ಪಾಕ್‌ ಕ್ರಿಕೆಟ್‌ ತಂಡದ ಮಾಜಿ ವೇಗಿ ಶೋಯೆಬ್ ಅಖ್ತರ್ ಅಣ್ಣನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿ ; ವಿಡಿಯೋ ವೈರಲ್‌

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಅವರ ಹಿರಿಯ ಸಹೋದರ ಶಾಹಿದ್ ಅಖ್ತರ್ ಅವರ ಅಂತ್ಯಕ್ರಿಯೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (LeT) ಮತ್ತು ಅದರ ರಾಜಕೀಯ ಮುಖವಾಣಿ ಪಾಕಿಸ್ತಾನ್ ಮರ್ಕಝಿ ಮುಸ್ಲಿಂ ಲೀಗ್ (PMML) ನಾಯಕರು ಅಲ್ಲಿ ಕಾಣಿಸಿಕೊಂಡಿರುವುದು ಪಾಕಿಸ್ತಾನದಲ್ಲಿ ಉಗ್ರರಿಗೆ ಸುರಕ್ಷಿತ ಆಶ್ರಯ ದೊರೆಯುತ್ತಿದೆ ಎಂಬ ಆತಂಕವನ್ನು ಮತ್ತೊಮ್ಮೆ ಹೆಚ್ಚಿಸಿದೆ. … Continued

ವಿಡಿಯೋ | ಬೆಂಗಳೂರು : ಹೆಲ್ಮೆಟ್ ಇಲ್ಲದೆ ಹೋಗುತ್ತಿದ್ದ ಬೈಕ್ ಸವಾರನ ತಲೆ ಮೇಲೆ ಬಿದ್ದ ಮರದ ಕೊಂಬೆ ; ಗಂಭೀರ ಗಾಯ

ಬೆಂಗಳೂರು: ಮಹಾನಗರದ ರಾಜಾಜಿನಗರದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ, ರಸ್ತೆಯ ಬದಿಯ ಒಣ ಮರದ ಬೃಹತ್ ಕೊಂಬೆಯೊಂದು ಬೈಕ್ ಸವಾರನ ತಲೆಯ ಮೇಲೆ ಬಿದ್ದ ಪರಿಣಾಮ 52 ವರ್ಷದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಈ ಘಟನೆ ಬುಧವಾರ ಸಂಜೆ ನಡೆದಿದೆಎಂದು ಹೇಳಲಾಗಿದೆ. ಈ ಘಟನೆ ರಾಮಮಂದಿರ ರಸ್ತೆಯಲ್ಲಿ ನಡೆದಿದ್ದು, ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸಂಪೂರ್ಣ … Continued

ವಿಶ್ವದ ಅತಿ ಹೆಚ್ಚು ವಯಸ್ಸಿನ ಜೀವಂತ ಭೂಚರ ಪ್ರಾಣಿ ಜೋನಾಥನ್‌ ಭೇಟಿಯಾಗಲಿರುವ ಪ್ರಧಾನಿ ಮೋದಿ

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮುಂಬರುವ ಸೀಶೆಲ್ಸ್‌ ಪ್ರವಾಸದ ವೇಳೆ ವಿಶ್ವದ ಅತಿ ಹೆಚ್ಚು ವಯಸ್ಸಿನ ಜೀವಂತ ಭೂಚರ ಪ್ರಾಣಿ ಎಂದು ಗುರುತಿಸಲ್ಪಟ್ಟಿರುವ ‘ಜೋನಾಥನ್’ ಎಂಬ ದೈತ್ಯ ಆಮೆಯನ್ನು ಭೇಟಿ ಮಾಡಲಿದ್ದಾರೆ. ಭಾರತ ಮತ್ತು ಸೀಶೆಲ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳು ಸ್ಥಾಪನೆಯಾಗಿ 50 ವರ್ಷಗಳು ಪೂರ್ಣಗೊಂಡಿರುವ ಸುವರ್ಣ ಮಹೋತ್ಸವದ ಅಂಗವಾಗಿ ಈ … Continued

120 ಕಿಮೀ ವೇಗದ ಯಶಸ್ವಿ ಪರೀಕ್ಷೆ ನಡೆಸಿದ ಭಾರತದ ಮೊದಲ ಹೈಡ್ರೋಜನ್ ರೈಲು

ನವದೆಹಲಿ : ಭಾರತದ ರೈಲ್ವೆಯು ತನ್ನ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲೊಂದನ್ನು ಸ್ಥಾಪಿಸಿದೆ. ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲು ತನ್ನ ಅಂತಿಮ ಹೈ-ಸ್ಪೀಡ್ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಶುಕ್ರವಾರ (ಜೂನ್ 26), ಹರಿಯಾಣದ ಜಿಂದ್–ಸೋನಿಪತ್ ಮಾರ್ಗದಲ್ಲಿ ನಡೆದ ಪರೀಕ್ಷೆಯಲ್ಲಿ ರೈಲು ಗಂಟೆಗೆ 120 ಕಿಲೋಮೀಟರ್ ಗರಿಷ್ಠ ವೇಗದಲ್ಲಿ ಸಂಚರಿಸಿ ಯಶಸ್ಸು ಸಾಧಿಸಿದೆ. ಈ ಯಶಸ್ವಿ ಪರೀಕ್ಷೆಯು … Continued

