ಸಿಸಿಟಿವಿ ಮುಚ್ಚುತ್ತಿದ್ದರು….ಶೌಚಾಲಯದಲ್ಲಿ ಹಣ ಅಡಗಿಸಿಡುತ್ತಿದ್ದರು…..: ರಾಮಮಂದಿರ ದೇಣಿಗೆ ಕಳ್ಳತನದ ಬೆಚ್ಚಿಬೀಳಿಸುವ ಕಥೆ

ಅಯೋಧ್ಯೆ: ರಾಮಮಂದಿರದ ಹುಂಡಿಗಳಲ್ಲಿ ಭಕ್ತರು ಸಮರ್ಪಿಸಿದ್ದ ಕೋಟ್ಯಂತರ ರೂಪಾಯಿ ದೇಣಿಗೆ ಹಣವನ್ನು ಎಣಿಕೆ ಮಾಡುವ ಸಿಬ್ಬಂದಿಯೇ ವ್ಯವಸ್ಥಿತವಾಗಿ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಚ್ಚಿಬೀಳಿಸುವ ಹೊಸ ಸಂಗತಿಗಳು ಬೆಳಕಿಗೆ ಬಂದಿವೆ. ಸಿಸಿಟಿವಿ ಕ್ಯಾಮೆರಾವನ್ನು ಉದ್ದೇಶಪೂರ್ವಕವಾಗಿ ಮುಚ್ಚಿ, ಮತ್ತೊಬ್ಬ ಸಿಬ್ಬಂದಿ ನಗದು ಹಣವನ್ನು ಬಟ್ಟೆಯೊಳಗೆ ಅಡಗಿಸಿಕೊಳ್ಳುತ್ತಿದ್ದ ವಿಧಾನ ಸೇರಿದಂತೆ ಹಣ ದೋಚಲು ಅನುಸರಿಸಿದ್ದ ಹಲವು ತಂತ್ರಗಳು ವಿಶೇಷ … Continued

ಮುಂಗಾರು ಕುಂಠಿತ ? ಭಾರತದ ಬಹುತೇಕ ಭಾಗಗಳಲ್ಲಿ ಮಳೆಮೋಡಗಳೇ ಕಾಣುತ್ತಿಲ್ಲ ; ಉಪಗ್ರಹ ಚಿತ್ರದಲ್ಲಿ ಆತಂಕಕಾರಿ ದೃಶ್ಯ

ನವದೆಹಲಿ : ನೈಋತ್ಯ ಮುಂಗಾರು ದೇಶದ ಬಹುತೇಕ ಭಾಗಗಳಿಗೆ ಅಧಿಕೃತವಾಗಿ ಪ್ರವೇಶಿಸಿದ್ದರೂ, ಮಧ್ಯ, ಪಶ್ಚಿಮ ಹಾಗೂ ವಾಯವ್ಯ ಭಾರತದ ವಿಶಾಲ ಪ್ರದೇಶಗಳಲ್ಲಿ ಅಸಾಮಾನ್ಯವಾಗಿ ಕಂಡುಬರುವ ಮೋಡರಹಿತ ವಾತಾವರಣ ಮುಂದುವರಿದಿದೆ. ಇತ್ತೀಚಿನ ಉಪಗ್ರಹ ಚಿತ್ರಗಳು ದೇಶದ ಬಹುಭಾಗದಲ್ಲಿ ವ್ಯಾಪಕ ಮಳೆ ಸುರಿಸುವ ದಟ್ಟ ಮಳೆಮೋಡಗಳು ಕಾಣಿಸದಿರುವುದನ್ನು ಸ್ಪಷ್ಟವಾಗಿ ತೋರಿಸಿವೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಂಕಿಅಂಶಗಳ ಪ್ರಕಾರ, … Continued

329 ಜೀವ ಬಲಿ ಪಡೆದ ಕನಿಷ್ಕ ವಿಮಾನ ದುರಂತ : 40 ವರ್ಷಗಳ ಬಳಿಕ ಇದಕ್ಕೆ ಖಲಿಸ್ತಾನಿ ಉಗ್ರರೇ ಕಾರಣ ಎಂದು ಒಪ್ಪಿದ ಕೆನಡಾ

 ಒಟ್ಟಾವಾ : 1985ರಲ್ಲಿ 329 ಮಂದಿಯನ್ನು ಬಲಿ ಪಡೆದ ಐರ್ ಇಂಡಿಯಾ ಫ್ಲೈಟ್ 182 (ಎಂಪರರ್ ಕನಿಷ್ಕ) ವಿಮಾನ ಸ್ಫೋಟ ಪ್ರಕರಣದಲ್ಲಿ ಕೆನಡಾ ಮೂಲದ ಖಲಿಸ್ತಾನಿ ಉಗ್ರರೇ ಹೊಣೆಗಾರರು ಎಂದು ಕೆನಡಾದ ಭದ್ರತಾ ಗುಪ್ತಚರ ಸಂಸ್ಥೆ (CSIS) ಮೊದಲ ಬಾರಿಗೆ ಅಧಿಕೃತವಾಗಿ ಒಪ್ಪಿಕೊಂಡಿದೆ. ಈ ದಾಳಿಯಲ್ಲಿ ಮೃತಪಟ್ಟವರಲ್ಲಿ ಬಹುತೇಕರು ಭಾರತೀಯ ಮೂಲದ ಕೆನಡಾ ನಾಗರಿಕರಾಗಿದ್ದು, ಅಟ್ಲಾಂಟಿಕ್ … Continued

ವೆನೆಜುವೆಲಾ ಅವಳಿ ಭೂಕಂಪ: 589ಕ್ಕೇರಿದ ಸಾವಿನ ಸಂಖ್ಯೆ; 2,980 ಜನರಿಗೆ ಗಾಯ ; ನವಜಾತ ಶಿಶುವಿನ ರಕ್ಷಣೆ

ಕಾರಕಾಸ್: ವೆನೆಜುವೆಲಾದಲ್ಲಿ ಸಂಭವಿಸಿದ ವಿನಾಶಕಾರಿ ಅವಳಿ ಭೂಕಂಪದ ಸಾವಿನ ಸಂಖ್ಯೆ 589ಕ್ಕೆ ಏರಿಕೆಯಾಗಿದ್ದು, ಇಡೀ ದೇಶವೇ ಕಣ್ಣೀರಲ್ಲಿ ಮುಳುಗಿದೆ. ಕೇವಲ ಒಂದು ದಿನದ ಅವಧಿಯಲ್ಲಿ ಮೃತರ ಸಂಖ್ಯೆ ದುಪ್ಪಟ್ಟಾಗಿದ್ದು, ಗಾಯಗೊಂಡವರ ಸಂಖ್ಯೆ 2,980ಕ್ಕೆ ತಲುಪಿದೆ ಎಂದು ದೇಶದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಶುಕ್ರವಾರ ಮಧ್ಯಾಹ್ನ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಗುರುವಾರ ರಾತ್ರಿಯ ವೇಳೆಗೆ ಸಾವಿನ ಸಂಖ್ಯೆ … Continued

ವಿಡಿಯೋ | ಬೆಂಗಳೂರು : ಚಲಿಸುತ್ತಿದ್ದ ಶಾಲಾ ವಾಹನದ ಹಿಂಬಾಗಿಲು ತೆರೆದು ರಸ್ತೆಗೆ ಬಿದ್ದ ಮಕ್ಕಳು….!

ಬೆಂಗಳೂರು: ಶಾಲಾ ಮಕ್ಕಳನ್ನು ಒಯ್ಯುತ್ತಿದ್ದ ಓಮ್ನಿಯ ಹಿಂಬದಿಯ ಬಾಗಿಲು ದಿಢೀರನೆ ತೆರೆದುಕೊಂಡ ಪರಿಣಾಮ ರಸ್ತೆಗೆ ಬಿದ್ದ ಐವರು ಶಾಲಾ ಮಕ್ಕಳಿಗೆ ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ಬೆಂಗಳೂರಿನ ಕೆ.ಆರ್.ಪುರಂನಲ್ಲಿ ನಡೆದಿದೆ ಎಂದುವರದಿಯಾಗಿದೆ. ಮಕ್ಕಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಕೆ.ಆರ್.ಪುರಂನ ಗಾಯತ್ರಿ ಲೇಔಟ್‌ನಲ್ಲಿ ಈ ಆಘಾತಕಾರಿ ಘಟನೆ ಸಂಭವಿಸಿದೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮ್ನಿ ವ್ಯಾನ್ … Continued

ಅಯೋಧ್ಯಾ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: 8 ಜನರ ಬಂಧನದ ಬೆನ್ನಲ್ಲೇ ಟ್ರಸ್ಟ್ ಮುಖ್ಯಸ್ಥ ಚಂಪತ ರಾಯ್ ರಾಜೀನಾಮೆ

ಅಯೋಧ್ಯಾ: ಅಯೋಧ್ಯೆ  ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟ್‌ನ ಮತ್ತೊಬ್ಬ ಪ್ರಮುಖ ಸದಸ್ಯ ಅನಿಲ ಮಿಶ್ರಾ ತಮ್ಮ ಸ್ಥಾನಗಳಿಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯಲ್ಲಿ ಭಾರಿ ಪ್ರಮಾಣದ ಹಣ ಕಳ್ಳತನವಾಗಿದೆ ಎಂಬ ಆರೋಪದ ನಂತರ ಉತ್ತರ ಪ್ರದೇಶ ಸರ್ಕಾರ ರಚಿಸಿದ ವಿಶೇಷ ತನಿಖಾ … Continued

ವಿಶ್ವದ ಎಲ್ಲ ದೇಶಗಳಿಗೂ ಭೇಟಿ ನೀಡಿ ದಾಖಲೆ ಬರೆದ ಬೆಂಗಳೂರು ಮೂಲದ ಗಿಟಾರ್‌ ವಾದಕ ಬೆನ್ನಿ ಪ್ರಸಾದ…!

ಬೆಂಗಳೂರು ಮೂಲದ ಹೆಸರಾಂತ ಗಿಟಾರ್ ವಾದಕ ಮತ್ತು ಜಾಗತಿಕ ಪ್ರವಾಸಿ ಬೆನ್ನಿ ಪ್ರಸಾದ (Benny Prasad) ಅವರು ತಮ್ಮ ಜೀವಮಾನದ ಅಪರೂಪದ ಪ್ರವಾಸದ ದಾಖಲೆಯನ್ನು ಹಂಚಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದಾರೆ. ಜಗತ್ತಿನ ಒಟ್ಟು 245 ದೇಶ ಹಾಗೂ ಪ್ರಾಂತ್ಯಗಳಿಗೆ ಭೇಟಿ ನೀಡಿರುವ ಅವರು, ಅದಕ್ಕೆ ಪುರಾವೆಯಾಗಿ ವೀಸಾ ಮತ್ತು ಸೀಲ್‌ಗಳಿಂದ ತುಂಬಿ … Continued

ಪೈಪ್‌ ಸೋರಿಕೆಯಿಂದ ಶರಾವತಿ ಜಲವಿದ್ಯುತ್‌ ಕೇಂದ್ರದ ಒಳಗೆ ತುಂಬಿದ ನೀರು

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಸಮೀಪದ ಶರಾವತಿ ಜಲವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಗುರುವಾರ (ಜೂನ್ 25) ನಿಯಮಿತ ನಿರ್ವಹಣಾ ಕಾರ್ಯದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಲಿಂಗನಮಕ್ಕಿ ಜಲಾಶಯದ ವ್ಯಾಪ್ತಿಗೆ ಒಳಪಡುವ ಈ ವಿದ್ಯುತ್ ಕೇಂದ್ರದ 7ನೇ ಘಟಕದಲ್ಲಿ (Unit 7) ನಿರ್ವಹಣಾ ಕೆಲಸ ನಡೆಯುತ್ತಿದ್ದಾಗ ದಿಢೀರನೆ … Continued

ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣ : ಆರೋಪಿ ಸಿಯಾ ಗೋಯಲ್ ತಂದೆಗೆ ಹೃದಯಾಘಾತ

ಪುಣೆ: ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಗಾತಕಾರಿ ಬೆಳವಣಿಗೆಯಲ್ಲಿ, ಆರೋಪಿ ಸಿಯಾ ಗೋಯಲ್ ತಂದೆ ಪ್ರವೀಣ ಗೋಯಲ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೇಶಾದ್ಯಂತ ಭಾರೀ ಸದ್ದು ಮಾಡುತ್ತಿರುವ ಈ ಹೈಪ್ರೊಫೈಲ್ ಪ್ರಕರಣದ ನಡುವೆಯೇ ಈ ಘಟನೆ ಸಂಭವಿಸಿದೆ. ಆಸ್ಪತ್ರೆಯಿಂದಲೇ ಪುಣೆ ಮೂಲದ ಸುದ್ದಿ ಸಂಸ್ಥೆ ‘ನ್ಯೂಸ್‌ಡಾಟ್ಜ್’ ಜೊತೆ ಮಾತನಾಡಿದ … Continued

ಅಯೋಧ್ಯೆ ರಾಮ ಮಂದಿರ ಕಾಣಿಕೆ ಹಣ ಕಳುವು ಪ್ರಕರಣ : 8 ಆರೋಪಿಗಳ ಬಂಧನ

ಅಯೋಧ್ಯಾ : ಅಯೋಧ್ಯೆಯ ರಾಮ ಮಂದಿರದಲ್ಲಿ ಭಕ್ತರು ಅರ್ಪಿಸಿದ ಕಾಣಿಕೆ ಹಣವನ್ನು ಕಳುವು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಪ್ರಕಾರ, ಈ ಪ್ರಕರಣದಲ್ಲಿ ಎಂಟು ಜನರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದ್ದು, ಇವರಲ್ಲಿ ಆರು ಮಂದಿ ದೇವಸ್ಥಾನದ ನಗದು ಎಣಿಕೆ ವಿಭಾಗದ ಉದ್ಯೋಗಿಗಳಾಗಿದ್ದಾರೆ. ಆರೋಪಿಗಳು … Continued