ವಾಟ್ಸಾಪ್ ಜಾಗತಿಕ ಮುಖ್ಯಸ್ಥರಾಗಿ ಕ್ರೆಡ್ ಸಂಸ್ಥಾಪಕ ಕುನಾಲ್ ಶಾ ನೇಮಕ

 ಜಾಗತಿಕ ಟೆಕ್‌ ದೈತ್ಯ  ‘ಮೆಟಾ ಪ್ಲಾಟ್‌ಫಾರ್ಮ್ಸ್’ ಭಾರತೀಯ ಫಿನ್‌ಟೆಕ್ ಸಂಸ್ಥೆಯಾದ ‘ಕ್ರೆಡ್’ (CRED) ನಲ್ಲಿ ಸರಣಿ-ಹೆಚ್ (Series H) ಹೂಡಿಕೆ ಸುತ್ತಿನ ಭಾಗವಾಗಿ ಬರೋಬ್ಬರಿ 900 ಮಿಲಿಯನ್ ಡಾಲರ್ (ಸುಮಾರು ₹8,550 ಕೋಟಿ) ಭಾರಿ ಹೂಡಿಕೆ ಮಾಡಿದೆ. ಈ ಐತಿಹಾಸಿಕ ಒಪ್ಪಂದದ ಬೆನ್ನಲ್ಲೇ ಕ್ರೆಡ್ ಸಂಸ್ಥಾಪಕ ಕುನಾಲ್ ಶಾ ಅವರು ವಾಟ್ಸಾಪ್‌ನ ಜಾಗತಿಕ ನೂತನ ಮುಖ್ಯಸ್ಥರಾಗಿ … Continued

ಕತಾರ್ ಅನಿಲ ಘಟಕದಲ್ಲಿ ಭೀಕರ ಸ್ಫೋಟ, ಭಾರತದ ಕಾರ್ಮಿಕರೂ ಸೇರಿ 13 ಸಾವು, 66 ಜನರಿಗೆ ಗಾಯ

ದೋಹಾ: ಕತಾರ್‌ನ ಆಯಕಟ್ಟಿನ ಇಂಧನ ಕೇಂದ್ರವಾದ ರಾಸ್ ಲಫ್ಲಾನ್ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (LNG) ಸಂಕೀರ್ಣದಲ್ಲಿ ಭಾನುವಾರ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 13 ಮಂದಿ ಸಾವಿಗೀಡಾಗಿದ್ದು, 66ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಪೈಕಿ ಭಾರತೀಯ ಮೂಲದ ನಾಗರಿಕರೂ ಸೇರಿದ್ದಾರೆ ಎಂದು ಕತಾರ್ ಸರ್ಕಾರ ಅಧಿಕೃತವಾಗಿ ದೃಢಪಡಿಸಿದೆ. ಈ ವರ್ಷದ ಆರಂಭದಲ್ಲಿ ಇರಾನ್ … Continued

ಉದ್ಧವ್‌ ಠಾಕ್ರೆಗೆ ಮಹಾ ಶಾಕ್ : ಶಿಂದೆ ಪಾಳಯ ಸೇರಿದ ಪಕ್ಷದ ಆರು ಬಂಡಾಯ ಸಂಸದರು !

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ, ಶಿವಸೇನಾ (ಯುಬಿಟಿ) ಪಕ್ಷದ ಆರೂ ಜನ ಬಂಡಾಯ ಸಂಸದರು ಸೋಮವಾರ ಮುಂಬೈನಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಆಡಳಿತಾರೂಢ ಶಿವಸೇನೆಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದು ಉದ್ಧವ್ ಠಾಕ್ರೆ ಬಣಕ್ಕೆ ಬಿದ್ದ ಬಲವಾದ ಆಘಾತವಾಗಿದೆ. ಮುಂಬೈನಲ್ಲಿ  ಸೋಮವಾರ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ … Continued

ಭೀಕರ ಅಗ್ನಿ ದುರಂತ : ಕೋಚಿಂಗ್ ಸೆಂಟರ್‌ನಲ್ಲಿ 14 ಮಂದಿ ಸಜೀವ ದಹನ

ಲಕ್ನೋ: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಸೋಮವಾರ ಮಧ್ಯಾಹ್ನ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ವಾಣಿಜ್ಯ ಸಂಕೀರ್ಣವೊಂದರಲ್ಲಿ ಕಾಣಿಸಿಕೊಂಡ ಭಾರೀ ಬೆಂಕಿ ಅವಘಡದಲ್ಲಿ ಕನಿಷ್ಠ 14 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಬೆಂಕಿ ಅನಾಹುತದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಮತ್ತು ಬೆಂಕಿ ನಂದಿಸಲು ಹರಸಾಹಸ ಪಡಲಾಗುತ್ತಿದ್ದು, ಬೃಹತ್ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಫೈರ್ ಬ್ರಿಗೇಡ್ ಇಲಾಖೆಯ ಮಾಹಿತಿ … Continued

ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆ : ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಜಯ ; ಒಂದೇ ಒಂದು ಸ್ಥಾನ ಗೆಲ್ಲದ ವಿಪಕ್ಷಗಳು…!

ಮುಂಬೈ: ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಒಟ್ಟು ಘೋಷಣೆಯಾದ 17 ಸ್ಥಾನಗಳ ಪೈಕಿ 16 ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಮೈತ್ರಿಕೂಟವು ಕೌನ್ಸಿಲ್‌ನಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ಜೂನ್ 18 ರಂದು 17 ಸ್ಥಾನಗಳಿಗೆ ಮತದಾನ ನಡೆದಿತ್ತು. ಆದರೆ, ಮತದಾನಕ್ಕೂ ಮುನ್ನವೇ ಮಹಾಯುತಿ ಮೈತ್ರಿಕೂಟದ ಆರು ಅಭ್ಯರ್ಥಿಗಳು ಅವಿರೋಧವಾಗಿ … Continued

ಬ್ರಿಟನ್‌ನಲ್ಲಿ ರಾಜಕೀಯ ಬಿಕ್ಕಟ್ಟು : ಪ್ರಧಾನಿ ಹುದ್ದೆಗೆ ಕೀರ್ ಸ್ಟಾರ್ಮರ್ ರಾಜೀನಾಮೆ ಘೋಷಣೆ !

ಲಂಡನ್: ಬ್ರಿಟನ್ ರಾಜಕೀಯದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದ್ದು, ಆಡಳಿತಾರೂಢ ಲೇಬರ್ ಪಕ್ಷದ ತೀವ್ರ ಒತ್ತಡಕ್ಕೆ ಮಣಿದಿರುವ ಬ್ರಿಟನ್‌ ಪ್ರಧಾನಿ ಕೀರ್ ಸ್ಟಾರ್ಮರ್ ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇದರೊಂದಿಗೆ ಕಳೆದ ಒಂದು ದಶಕದಲ್ಲಿ ಬ್ರಿಟನ್ ತನ್ನ ಏಳನೇ ಪ್ರಧಾನಿಯನ್ನು ಕಾಣಲು ಸಜ್ಜಾಗಿದೆ. ಪ್ರಧಾನಿ ಹುದ್ದೆಯ ಜೊತೆಗೆ ಲೇಬರ್ ಪಕ್ಷದ ನಾಯಕತ್ವಕ್ಕೂ ರಾಜೀನಾಮೆ … Continued