ಆಪರೇಷನ್ ಸಿಂಧೂರದಲ್ಲಿ ಹುತಾತ್ಮರಾದ 6 ಯೋಧರ ಹೆಸರು ಪ್ರಕಟಿಸಿದ ಕೇಂದ್ರ ಸರ್ಕಾರ

ನವದೆಹಲಿ: ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಲು 2025ರ ಮೇ ತಿಂಗಳಲ್ಲಿ ಭಾರತೀಯ ಸೇನೆ ನಡೆಸಿದ್ದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ವೇಳೆ ಹುತಾತ್ಮರಾದ ಆರು ಭಾರತೀಯ ಯೋಧರ ಹೆಸರುಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ಮೊದಲ ಬಾರಿಗೆ ಅಧಿಕೃತವಾಗಿ ಪ್ರಕಟಿಸಿದೆ. ಈ ಆರು ಯೋಧರ ಪೈಕಿ ಐವರು ಭಾರತೀಯ ಸೇನೆಗೆ ಹಾಗೂ … Continued

ಸಿಸಿಟಿವಿ ಮುಚ್ಚುತ್ತಿದ್ದರು….ಶೌಚಾಲಯದಲ್ಲಿ ಹಣ ಅಡಗಿಸಿಡುತ್ತಿದ್ದರು…..: ರಾಮಮಂದಿರ ದೇಣಿಗೆ ಕಳ್ಳತನದ ಬೆಚ್ಚಿಬೀಳಿಸುವ ಕಥೆ

ಅಯೋಧ್ಯೆ: ರಾಮಮಂದಿರದ ಹುಂಡಿಗಳಲ್ಲಿ ಭಕ್ತರು ಸಮರ್ಪಿಸಿದ್ದ ಕೋಟ್ಯಂತರ ರೂಪಾಯಿ ದೇಣಿಗೆ ಹಣವನ್ನು ಎಣಿಕೆ ಮಾಡುವ ಸಿಬ್ಬಂದಿಯೇ ವ್ಯವಸ್ಥಿತವಾಗಿ ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಚ್ಚಿಬೀಳಿಸುವ ಹೊಸ ಸಂಗತಿಗಳು ಬೆಳಕಿಗೆ ಬಂದಿವೆ. ಸಿಸಿಟಿವಿ ಕ್ಯಾಮೆರಾವನ್ನು ಉದ್ದೇಶಪೂರ್ವಕವಾಗಿ ಮುಚ್ಚಿ, ಮತ್ತೊಬ್ಬ ಸಿಬ್ಬಂದಿ ನಗದು ಹಣವನ್ನು ಬಟ್ಟೆಯೊಳಗೆ ಅಡಗಿಸಿಕೊಳ್ಳುತ್ತಿದ್ದ ವಿಧಾನ ಸೇರಿದಂತೆ ಹಣ ದೋಚಲು ಅನುಸರಿಸಿದ್ದ ಹಲವು ತಂತ್ರಗಳು ವಿಶೇಷ … Continued

ಮುಂಗಾರು ಕುಂಠಿತ ? ಭಾರತದ ಬಹುತೇಕ ಭಾಗಗಳಲ್ಲಿ ಮಳೆಮೋಡಗಳೇ ಕಾಣುತ್ತಿಲ್ಲ ; ಉಪಗ್ರಹ ಚಿತ್ರದಲ್ಲಿ ಆತಂಕಕಾರಿ ದೃಶ್ಯ

ನವದೆಹಲಿ : ನೈಋತ್ಯ ಮುಂಗಾರು ದೇಶದ ಬಹುತೇಕ ಭಾಗಗಳಿಗೆ ಅಧಿಕೃತವಾಗಿ ಪ್ರವೇಶಿಸಿದ್ದರೂ, ಮಧ್ಯ, ಪಶ್ಚಿಮ ಹಾಗೂ ವಾಯವ್ಯ ಭಾರತದ ವಿಶಾಲ ಪ್ರದೇಶಗಳಲ್ಲಿ ಅಸಾಮಾನ್ಯವಾಗಿ ಕಂಡುಬರುವ ಮೋಡರಹಿತ ವಾತಾವರಣ ಮುಂದುವರಿದಿದೆ. ಇತ್ತೀಚಿನ ಉಪಗ್ರಹ ಚಿತ್ರಗಳು ದೇಶದ ಬಹುಭಾಗದಲ್ಲಿ ವ್ಯಾಪಕ ಮಳೆ ಸುರಿಸುವ ದಟ್ಟ ಮಳೆಮೋಡಗಳು ಕಾಣಿಸದಿರುವುದನ್ನು ಸ್ಪಷ್ಟವಾಗಿ ತೋರಿಸಿವೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಂಕಿಅಂಶಗಳ ಪ್ರಕಾರ, … Continued

