ಅಯೋಧ್ಯಾ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: 8 ಜನರ ಬಂಧನದ ಬೆನ್ನಲ್ಲೇ ಟ್ರಸ್ಟ್ ಮುಖ್ಯಸ್ಥ ಚಂಪತ ರಾಯ್ ರಾಜೀನಾಮೆ

ಅಯೋಧ್ಯಾ: ಅಯೋಧ್ಯೆ  ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟ್‌ನ ಮತ್ತೊಬ್ಬ ಪ್ರಮುಖ ಸದಸ್ಯ ಅನಿಲ ಮಿಶ್ರಾ ತಮ್ಮ ಸ್ಥಾನಗಳಿಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯಲ್ಲಿ ಭಾರಿ ಪ್ರಮಾಣದ ಹಣ ಕಳ್ಳತನವಾಗಿದೆ ಎಂಬ ಆರೋಪದ ನಂತರ ಉತ್ತರ ಪ್ರದೇಶ ಸರ್ಕಾರ ರಚಿಸಿದ ವಿಶೇಷ ತನಿಖಾ … Continued

ವಿಶ್ವದ ಎಲ್ಲ ದೇಶಗಳಿಗೂ ಭೇಟಿ ನೀಡಿ ದಾಖಲೆ ಬರೆದ ಬೆಂಗಳೂರು ಮೂಲದ ಗಿಟಾರ್‌ ವಾದಕ ಬೆನ್ನಿ ಪ್ರಸಾದ…!

ಬೆಂಗಳೂರು ಮೂಲದ ಹೆಸರಾಂತ ಗಿಟಾರ್ ವಾದಕ ಮತ್ತು ಜಾಗತಿಕ ಪ್ರವಾಸಿ ಬೆನ್ನಿ ಪ್ರಸಾದ (Benny Prasad) ಅವರು ತಮ್ಮ ಜೀವಮಾನದ ಅಪರೂಪದ ಪ್ರವಾಸದ ದಾಖಲೆಯನ್ನು ಹಂಚಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದಾರೆ. ಜಗತ್ತಿನ ಒಟ್ಟು 245 ದೇಶ ಹಾಗೂ ಪ್ರಾಂತ್ಯಗಳಿಗೆ ಭೇಟಿ ನೀಡಿರುವ ಅವರು, ಅದಕ್ಕೆ ಪುರಾವೆಯಾಗಿ ವೀಸಾ ಮತ್ತು ಸೀಲ್‌ಗಳಿಂದ ತುಂಬಿ … Continued

ಪೈಪ್‌ ಸೋರಿಕೆಯಿಂದ ಶರಾವತಿ ಜಲವಿದ್ಯುತ್‌ ಕೇಂದ್ರದ ಒಳಗೆ ತುಂಬಿದ ನೀರು

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಸಮೀಪದ ಶರಾವತಿ ಜಲವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಗುರುವಾರ (ಜೂನ್ 25) ನಿಯಮಿತ ನಿರ್ವಹಣಾ ಕಾರ್ಯದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಲಿಂಗನಮಕ್ಕಿ ಜಲಾಶಯದ ವ್ಯಾಪ್ತಿಗೆ ಒಳಪಡುವ ಈ ವಿದ್ಯುತ್ ಕೇಂದ್ರದ 7ನೇ ಘಟಕದಲ್ಲಿ (Unit 7) ನಿರ್ವಹಣಾ ಕೆಲಸ ನಡೆಯುತ್ತಿದ್ದಾಗ ದಿಢೀರನೆ … Continued

ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣ : ಆರೋಪಿ ಸಿಯಾ ಗೋಯಲ್ ತಂದೆಗೆ ಹೃದಯಾಘಾತ

