ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ : ವಿಜಯೇಂದ್ರಗೆ ಬಿಜೆಪಿ ಹೈಕಮಾಂಡ್‌ ಬುಲಾವ್

ಬೆಂಗಳೂರು/ನವದೆಹಲಿ: ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಬಿಜೆಪಿ-ಜೆಡಿಎಸ್‌ ಪಕ್ಷಗಳ ಕ್ರಾಸ್ ವೋಟಿಂಗ್ (ಅಡ್ಡ ಮತದಾನ) ವಿಚಾರ ಇದೀಗ ತೀವ್ರ ರಾಜಕೀಯ ಕದನಕ್ಕೆ ಕಾರಣವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಇತರೆ ಪ್ರಮುಖ ನಾಯಕರಿಗೆ … Continued

ಕೋವಿಡ್ ಲೀಕ್‌ ಆರೋಪ ಹೊತ್ತ ಚೀನಾ ಲ್ಯಾಬ್‌ಗೆ ಅಮೆರಿಕ ವಿಜ್ಞಾನಿಯಿಂದ ಆರ್ಥಿಕ ನೆರವು? ಅಮೆರಿಕ ಗುಪ್ತಚರ ಮುಖ್ಯಸ್ಥೆಯಿಂದ ರಹಸ್ಯ ದಾಖಲೆ ಬಹಿರಂಗ

 ವಾಷಿಂಗ್ಟನ್: ಅಮೆರಿಕದ ಗುಪ್ತಚರ ವಿಭಾಗದ ಮುಖ್ಯಸ್ಥೆಯಾಗಿ (US Spy Chief) ತಮ್ಮ ಅಧಿಕಾರದ ಕೊನೆಯ ದಿನ ತುಳಸಿ ಗಬ್ಬಾರ್ಡ್ ಅವರು ಭಾರಿ ಸಂಚಲನ ಮೂಡಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕದ ‘ಲ್ಯಾಬ್-ಲೀಕ್’ (ಪ್ರಯೋಗಾಲಯದಿಂದ ಸೋರಿಕೆ) ಸಿದ್ಧಾಂತದ ಕೇಂದ್ರಬಿಂದುವಾಗಿರುವ ಚೀನಾದ ವುಹಾನ್ ಸಂಶೋಧನಾ ಪ್ರಯೋಗಾಲಯಕ್ಕೆ ಅಮೆರಿಕದ ಪ್ರಸಿದ್ಧ ವಿಜ್ಞಾನಿ ಡಾ. ಆಂಥೋನಿ ಫೌಸಿ ಹಣಕಾಸಿನ ನೆರವು ನೀಡಿದ್ದರು ಎಂದು ಗಬ್ಬಾರ್ಡ್ … Continued

ನೀಟ್ 2026 ಮರುಪರೀಕ್ಷೆ ; ಟೆಲಿಗ್ರಾಂ ತಾತ್ಕಾಲಿಕ ನಿರ್ಬಂಧ : ಕೇಂದ್ರದ ನಿರ್ಧಾರ ಎತ್ತಿ ಹಿಡಿದ ದೆಹಲಿ ಹೈಕೋರ್ಟ್

ನವದೆಹಲಿ : 2026ರ ನೀಟ್ (NEET-UG) ಮರುಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ತಪ್ಪುಮಾಹಿತಿ ಹರಡುವುದನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಟೆಲಿಗ್ರಾಂ ಮೆಸೆಜಿಂಗ್‌ ಪ್ಲಾಟ್‌ಫಾರ್ಮ್‌ (messaging platform) ಜೂನ್ 22ರವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕ್ರಮವನ್ನುಪ್ರಶ್ನಿಸಿ ಟೆಲಿಗ್ರಾಂ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರು ತೀರ್ಪು ಪ್ರಕಟಿಸಿ, ಮಾಹಿತಿ ತಂತ್ರಜ್ಞಾನ ಕಾಯ್ದೆಯ … Continued

ಇಸ್ರೇಲ್ ವೈಮಾನಿಕ ದಾಳಿ ಲೆಬನಾನಿನಲ್ಲಿ 18 ಮಂದಿ ಸಾವು ; ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ

ಜೆರುಸಲೇಮ್/ಬೈರೂತ್/ವಾಷಿಂಗ್ಟನ್ : ದಕ್ಷಿಣ ಲೆಬನಾನ್‌ ಪ್ರದೇಶದಲ್ಲಿ ಇಸ್ರೇಲ್‌ ಸೇನೆ ನಡೆಸುತ್ತಿರುವ ತೀವ್ರ ದಾಳಿಗಳು ಇರಾನ್ ಮತ್ತು ಅಮೆರಿಕ ನಡುವೆ ಇತ್ತೀಚೆಗೆ ಸಹಿ ಹಾಕಲಾದ ಯುದ್ಧ ಅಂತ್ಯ ಒಪ್ಪಂದದ ಭವಿಷ್ಯದ ಮೇಲೆ ಅನಿಶ್ಚಿತತೆಯ ಕಾರ್ಮೋಡಕ್ಕೆ ಕಾರಣವಾಗಿದೆ.  ಇಸ್ರೇಲ್ ಸೇನೆ ಶುಕ್ರವಾರ ಬೆಳಿಗ್ಗೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ತನ್ನ ಪಡೆಗಳು ರಾತ್ರಿಯಿಡೀ ದಕ್ಷಿಣ ಲೆಬನಾನ್‌ನ ವಿವಿಧ ಗುರಿಗಳ ಮೇಲೆ … Continued

ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ: ಬಿಜೆಪಿ-ಜೆಡಿಎಸ್ ಶಾಸಕರ ‘ಅಡ್ಡ ಮತದಾನ ’ ಕಾಂಗ್ರೆಸ್ ಕೈ ಹಿಡಿದದ್ದು ಹೇಗೆ ?

