ಕೇಂದ್ರದಿಂದ ಗುಡ್‌ನ್ಯೂಸ್ ; ವಾಣಿಜ್ಯ ಬಳಕೆ ಎಲ್‌ಪಿಜಿ ಮೇಲಿನ ನಿರ್ಬಂಧ ತೆಗೆದುಹಾಕಿದ ಸರ್ಕಾರ ; ಪೂರೈಕೆ ಸಹಜ ಸ್ಥಿತಿಗೆ

ನವದೆಹಲಿ: ಇರಾನ್‌-ಅಮೆರಿಕ ಸಂಘರ್ಷದ ಕಾರಣ ತಲೆದೋರಿದ್ದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ (ಅಡುಗೆ ಅನಿಲ) ಮೇಲೆ ಹೇರಲಾಗಿದ್ದ ಎಲ್ಲಾ ನಿರ್ಬಂಧಗಳನ್ನು ಕೇಂದ್ರ ಸರ್ಕಾರವು ಗುರುವಾರ ತೆಗೆದುಹಾಕಿದೆ. ದೇಶೀಯ ಉತ್ಪಾದನೆಯಲ್ಲಿನ ಸುಧಾರಣೆ ಹಾಗೂ ಆಮದು ಮಾಡಿಕೊಳ್ಳಲಾದ ಎಲ್‌ಪಿಜಿ ಹೊತ್ತ ಹಡಗುಗಳು ಶೀಘ್ರದಲ್ಲೇ ಭಾರತಕ್ಕೆ ತಲುಪಲಿರುವ ಹಿನ್ನೆಲೆಯಲ್ಲಿ, ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಇರಾನ್‌ ಯುದ್ಧದ ಮೊದಲಿಗೆ ಇದ್ದ … Continued

ಇ.ಡಿ.ದಾಳಿ ; ಮಂಜುನಾಥ, ಆಪ್ತರ ಬಳಿ ₹5.5 ಕೋಟಿ ನಗದು, ₹7.8 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆ…!

ಬೆಂಗಳೂರು : ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಹಾಗೂ ಇತರ ಅಧಿಕಾರಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ನಡೆಸಿದ್ದ ದಾಳಿ ಅಂತ್ಯವಾಗಿದ್ದು ಸುಮಾರು 13 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಈ ಬಗ್ಗೆ ಸಮಗ್ರ ಮಾಹಿತಿ ಬಿಡುಗಡೆ ಮಾಡಿದ್ದಾರೆ. ಬೆಳಗಾವಿ … Continued

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿ ಸುದ್ದಿ ; ಕರ್ನಾಟಕದ 1.3 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಕೇಂದ್ರ ಸರ್ಕಾರ ಗ್ರೀನ್‌ ಸಿಗ್ನಲ್‌

ಬೆಂಗಳೂರು/ನವದೆಹಲಿ: ಕರ್ನಾಟಕದ ಮಾವು ಬೆಳೆಗಾರರ ತೀವ್ರ ಸಂಕಷ್ಟಕ್ಕೆ ಕೇಂದ್ರ ಸರ್ಕಾರವು ಸ್ಪಂದಿಸಿದೆ. ರಾಜ್ಯದ ಪ್ರಮುಖ ಮಾವು ಉತ್ಪಾದನಾ ವಲಯವಾದ ಕೋಲಾರ-ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧೆಡೆ ಉಂಟಾಗಿದ್ದ ಬೆಲೆ ಕುಸಿತ ಹಾಗೂ ರೈತರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (MIS) ಅಡಿಯಲ್ಲಿ 1.3 ಲಕ್ಷ ಮೆಟ್ರಿಕ್ ಟನ್ (MT) ತೋತಾಪುರಿ ತಳಿಯ ಮಾವನ್ನು ಎಂಐಪಿ (MIP) ಖರೀದಿಸಲು … Continued