ಪುಣೆ: ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಗಾತಕಾರಿ ಬೆಳವಣಿಗೆಯಲ್ಲಿ, ಆರೋಪಿ ಸಿಯಾ ಗೋಯಲ್ ತಂದೆ ಪ್ರವೀಣ ಗೋಯಲ್ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೇಶಾದ್ಯಂತ ಭಾರೀ ಸದ್ದು ಮಾಡುತ್ತಿರುವ ಈ ಹೈಪ್ರೊಫೈಲ್ ಪ್ರಕರಣದ ನಡುವೆಯೇ ಈ ಘಟನೆ ಸಂಭವಿಸಿದೆ. ಆಸ್ಪತ್ರೆಯಿಂದಲೇ ಪುಣೆ ಮೂಲದ ಸುದ್ದಿ ಸಂಸ್ಥೆ ‘ನ್ಯೂಸ್‌ಡಾಟ್ಜ್’ ಜೊತೆ ಮಾತನಾಡಿದ … Continued

ಅಯೋಧ್ಯೆ ರಾಮ ಮಂದಿರ ಕಾಣಿಕೆ ಹಣ ಕಳುವು ಪ್ರಕರಣ : 8 ಆರೋಪಿಗಳ ಬಂಧನ

ಅಯೋಧ್ಯಾ : ಅಯೋಧ್ಯೆಯ ರಾಮ ಮಂದಿರದಲ್ಲಿ ಭಕ್ತರು ಅರ್ಪಿಸಿದ ಕಾಣಿಕೆ ಹಣವನ್ನು ಕಳುವು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಪ್ರಕಾರ, ಈ ಪ್ರಕರಣದಲ್ಲಿ ಎಂಟು ಜನರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದ್ದು, ಇವರಲ್ಲಿ ಆರು ಮಂದಿ ದೇವಸ್ಥಾನದ ನಗದು ಎಣಿಕೆ ವಿಭಾಗದ ಉದ್ಯೋಗಿಗಳಾಗಿದ್ದಾರೆ. ಆರೋಪಿಗಳು … Continued

ಕೇಂದ್ರದಿಂದ ಗುಡ್‌ನ್ಯೂಸ್ ; ವಾಣಿಜ್ಯ ಬಳಕೆ ಎಲ್‌ಪಿಜಿ ಮೇಲಿನ ನಿರ್ಬಂಧ ತೆಗೆದುಹಾಕಿದ ಸರ್ಕಾರ ; ಪೂರೈಕೆ ಸಹಜ ಸ್ಥಿತಿಗೆ

ನವದೆಹಲಿ: ಇರಾನ್‌-ಅಮೆರಿಕ ಸಂಘರ್ಷದ ಕಾರಣ ತಲೆದೋರಿದ್ದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ (ಅಡುಗೆ ಅನಿಲ) ಮೇಲೆ ಹೇರಲಾಗಿದ್ದ ಎಲ್ಲಾ ನಿರ್ಬಂಧಗಳನ್ನು ಕೇಂದ್ರ ಸರ್ಕಾರವು ಗುರುವಾರ ತೆಗೆದುಹಾಕಿದೆ. ದೇಶೀಯ ಉತ್ಪಾದನೆಯಲ್ಲಿನ ಸುಧಾರಣೆ ಹಾಗೂ ಆಮದು ಮಾಡಿಕೊಳ್ಳಲಾದ ಎಲ್‌ಪಿಜಿ ಹೊತ್ತ ಹಡಗುಗಳು ಶೀಘ್ರದಲ್ಲೇ ಭಾರತಕ್ಕೆ ತಲುಪಲಿರುವ ಹಿನ್ನೆಲೆಯಲ್ಲಿ, ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಇರಾನ್‌ ಯುದ್ಧದ ಮೊದಲಿಗೆ ಇದ್ದ … Continued

ಇ.ಡಿ.ದಾಳಿ ; ಮಂಜುನಾಥ, ಆಪ್ತರ ಬಳಿ ₹5.5 ಕೋಟಿ ನಗದು, ₹7.8 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆ…!

