ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌-ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಮುಂದಿನ ಮೂರು ದಿನ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಆಗಸ್ಟ್‌ ೧ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ … Continued

ಭಾರಿ ಮಳೆ ಮುನ್ಸೂಚನೆ : ಆಗಸ್ಟ್‌ 1ರಂದು ದಕ್ಷಿಣ ಕನ್ನಡ ಜಿಲ್ಲೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರಿ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ- ಪಿಯು ಕಾಲೇಜುಗಳಿಗೆ ಶನಿವಾರ (ಆಗಸ್ಟ್ 1 ರಂದು) ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯು ಆಗಸ್ಟ್‌ 1ರಂದು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿಯಿಂದ ಹಿಡಿದು ದ್ವಿತೀಯ ಪಿಯು ಕಾಲೇಜಿನ ವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ದಕ್ಷಿಣ … Continued

ದೆಹಲಿ ಗಲಭೆ | ಐಬಿ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣ ; ಎಎಪಿ ಮಾಜಿ ಕೌನ್ಸಿಲರ್‌ ತಾಹಿರ್ ಹುಸೇನಗೆ ಜೀವಾವಧಿ ಶಿಕ್ಷೆ

ನವದೆಹಲಿ : 2020ರ ದೆಹಲಿ ಗಲಭೆ ವೇಳೆ ಗುಪ್ತಚರ ಇಲಾಖೆ (ಐಬಿ) ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮಾಜಿ  ಕಾರ್ಪೊರೇಟರ್ ತಾಹಿರ್ ಹುಸೇನ್ ಸೇರಿದಂತೆ ಐವರು ಅಪರಾಧಿಗಳಿಗೆ ದೆಹಲಿಯ ಕರ್ಕರ್ದೂಮಾ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್‌ಜೆ) ಪರ್ವೀನ್ ಸಿಂಗ್ ಅವರು ತಾಹಿರ್ … Continued

ಯಕ್ಷಗಾನದ ಖ್ಯಾತ ಹಾಸ್ಯ ಕಲಾವಿದ ಶ್ರೀಧರ ಭಟ್‌ ಕಾಸರಕೋಡ ನಿಧನ

ಹೊನ್ನಾವರ : ಬಡಗುತಿಟ್ಟಿನ ಯಕ್ಷಗಾನ ರಂಗಭೂಮಿ ಕಂಡ ಅಪರೂಪದ ಹಾಸ್ಯ ಕಲಾವಿದ ಶ್ರೀಧರ ಭಟ್‌ ಕಾಸರಕೋಡ (52) ಅವರು ಶುಕ್ರವಾರ ನಿಧನರಾಗಿದ್ದಾರೆ. ಅವರು ಅಲ್ಪಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೋಗ್ಯದ ಕಾರಣಕ್ಕೆ ಮಣಿಪಾಲ ಆಸ್ಪತ್ರೆಗೆ ಒಯ್ಯುವಾಗ ಮಾರ್ಗಮಧ್ಯೆಯೇ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೂಲತಃ ಹೊನ್ನಾವರ ತಾಲ್ಲೂಕಿನ ಕಾಸರಕೋಡ ಗ್ರಾಮದವರಾದ ಅವರು, ಪ್ರಸ್ತುತ ಸಾಲ್ಕೋಡ್ ಗ್ರಾಮದ ಮುಲ್ಲೆಮಕ್ಕಿಯಲ್ಲಿ … Continued

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧ : ಕರ್ನಾಟಕದ ಹಲವು ಚಿತ್ರಮಂದಿರಗಳಲ್ಲಿ ‘ಜನ ನಾಯಕನ್’ ಪ್ರದರ್ಶನ ರದ್ದು

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿ ಕರ್ನಾಟಕದಾದ್ಯಂತ ರೈತರು ಹಾಗೂ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗಳ ಪರಿಣಾಮವಾಗಿ ನಟ ಹಾಗೂ ತಮಿಳುನಾಡು ಮುಖ್ಯಮಂತ್ರಿ ವಿಜಯ ಅಭಿನಯದ ‘ಜನ ನಾಯಕನ್’ ಚಿತ್ರದ ಪ್ರದರ್ಶನಕ್ಕೆ ಹೊಡೆತ ಬಿದ್ದಿದೆ. ಪ್ರತಿಭಟನೆಗಳ ಹಿನ್ನೆಲೆಯಲ್ಲಿ ರಾಜ್ಯದ ಹಲವು ಚಿತ್ರಮಂದಿರಗಳು ಮುನ್ನೆಚ್ಚರಿಕಾ ಕ್ರಮವಾಗಿ ‘ಜನ ನಾಯಕನ್’ ಚಿತ್ರದ ಪ್ರದರ್ಶನವನ್ನು ಸ್ಥಗಿತಗೊಳಿಸಿದ್ದು, … Continued