ಪುಸ್ತಕಕ್ಕೆ ‘ಕೃಷ್ಣಾ’ ಎಂದು ಹೆಸರಿಟ್ಟಿದ್ದಕ್ಕೆ ಎನ್‌ಸಿಇಆರ್‌ಟಿ ಸ್ಪಷ್ಟನೆ

ನವದೆಹಲಿ: 6ನೇ ತರಗತಿಯ ಕನ್ನಡ (ಆರ್‌3) ಪಠ್ಯಪುಸ್ತಕದ ಶೀರ್ಷಿಕೆ ಮತ್ತು ಅದರಲ್ಲಿನ ವಿಷಯಗಳ ಕುರಿತು ಮಾಧ್ಯಮಗಳ ಕೆಲವು ವಲಯಗಳಲ್ಲಿ ವ್ಯಕ್ತವಾಗಿದ್ದ ಕಳವಳ ಹಾಗೂ ವಿರೋಧಗಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸ್ಪಷ್ಟನೆ ನೀಡಿದೆ. ಭಾಷಾ ಪಠ್ಯಪುಸ್ತಕಗಳಿಗೆ ಭಾರತದ ನದಿಗಳ ಹೆಸರನ್ನಿಡುವ ತನ್ನ ನೀತಿಯನ್ನೇ ಈ ಪುಸ್ತಕಕ್ಕೂ ಅನುಸರಿಸಲಾಗಿದೆ. ಮತ್ತು ಪಠ್ಯದ ವಿಷಯವು … Continued

ಪೋಕ್ಸೊ ಪ್ರಕರಣ ; ವಚನಾನಂದ ಶ್ರೀಗಳ ನಿರೀಕ್ಷಣಾ ಜಾಮೀನು ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ದಾವಣಗೆರೆಯ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ವಿಚಾರಣಾಧೀನ ನ್ಯಾಯಾಲಯವು ಎಫ್‌ಐಆರ್‌ ದಾಖಲಾಗುವುದಕ್ಕೂ ಮುನ್ನ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ಆರೋಪಿಯಾಗಿರುವ ಸ್ವಾಮೀಜಿಗೆ ಪ್ರಕರಣ ದಾಖಲಾಗುವುದಕ್ಕೂ ಒಂದು ವಾರ ಮುಂಚಿತವಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ದಾವಣಗೆರೆಯ ವಿಚಾರಣಾಧೀನ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು … Continued

ನಟಿ ಕೃಷಿ ತಾಪಂಡ ಬೆಂಗಳೂರು ನಿವಾಸದಲ್ಲಿ ಉದ್ಯಮಿ ಶವವಾಗಿ ಪತ್ತೆ

ಬೆಂಗಳೂರು: ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿರುವ ಕನ್ನಡ ಚಿತ್ರರಂಗದ ಖ್ಯಾತ ನಟಿ ಕೃಷಿ ತಾಪಂಡ ಅವರ ನಿವಾಸದಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ ಎಂದು ಗುರುವಾರ ವರದಿಯಾಗಿದೆ. ಮೃತರನ್ನು ವೈಶಾಕ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬುಧವಾರ ರಾತ್ರಿ ಸುಮಾರು 8:30ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಸಮಯದಲ್ಲಿ ನಟಿ ಕೃಷಿ ತಾಪಂಡ … Continued

ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ ; ಯಾರಿಗೆ ಯಾವ ಜಿಲ್ಲೆ ; ಇಲ್ಲಿದೆ ವಿವರ

ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ (DK Shivakumar) ಅಧಿಕಾರ ಸ್ವೀಕರಿಸಿದ 3 ವಾರಗಳ ಬಳಿಕ ಇದೀಗ ಸಚಿವರನ್ನು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಲಾಗಿದೆ. ಮಳೆಗಾಲದ ತುರ್ತು ಪರಿಸ್ಥಿತಿ ಮತ್ತು ಪ್ರವಾಹ ನಿರ್ವಹಣೆಗಾಗಿ ಅವರು ತಾತ್ಕಾಲಿಕವಾಗಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ … Continued