ಬೆಂಗಳೂರು : ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಹಾಗೂ ಇತರ ಅಧಿಕಾರಿಗಳ ಮನೆ ಮೇಲೆ ಇಡಿ ಅಧಿಕಾರಿಗಳು ನಡೆಸಿದ್ದ ದಾಳಿ ಅಂತ್ಯವಾಗಿದ್ದು ಸುಮಾರು 13 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಈ ಬಗ್ಗೆ ಸಮಗ್ರ ಮಾಹಿತಿ ಬಿಡುಗಡೆ ಮಾಡಿದ್ದಾರೆ. ಬೆಳಗಾವಿ … Continued

ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿ ಸುದ್ದಿ ; ಕರ್ನಾಟಕದ 1.3 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಕೇಂದ್ರ ಸರ್ಕಾರ ಗ್ರೀನ್‌ ಸಿಗ್ನಲ್‌

ಬೆಂಗಳೂರು/ನವದೆಹಲಿ: ಕರ್ನಾಟಕದ ಮಾವು ಬೆಳೆಗಾರರ ತೀವ್ರ ಸಂಕಷ್ಟಕ್ಕೆ ಕೇಂದ್ರ ಸರ್ಕಾರವು ಸ್ಪಂದಿಸಿದೆ. ರಾಜ್ಯದ ಪ್ರಮುಖ ಮಾವು ಉತ್ಪಾದನಾ ವಲಯವಾದ ಕೋಲಾರ-ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧೆಡೆ ಉಂಟಾಗಿದ್ದ ಬೆಲೆ ಕುಸಿತ ಹಾಗೂ ರೈತರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (MIS) ಅಡಿಯಲ್ಲಿ 1.3 ಲಕ್ಷ ಮೆಟ್ರಿಕ್ ಟನ್ (MT) ತೋತಾಪುರಿ ತಳಿಯ ಮಾವನ್ನು ಎಂಐಪಿ (MIP) ಖರೀದಿಸಲು … Continued

ಪುಸ್ತಕಕ್ಕೆ ‘ಕೃಷ್ಣಾ’ ಎಂದು ಹೆಸರಿಟ್ಟಿದ್ದಕ್ಕೆ ಎನ್‌ಸಿಇಆರ್‌ಟಿ ಸ್ಪಷ್ಟನೆ

ನವದೆಹಲಿ: 6ನೇ ತರಗತಿಯ ಕನ್ನಡ (ಆರ್‌3) ಪಠ್ಯಪುಸ್ತಕದ ಶೀರ್ಷಿಕೆ ಮತ್ತು ಅದರಲ್ಲಿನ ವಿಷಯಗಳ ಕುರಿತು ಮಾಧ್ಯಮಗಳ ಕೆಲವು ವಲಯಗಳಲ್ಲಿ ವ್ಯಕ್ತವಾಗಿದ್ದ ಕಳವಳ ಹಾಗೂ ವಿರೋಧಗಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸ್ಪಷ್ಟನೆ ನೀಡಿದೆ. ಭಾಷಾ ಪಠ್ಯಪುಸ್ತಕಗಳಿಗೆ ಭಾರತದ ನದಿಗಳ ಹೆಸರನ್ನಿಡುವ ತನ್ನ ನೀತಿಯನ್ನೇ ಈ ಪುಸ್ತಕಕ್ಕೂ ಅನುಸರಿಸಲಾಗಿದೆ. ಮತ್ತು ಪಠ್ಯದ ವಿಷಯವು … Continued

ಪೋಕ್ಸೊ ಪ್ರಕರಣ ; ವಚನಾನಂದ ಶ್ರೀಗಳ ನಿರೀಕ್ಷಣಾ ಜಾಮೀನು ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ದಾವಣಗೆರೆಯ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ವಿಚಾರಣಾಧೀನ ನ್ಯಾಯಾಲಯವು ಎಫ್‌ಐಆರ್‌ ದಾಖಲಾಗುವುದಕ್ಕೂ ಮುನ್ನ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ಆರೋಪಿಯಾಗಿರುವ ಸ್ವಾಮೀಜಿಗೆ ಪ್ರಕರಣ ದಾಖಲಾಗುವುದಕ್ಕೂ ಒಂದು ವಾರ ಮುಂಚಿತವಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ದಾವಣಗೆರೆಯ ವಿಚಾರಣಾಧೀನ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು … Continued