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶವು ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಸಂಭ್ರಮ ತಂದಿದ್ದರೆ, ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ತೀವ್ರ ಮುಜುಗರ ತಂದಿಟ್ಟಿದೆ. ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಏಳು ಸ್ಥಾನಗಳ ಪೈಕಿ ಐದರಲ್ಲಿ ಕಾಂಗ್ರೆಸ್ ಜಯಗಳಿಸಿದರೆ ಬಿಜೆಪಿ ಎರಡರಲ್ಲಿ ಜಯಗಳಿಸಿದೆ. ಆದರೆ, ಈ ಎಲ್ಲದರ ನಡುವೆ ವಿಪಕ್ಷಗಳ ಶಾಸಕರು ದೊಡ್ಡ ಮಟ್ಟದಲ್ಲಿ ‘ಕ್ರಾಸ್ ವೋಟಿಂಗ್’ (ಅಡ್ಡ … Continued

ಮುಂಗಾರು ಮಳೆ ತಡೆದದ್ದು ಬರೀ ‘ಎಲ್ ನಿನೊ’ ಮಾತ್ರವಲ್ಲ ; ಇತರ 5 ಜಾಗತಿಕ ಹವಾಮಾನ ವೈಪರೀತ್ಯಗಳೂ ಕಾರಣ…!

ನವದೆಹಲಿ : ಜೂನ್ 4 ರಂದು ಭಾರತಕ್ಕೆ ಸಕಾಲದಲ್ಲಿ ಆಗಮಿಸಿದ್ದ ನೈಋತ್ಯ ಮುಂಗಾರು ಮಾರುತಗಳು ಈಗ ದಿಢೀರನೆ ಸ್ಥಗಿತಗೊಂಡಿವೆ. ಆರಂಭದಲ್ಲಿ ಚುರುಕಾಗಿದ್ದ ಮುಂಗಾರುಈಗ ಸಂಪೂರ್ಣ ಕುಂಠಿತಗೊಂಡಿದ್ದು, ದೇಶಾದ್ಯಂತ ತೀವ್ರ ಮಳೆ ಕೊರತೆ ಎದುರಾಗಿದೆ. ಜೂನ್ 4 ರಿಂದ ಜೂನ್ 18 ರವರೆಗಿನ ಅವಧಿಯಲ್ಲಿ ದೇಶದಲ್ಲಿ ಶೇಕಡಾ 41 ರಷ್ಟು ಮಳೆ ಕೊರತೆಯಾಗಿದೆ ಎಂದು ಭಾರತೀಯ ಹವಾಮಾನ … Continued

ಜಾರ್ಖಂಡದಲ್ಲಿ ಲೆಕ್ಕಾಚಾರ ಉಲ್ಟಾ ; ಕಾಂಗ್ರೆಸ್‌ಗೆ ಭಾರಿ ಮುಖಭಂಗ : ಎನ್‌ಡಿಎ ಬೆಂಬಲಿತ ಪಕ್ಷೇತರ ಅಭ್ಯರ್ಥಿಗೆ ಗೆಲುವು

ರಾಂಚಿ: ಜಾರ್ಖಂಡ್‌ ವಿಧಾನಸಭೆಯಿಂದ ರಾಜ್ಯಸಭೆಯ ಎರಡು ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ಅಭ್ಯರ್ಥಿ ಬೈದ್ಯನಾಥ ರಾಮ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪರಿಮಳ ನತ್ವಾನಿ ಜಯಗಳಿಸಿದ್ದಾರೆ. ಈ ಫಲಿತಾಂಶವು ಇಂಡಿಯಾ ಮೈತ್ರಿಕೂಟದ ಒಳಗಿನ ಬಿರುಕುಗಳನ್ನು  ಬಹಿರಂಗಪಡಿಸಿತು. ಮಿಜೋರಾಂನಲ್ಲಿ ಝಡ್‌ಪಿಎಂ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. … Continued

14 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದು, ಒಟ್ಟು 14 ಮಂದಿ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಮತ್ತೆ ಕೆಲವರಿಗೆ ಹೆಚ್ಚುವರಿ ಹೊಣೆಗಾರಿಕೆಗಳನ್ನು ನೀಡಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯಪಾಲರ ಆದೇಶದ ಮೇರೆಗೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ ಅವರು ಈ ಅಧಿಕೃತ … Continued