ಜುಲೈ 2ಕ್ಕೆ ಕರ್ನಾಟಕದ ಹಲವೆಡೆ ಅತಿ ಭಾರಿ ಮಳೆ ಮುನ್ಸೂಚನೆ ; 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಹವಾಮಾನ ಇಲಾಖೆಯು ಜುಲೈ 2 ಕ್ಕೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಅಲ್ಲದೆ, 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ಹವಾಮಾನ ಕೇಂದ್ರ ಬಿಡುಗಡೆ ಮಾಡಿರುವ ಮುನ್ಸೂಚನೆ ವರದಿಯ ಪ್ರಕಾರ, ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ರಾಜ್ಯದ ಒಳನಾಡಿನ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಲಾಗಿದೆ. ಜುಲೈ 2 ರಂದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಪ್ರದೇಶಗಳಲ್ಲಿ 204.5 ಮಿ.ಮೀ ಗಿಂತಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಹಾಗೂ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ನಂತರ ಜುಲೈ 3 ಹಾಗೂ 4ರಂದು ಆರೆಂಜ್‌ ಅಲರ್ಟ್‌ ನೀಡಲಾಗಿದೆ. ನಂತರ ಮತ್ತೆ ಜುಲೈ 5ರಿಂದ 7ರ ವರೆಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಪ್ರಮುಖ ಸುದ್ದಿ :-   ಭಾರಿ ಮಳೆ ; ಜುಲೈ 2ರಂದು ದ.ಕ. ಜಿಲ್ಲೆಯ ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಪಶ್ಚಿಮ ಘಟ್ಟದ ಸಾಲಿನಲ್ಲಿರುವ ಮಲೆನಾಡು ಮತ್ತು ಅದಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಜುಲೈ 5ರ ವರೆಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಜುಲೈ 5ರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಜುಲೈ 7ರ ವರೆಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಮುಂದುವರೆಯಲಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement