ ಮಧ್ಯಾಹ್ನ 3 ಗಂಟೆಗೆ ಶಾಂತಿಯುತ ಪ್ರತಿಭಟನೆ ನಡೆಸುವಂತೆ ಅಭಿಜೀತ್ ಕರೆ ನೀಡಿದ್ದರು. ಅದರಂತೆ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಲು ತೆರಳುತ್ತಿದ್ದಾಗ … Continued