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಅಖಂಡ ಕರ್ನಾಟಕ ಬಂದ್‌

ಬೆಂಗಳೂರು : ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ(CWMA)ವು ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರು ಬಿಡುಗಡೆ ಮಾಡಬೇಕು ಎಂದು ನೀಡಿರುವ ನಿರ್ದೇಶನವನ್ನು ಖಂಡಿಸಿ, ರಾಜ್ಯದ ವಿವಿಧ ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ರಾಜ್ಯವ್ಯಾಪಿ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಈ ಕುರಿತು ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ … Continued

ಯೋಗೀಶ ಗೌಡ ಕೊಲೆ ಪ್ರಕರಣ : ವಿನಯ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಶಿಕ್ಷೆ ಅಮಾನತು

ಬೆಂಗಳೂರು : ಧಾರವಾಡದ ಬಿಜೆಪಿ‌ ಮುಖಂಡ ಯೊಗೀಶ ಗೌಡರ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಶಾಸಕ ವಿನಯ ಕುಲಕರ್ಣಿ ಸೇರಿ 10 ಮಂದಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಅರ್ಜಿಗಳನ್ನು ಮಾನ್ಯ ಮಾಡಿರುವ ಪೀಠವು ಜನಪ್ರತಿ‌ನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದುಕೋರಿ ಸಲ್ಲಿಸಲಾಗಿರುವ ಮೇಲ್ಮನವಿಗಳು ಇತ್ಯರ್ಥವಾಗುವವರೆಗೆ ವಿಚಾರಣಾ ನ್ಯಾಯಾಲಯದ … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಜೋರಾದ ಗಾಳಿಮಳೆ ಮುನ್ಸೂಚನೆ ; ಆರೆಂಜ್‌-ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ವಾಯುಭಾರ ಕುಸಿತದಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆ (Rain)ಯಾಗುತ್ತಿದೆ. ಮುಂದಿನ ಎರಡ್ಮೂರು ದಿನ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಆಗಸ್ಟ್ 1ರ ವರೆಗೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ … Continued

ಬೆಂಗಳೂರು | ಮಗಳ ತಿಂಗಳ ಸಂಬಳ, ಭಾವಿ ವರನ ಬಳಿ ₹40 ಲಕ್ಷ ಡಿಮ್ಯಾಂಡ್‌ : ಒಪ್ಪದ್ದಕ್ಕೆ ಮಗಳಿಗೆ ಚಾಕುವಿನಿಂದ ಇರಿದ ತಂದೆ !

ಬೆಂಗಳೂರು: ತಂದೆಯೊಬ್ಬ ತನ್ನ ಮಗಳು ಉತ್ತಮ ಶಿಕ್ಷಣ ಪಡೆದು, ಉತ್ತಮ ಉದ್ಯೋಗ ಮಾಡಿ, ಜೀವನದಲ್ಲಿ ನೆಲೆ ನಿಲ್ಲಬೇಕು ಎಂಬ ಕನಸು ಕಾಣುವುದು ಸಾಮಾನ್ಯ. ಆದರೆ ಕುಟುಂಬದೊಳಗಿನ ಭಿನ್ನಾಭಿಪ್ರಾಯವು ಭೀಕರ ತಿರುವು ಪಡೆದು, ತಂದೆಯೇ ತನ್ನ ಮಗಳ ಮೇಲೆ ಕಾಲೇಜಿನ ಆವರಣದಲ್ಲೇ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜುಲೈ 25ರಂದು ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ … Continued

ವಿಡಿಯೋ | ಜಿಪ್‌ಲೈನ್ ಸಾಹಸ ಸವಾರಿಯಲ್ಲಿ ತಾಂತ್ರಿಕ ದೋಷ : 3500 ಅಡಿ ಆಳದ ಕಂದಕದ ಮೇಲೆ ನೇತಾಡಿದ ಪ್ರವಾಸಿಗ

ಮಹಾರಾಷ್ಟ್ರ: ಜಿಪ್‌ಲೈನ್ ಸಾಹಸ ಸವಾರಿಯಲ್ಲಿ ಗುರುವಾರ ತಾಂತ್ರಿಕ ದೋಷ ಉಂಟಾಗಿ ಪ್ರವಾಸಿಗರೊಬ್ಬರು ಸುಮಾರು 3,500 ಅಡಿ ಆಳದ ಕಂದಕದ ಮೇಲೆಯೇ ನೇತಾಡಿದ ಘಟನೆ ನಡೆದಿದೆ. ಈ ಘಟನೆ ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ತೋರಣಮಲ್‌ನಲ್ಲಿ ಇರುವ ಪ್ರಸಿದ್ಧ ಸೀತಾಖೈ ಪಾಯಿಂಟ್‌ನಲ್ಲಿ ಪ್ರವಾಸಿಗರಿಗಾಗಿ ಹೊಸದಾಗಿ ಆರಂಭಿಸಲಾಗಿರುವ ಜಿಪ್‌ಲೈನ್ ಸಾಹಸ ಸವಾರಿ ವೇಳೆ ಈ ಘಟನೆ ಸಂಭವಿಸಿದೆ. ಈ ಸಾಹಸಮಯ … Continued