ಎನ್‌ಸಿಇಆರ್‌ಟಿ ಮಹತ್ವದ ನಿರ್ಧಾರ; 9ನೇ ತರಗತಿ ಪಠ್ಯಪುಸ್ತಕದಲ್ಲಿ ‘ತುರ್ತು ಪರಿಸ್ಥಿತಿ’ ವಿಷಯ ಸೇರ್ಪಡೆ

ನವದೆಹಲಿ: ಭಾರತದಲ್ಲಿ ತುರ್ತು ಪರಿಸ್ಥಿತಿ (Emergency) ಹೇರಿಕೆಯಾಗಿ 50 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಮೊದಲ ಬಾರಿಗೆ ಈ ವಿಷಯವನ್ನು 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಅಳವಡಿಸಿದೆ. “ಅಂಡರ್‌ಸ್ಟ್ಯಾಂಡಿಂಗ್ ಸೊಸೈಟಿ: ಇಂಡಿಯಾ ಆಂಡ್ ಬಿಯಾಂಡ್” (Understanding Society: India and Beyond) ಹೆಸರಿನ ಈ ಹೊಸ … Continued

ಪಾಸ್‌ಪೋರ್ಟ್‌ ಪೌರತ್ವದ ದಾಖಲೆಯಲ್ಲ : ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ನವದೆಹಲಿ: ಪಾಸ್‌ಪೋರ್ಟ್ ಅನ್ನು ಪೌರತ್ವದ ದೃಢವಾದ ಸಾಕ್ಷ್ಯವೆಂದು ಪರಿಗಣಿಸುವ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚುತ್ತಿರುವ ಗೊಂದಲದ ನಡುವೆ, ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಮಹತ್ವದ ಸ್ಪಷ್ಟನೆ ನೀಡಿದೆ. ಭಾರತೀಯ ಪಾಸ್‌ಪೋರ್ಟ್ ಅನ್ನು ಕೇವಲ ಅಂತಾರಾಷ್ಟ್ರೀಯ ಪ್ರಯಾಣಕ್ಕಾಗಿ ಬಳಸುವ ದಾಖಲೆಯಾಗಿ ಪರಿಗಣಿಸಬೇಕು; ಅದನ್ನು ಭಾರತೀಯ ಪೌರತ್ವದ ಅಂತಿಮ ಮತ್ತು ನಿರ್ಣಾಯಕ ದಾಖಲಯೆಂದು ಪರಿಗಣಿಸಬಾರದು ಎಂದು ಸಚಿವಾಲಯ ತಿಳಿಸಿದೆ. ಭಾರತದ … Continued

ಟ್ರಸ್ಟ್ ಹೆಸರಲ್ಲಿ ‘ಜಮೀನು ಲೂಟಿ’: ಖರ್ಗೆ ಕುಟುಂಬದ ವಿರುದ್ಧ ಬಿಜೆಪಿ ಗಂಭೀರ ಆರೋಪ

ಟ್ರಸ್ಟ್ ಹೆಸರಲ್ಲಿ ಖರ್ಗೆ ಕುಟುಂಬದಿಂದ ಕರ್ನಾಟಕದಲ್ಲಿ ‘ಭೂ ಕಬಳಿಕೆ’ : ಬಿಜೆಪಿ ಗಂಭೀರ ಆರೋಪ ನವದೆಹಲಿ : ಕಾಂಗೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ತಮ್ಮ “ಅಧಿಕಾರ ಮತ್ತು ಪ್ರಭಾವ”ವನ್ನು ದುರುಪಯೋಗಪಡಿಸಿಕೊಂಡು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಬುಧವಾರ ಆರೋಪಿಸಿರುವ ಬಿಜೆಪಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ … Continued