ಪೋಕ್ಸೊ ಪ್ರಕರಣ ; ವಚನಾನಂದ ಶ್ರೀಗಳ ನಿರೀಕ್ಷಣಾ ಜಾಮೀನು ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ದಾವಣಗೆರೆಯ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ವಿಚಾರಣಾಧೀನ ನ್ಯಾಯಾಲಯವು ಎಫ್‌ಐಆರ್‌ ದಾಖಲಾಗುವುದಕ್ಕೂ ಮುನ್ನ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ.
ಆರೋಪಿಯಾಗಿರುವ ಸ್ವಾಮೀಜಿಗೆ ಪ್ರಕರಣ ದಾಖಲಾಗುವುದಕ್ಕೂ ಒಂದು ವಾರ ಮುಂಚಿತವಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ದಾವಣಗೆರೆಯ ವಿಚಾರಣಾಧೀನ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಅಪ್ರಾಪ್ತ ಬಾಲಕನ ಸಂಬಂಧಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಈಗ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.

ವರದಿಯ ಪ್ರಕಾರ, ಮೂರು ವಾರ ನಿರೀಕ್ಷಣಾ ಜಾಮೀನು ಮುಂದುವರಿಸಿದ್ದು, ಅದರೊಳಗೆ ಸಕ್ಷಮ ನ್ಯಾಯಾಲಯದಲ್ಲಿ ಜಾಮೀನು ಪಡೆಯಲು ಆದೇಶಿಸಿದೆ.
“ಪೋಕ್ಸೊ ಕಾಯಿದೆ ಸೆಕ್ಷನ್‌ಗಳಾದ 4, 6, 8, 10 ಮತ್ತು 12ರ ಅಡಿ ದೂರು ದಾಖಲಾಗುವ ಒಂದು ವಾರಕ್ಕೂ ಮುಂಚೆಯೇ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದು ಅದನ್ನು ರದ್ದುಪಡಿಸುವುದಕ್ಕೆ ಕಾರಣವೇ ವಿನಃ ಆರೋಪ ಪಟ್ಟಿ ಸಲ್ಲಿಸಿರುವುದಕ್ಕೆ ಅಲ್ಲ” ಎಂದು ನ್ಯಾಯಾಲಯ ತಿಳಿಸಿದೆ.
ವಚನಾನಂದ ಸ್ವಾಮೀಜಿ ರೆಗ್ಯುಲರ್‌ ಜಾಮೀನು ಕೋರಿ ಸಲ್ಲಿಸುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ನಿರ್ದೇಶನದ ಅನ್ವಯ ತುರ್ತಾಗಿ ನಿರ್ಧರಿಸಬೇಕು ಎಂದು ಸತ್ರ ನ್ಯಾಯಾಲಯಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ನಿರೀಕ್ಷಣಾ ಜಾಮೀನು ಮಂಜೂರು ಮಾಡುವುದಕ್ಕೂ ಮುನ್ನ ಸಂತ್ರಸ್ತರನ್ನು ಆಲಿಸಿಲ್ಲ ಎಂಬುದೂ ಜಾಮೀನು ರದ್ದತಿಗೆ ಮತ್ತೊಂದು ಕಾರಣವಾಗಿದೆ ಎಂದು ಹೈಕೋರ್ಟ್‌ ಹೇಳಿದೆ.

ಪ್ರಮುಖ ಸುದ್ದಿ :-   ಟ್ರಸ್ಟ್ ಹೆಸರಲ್ಲಿ ‘ಜಮೀನು ಲೂಟಿ’: ಖರ್ಗೆ ಕುಟುಂಬದ ವಿರುದ್ಧ ಬಿಜೆಪಿ ಗಂಭೀರ ಆರೋಪ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement