ಬೀದರ : ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು ; ಕಿರುಕುಳ ಕಾರಣ ಎಂದು ಪೋಷಕರ ಆರೋಪ

ಬೀದರ : ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಬೀದರಿನಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಗೆ ಶಾಲೆಯವರ ಮಾನಸಿಕ ಕಿರುಕುಳ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೀದರಿನ ಪ್ರತಾಪ ನಗರದ ಬಳಿಯಿರುವ ಖಾಸಗಿ ಶಾಲೆಯೊಂದರಲ್ಲಿ ಬುಧವಾರ (ಜೂನ್ 10)ರಂದು ಈ ಘಟನೆ ಸಂಭವಿಸಿದೆ. ಶಾಂತಿನಗರದ ನಿವಾಸಿಯಾದ … Continued

ವಿಡಿಯೋ ವೈರಲ್‌ | ದಿಢೀರನೆ ಬಂದು ನಾಯಿ ಮರಿ ಹೊತ್ತೊಯ್ದು ಮರ ಏರಿ ಕುಳಿತ ದೈತ್ಯ ಮಂಗ…! ಮುಂದೇನಾಯ್ತು ಗೊತ್ತೆ…?

ಪ್ರಕೃತಿಯಲ್ಲಿ ಪ್ರಾಣಿಗಳ ನಡುವಿನ ಪ್ರೀತಿ ಮತ್ತು ವಾತ್ಸಲ್ಯಕ್ಕೆ ಕೊನೆಯಿಲ್ಲ ಎಂಬುದಕ್ಕೆ ಸಾಕ್ಷಿಯಾದ ಅಪರೂಪದ ಘಟನೆಯೊಂದು ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಇಲ್ಲಿನ ರೇವಾಲ್ಸರ್ ಪ್ರದೇಶದಲ್ಲಿ ಕೋತಿಯೊಂದು ನಾಯಿ ಮರಿಯನ್ನು ಹೊತ್ತೊಯ್ದು ಮರದ ಮೇಲೆ ಕುಳಿತು ಪ್ರೀತಿಯಿಂದ ನೋಡಿಕೊಂಡ ದೃಶ್ಯ ಸ್ಥಳೀಯರ ಮನಗೆದ್ದಿದೆ. ಸ್ಥಳೀಯರು ನೀಡಿದ … Continued

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ಟಿಎಂಸಿ ರಾಜ್ಯಸಭಾ ಸದಸ್ಯತ್ವಕ್ಕೆ ಸುಶ್ಮಿತಾ ದೇವ್ ರಾಜೀನಾಮೆ

ನವದೆಹಲಿ: ಪಕ್ಷದೊಳಗಿನ ಭಿನ್ನಮತ ಮತ್ತು ಸರಣಿ ಬಂಡಾಯದಿಂದ ಕಂಗಾಲಾಗಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ (TMC) ಸುಪ್ರಿಮೋ ಮಮತಾ ಬ್ಯಾನರ್ಜಿಗೆ ಮತ್ತೊಂದು ತೀವ್ರ ಆಘಾತ ಎದುರಾಗಿದೆ. ಟಿಎಂಸಿ ಹಿರಿಯ ನಾಯಕಿ ಸುಶ್ಮಿತಾ ದೇವ್ ಅವರು ಬುಧವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿಗಳಾದ ಸಿ. ಪಿ. ರಾಧಾಕೃಷ್ಣನ್ … Continued

ಪಾಕ್‌ ವಿರುದ್ಧ ಪಿಒಕೆಯಲ್ಲಿ ಭುಗಿಲೆದ್ದ ಆಕ್ರೋಶ : ನಾಲ್ವರು ಪ್ರಮುಖರ ಸುಳಿವು ಕೊಟ್ಟವರಿಗೆ 1 ಕೋಟಿ ರೂ. ಬಹುಮಾನ ಘೋಷಿಸಿದ ಪಾಕಿಸ್ತಾನ

 ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ನಡೆಯುತ್ತಿರುವ ನಾಗರಿಕ ಹಕ್ಕುಗಳ ಪ್ರತಿಭಟನೆಯನ್ನು ಹತ್ತಿಕ್ಕಲು ಪಾಕಿಸ್ತಾನ ಸರ್ಕಾರ ಕ್ರೂರ ದಮನ ನೀತಿಯನ್ನು ಮುಂದುವರಿಸಿದೆ. ಇದರ ಭಾಗವಾಗಿ, ಕಳೆದ ವಾರ ನಿಷೇಧಕ್ಕೊಳಗಾದ ನಾಗರಿಕ ಸಮಾಜದ ಮೈತ್ರಿಕೂಟವಾದ ‘ಜಂಟಿ ಅವಾಮಿ ಆಕ್ಷನ್ ಕಮಿಟಿ’ (JAAC) ಯ ಪ್ರಮುಖ ನಾಲ್ಕು ನಾಯಕರನ್ನು ಬಂಧಿಸಲು ನೆರವಾಗುವ ಮಾಹಿತಿ ನೀಡಿದವರಿಗೆ 1 ಕೋಟಿ ಪಾಕಿಸ್ತಾನಿ ರೂಪಾಯಿ … Continued

ನೆಹರು ಹಿಂದಿಕ್ಕಿ ಭಾರತದಲ್ಲಿ ಅತಿ ದೀರ್ಘಾವಧಿ ಅಧಿಕಾರ ನಡೆಸಿದ ‘ಚುನಾಯಿತ ಪ್ರಧಾನಿ’ ಎಂಬ ಮೈಲಿಗಲ್ಲು ಸ್ಥಾಪಿಸಿದ ಪ್ರಧಾನಿ ಮೋದಿ

 ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು (10 ಜೂನ್ 2026)  ಭಾರತದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಗೆ ಸೇವೆ ಸಲ್ಲಿಸಿದ ‘ಚುನಾಯಿತ ಪ್ರಧಾನಿ’ ಎಂಬ ಅಭೂತಪೂರ್ವ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಇದರೊಂದಿಗೆ ಅವರು ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಹೆಸರಿನಲ್ಲಿದ್ದ ಸುದೀರ್ಘಾವಧಿಯ ದಾಖಲೆಯನ್ನು ಮುರಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು … Continued

ಲೋಕಧ್ವನಿ ಪತ್ರಿಕೆ ಮಾಜಿ ಸಂಪಾದಕ ಪಿ.ಎಸ್‌. ಸದಾನಂದ ನಿಧನ

ಮುಂಡಗೋಡ: ಹಿರಿಯ ಪತ್ರಕರ್ತ ಹಾಗೂ ಲೋಕಧ್ವನಿ ಪತ್ರಿಕೆಯ ಮಾಜಿ ಸಂಪಾದಕ ಪಿ.ಎಸ್‌. ಸದಾನಂದ (75) ಅವರು ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸದಾನಂದ ಅವರು ಪತ್ನಿ, ಪುತ್ರಿ, ಪುತ್ರ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. ಪಿ.ಎಸ್. ಸದಾನಂದ ಅವರು ಮುಂಡಗೋಡ ತಾಲೂಕಿನ ನ್ಯಾಸರ್ಗಿ ಗ್ರಾಮದವರು. ಲೋಕಧ್ವನಿ ಪತ್ರಿಕೆ ಸಂಸ್ಥಾಪಕರಾದ ಗೋಪಾಲಕೃಷ್ಣ ಆನವಟ್ಟಿಯವರ ಕಾಲದಿಂದಲೂ ಅವರು ಲೋಕಧ್ವನಿ … Continued

ವಿಡಿಯೋ | ಪಿಒಕೆಯಲ್ಲಿ ಜನಾಕ್ರೋಶ, ಭುಗಿಲೆದ್ದ ಹಿಂಸಾಚಾರ: 30ಕ್ಕೂ ಹೆಚ್ಚು ಸಾವು, 200ಕ್ಕೂ ಅಧಿಕ ಜನರಿಗೆ ಗಾಯ

ರಾವಲಕೋಟ್ (ಪಾಕಿಸ್ತಾನ ಆಕ್ರಮಿತ ಕಾಶ್ಮೀರ): ಆರ್ಥಿಕ ಮತ್ತು ರಾಜಕೀಯ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದ ನಾಗರಿಕ ಸಮಾಜದ ಪ್ರಮುಖ ಒಕ್ಕೂಟ ‘ಜಾಯಿಂಟ್ ಅವಾಮಿ ಆಕ್ಷನ್ ಕಮಿಟಿ’ (JAAC) ಯನ್ನು ಅಲ್ಲಿನ ಸರ್ಕಾರ ನಿಷೇಧಿಸಿದ ಬೆನ್ನಲ್ಲೇ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಭೀಕರ ಹಿಂಸಾಚಾರ ಭುಗಿಲೆದ್ದಿದೆ. ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ತೀವ್ರ ಘರ್ಷಣೆಯಲ್ಲಿ 30ಕ್ಕೂ … Continued

ನಕಲಿ ಸಹಿ ಪ್ರಕರಣ: ಮಮತಾ ಬ್ಯಾನರ್ಜಿ ನಿವಾಸ , ಅಭಿಷೇಕ ಕಚೇರಿ ಮೇಲೆ ಏಕಕಾಲದಲ್ಲಿ ಸಿಐಡಿ ದಾಳಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕರ ನಕಲಿ ಸಹಿ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳು ಗುರುವಾರ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಈ ಬೆನ್ನಲ್ಲೇ ಅವರ ಸೋದರಳಿಯ ಹಾಗೂ … Continued

ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಾಮಪತ್ರ ರದ್ದು ; ಕೈ ನಾಯಕರ ಪ್ರತಿಭಟನೆ

ಭೋಪಾಲ ; ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಲ್ಲಿ ಭಾರಿ ರಾಜಕೀಯ ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಇದು ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ. ಅವರು ತಮ್ಮ ಚುನಾವಣಾ ಪ್ರಮಾಣಪತ್ರದಲ್ಲಿ (ಅಫಿಡವಿಟ್) ಪ್ರಕರಣವೊಂದರ ಮಾಹಿತಿಯನ್ನು ಮರೆಮಾಚಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಭಾರತೀಯ ಜನತಾ ಪಾರ್ಟಿ … Continued

ಮಕ್ಕಳ ಹೆರುವಿಕೆ ತಡೆದ ಐಫೋನ್ ಕ್ರಾಂತಿ ! 2007ರ ನಂತರ ವಿಶ್ವದಾದ್ಯಂತ ಜನನ ಪ್ರಮಾಣ ಕುಸಿತದ ಬೆಚ್ಚಿಬೀಳಿಸುವ ಸತ್ಯ ಬಿಚ್ಚಿಟ್ಟ ಅಧ್ಯಯನ

ಸಾಮಾನ್ಯವಾಗಿ ಒಂದು ದೇಶ ಅಥವಾ ಸಮಾಜದಲ್ಲಿ ಜನರ ಜೀವನಮಟ್ಟ ಸುಧಾರಿಸಿದಂತೆ ಅಲ್ಲಿನ ಜನನ ಪ್ರಮಾಣ (ಬರ್ತ್ ರೇಟ್) ಕಡಿಮೆಯಾಗುತ್ತಾ ಹೋಗುವುದು ಇತಿಹಾಸದುದ್ದಕ್ಕೂ ಕಂಡುಬಂದಿರುವ ಸಾಮಾನ್ಯ ಪ್ರವೃತ್ತಿ. ಆದರೆ, ಕಳೆದ ಎರಡು ದಶಕಗಳಲ್ಲಿ ಸಂಶೋಧಕರು ತೀರಾ ಭಿನ್ನವಾದ ಮತ್ತು ವಿಚಿತ್ರವಾದ ವಿದ್ಯಮಾನವೊಂದನ್ನು ಗಮನಿಸಿದ್ದಾರೆ. 2007ರಿಂದೀಚೆಗೆ ಜಗತ್ತಿನಾದ್ಯಂತ ವಿವಿಧ ದೇಶಗಳಲ್ಲಿ ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿಗಳು ಬೇರೆ ಬೇರೆಯಾಗಿದ್ದರೂ … Continued