329 ಜೀವ ಬಲಿ ಪಡೆದ ಕನಿಷ್ಕ ವಿಮಾನ ದುರಂತ : 40 ವರ್ಷಗಳ ಬಳಿಕ ಇದಕ್ಕೆ ಖಲಿಸ್ತಾನಿ ಉಗ್ರರೇ ಕಾರಣ ಎಂದು ಒಪ್ಪಿದ ಕೆನಡಾ

 ಒಟ್ಟಾವಾ : 1985ರಲ್ಲಿ 329 ಮಂದಿಯನ್ನು ಬಲಿ ಪಡೆದ ಐರ್ ಇಂಡಿಯಾ ಫ್ಲೈಟ್ 182 (ಎಂಪರರ್ ಕನಿಷ್ಕ) ವಿಮಾನ ಸ್ಫೋಟ ಪ್ರಕರಣದಲ್ಲಿ ಕೆನಡಾ ಮೂಲದ ಖಲಿಸ್ತಾನಿ ಉಗ್ರರೇ ಹೊಣೆಗಾರರು ಎಂದು ಕೆನಡಾದ ಭದ್ರತಾ ಗುಪ್ತಚರ ಸಂಸ್ಥೆ (CSIS) ಮೊದಲ ಬಾರಿಗೆ ಅಧಿಕೃತವಾಗಿ ಒಪ್ಪಿಕೊಂಡಿದೆ. ಈ ದಾಳಿಯಲ್ಲಿ ಮೃತಪಟ್ಟವರಲ್ಲಿ ಬಹುತೇಕರು ಭಾರತೀಯ ಮೂಲದ ಕೆನಡಾ ನಾಗರಿಕರಾಗಿದ್ದು, ಅಟ್ಲಾಂಟಿಕ್ … Continued

ವೆನೆಜುವೆಲಾ ಅವಳಿ ಭೂಕಂಪ: 589ಕ್ಕೇರಿದ ಸಾವಿನ ಸಂಖ್ಯೆ; 2,980 ಜನರಿಗೆ ಗಾಯ ; ನವಜಾತ ಶಿಶುವಿನ ರಕ್ಷಣೆ

ಕಾರಕಾಸ್: ವೆನೆಜುವೆಲಾದಲ್ಲಿ ಸಂಭವಿಸಿದ ವಿನಾಶಕಾರಿ ಅವಳಿ ಭೂಕಂಪದ ಸಾವಿನ ಸಂಖ್ಯೆ 589ಕ್ಕೆ ಏರಿಕೆಯಾಗಿದ್ದು, ಇಡೀ ದೇಶವೇ ಕಣ್ಣೀರಲ್ಲಿ ಮುಳುಗಿದೆ. ಕೇವಲ ಒಂದು ದಿನದ ಅವಧಿಯಲ್ಲಿ ಮೃತರ ಸಂಖ್ಯೆ ದುಪ್ಪಟ್ಟಾಗಿದ್ದು, ಗಾಯಗೊಂಡವರ ಸಂಖ್ಯೆ 2,980ಕ್ಕೆ ತಲುಪಿದೆ ಎಂದು ದೇಶದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಶುಕ್ರವಾರ ಮಧ್ಯಾಹ್ನ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಗುರುವಾರ ರಾತ್ರಿಯ ವೇಳೆಗೆ ಸಾವಿನ ಸಂಖ್ಯೆ … Continued

ವಿಡಿಯೋ | ಬೆಂಗಳೂರು : ಚಲಿಸುತ್ತಿದ್ದ ಶಾಲಾ ವಾಹನದ ಹಿಂಬಾಗಿಲು ತೆರೆದು ರಸ್ತೆಗೆ ಬಿದ್ದ ಮಕ್ಕಳು….!

ಬೆಂಗಳೂರು: ಶಾಲಾ ಮಕ್ಕಳನ್ನು ಒಯ್ಯುತ್ತಿದ್ದ ಓಮ್ನಿಯ ಹಿಂಬದಿಯ ಬಾಗಿಲು ದಿಢೀರನೆ ತೆರೆದುಕೊಂಡ ಪರಿಣಾಮ ರಸ್ತೆಗೆ ಬಿದ್ದ ಐವರು ಶಾಲಾ ಮಕ್ಕಳಿಗೆ ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ಬೆಂಗಳೂರಿನ ಕೆ.ಆರ್.ಪುರಂನಲ್ಲಿ ನಡೆದಿದೆ ಎಂದುವರದಿಯಾಗಿದೆ. ಮಕ್ಕಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಕೆ.ಆರ್.ಪುರಂನ ಗಾಯತ್ರಿ ಲೇಔಟ್‌ನಲ್ಲಿ ಈ ಆಘಾತಕಾರಿ ಘಟನೆ ಸಂಭವಿಸಿದೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮ್ನಿ ವ್ಯಾನ್ … Continued