ನಾಯಿ ಕಚ್ಚಿ ಹಾಳಾದ ₹690 ಚಪ್ಪಲಿ ದುರಸ್ತಿಗೆ ನಿರಾಕರಿಸಿದ ಕಂಪನಿಯಿಂದಲೇ ₹5,000 ಪರಿಹಾರ, ಹೊಸ ಚಪ್ಪಲಿ ಪಡೆದ ಗ್ರಾಹಕ…!

ಪಾಲಕ್ಕಾಡು: ದೇವಾಲಯಕ್ಕೆ ತೆರಳಿದ್ದ ವೇಳೆ ಹೊಸದಾಗಿ ಖರೀದಿಸಿದ್ದ ಚಪ್ಪಲಿಯನ್ನು ಬೀದಿ ನಾಯಿಯೊಂದು ಕಚ್ಚಿ ಹಾಳು ಮಾಡಿದ ಘಟನೆಗೆ ಸಂಬಂದಿಸಿದಂತೆ ಗ್ರಾಹಕ ನ್ಯಾಯಾಲಯದ ಮೆಟ್ಟಿಲೇರಿದ್ದ, ಸಾಮಾಜಿಕ ಹಾಗೂ ಪರಿಸರ ಕಾರ್ಯಕರ್ತ ಬೋಬನ್ ಮಟ್ಟುಮಂತ ಅವರಿಗೆ ಮಹತ್ವದ ಜಯ ದೊರೆತಿದೆ. ₹690 ಮೌಲ್ಯದ ಸ್ಲಿಪ್ಪರ್ ಹಾನಿಯಾದ ಪ್ರಕರಣದಲ್ಲಿ ಅದನ್ನು ಉತ್ಪಾದಿಸಿದ ಕಂಪನಿಯು ₹5,000 ಪರಿಹಾರ ನೀಡುವುದರ ಜೊತೆಗೆ ಹೊಸ … Continued

ಇರಾನ್‌ | ಎಲ್ಲಿದ್ದಾರೆ ಮೊಜ್ತಬಾ ? ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಮೂವರು ಪುತ್ರರು ಹಾಜರು ; ಮೊಜ್ತಬಾ ಮಾತ್ರ ಗೈರು !

ತೆಹ್ರಾನ್: ಹತ್ಯೆಯಾದ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಗೆ ಅಂತಿಮ ವಿದಾಯ; ಪುತ್ರ ಮೊಜ್ತಬಾ ಖಮೇನಿ ಗೈರುಹಾಜರಿ ಕುತೂಹಲಕ್ಕೆ ಕಾರಣ ಇರಾನ್‌ನ ಹತ್ಯೆಯಾದ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯವರ ಅಂತಿಮ ವಿಧಿವಿಧಾನಗಳು ಭಾನುವಾರದಿಂದ ಆರಂಭಗೊಂಡಿದ್ದು, ವಾರಪೂರ್ತಿ ನಡೆಯಲಿರುವ ಅಂತಿಮ ಯಾತ್ರೆಗೆ ಸಾವಿರಾರು ಜನರು ಸೇರಿದ್ದಾರೆ. ತೆಹ್ರಾನ್‌ನ ಇಮಾಮ್ ಖೊಮೇನಿ ಗ್ರ್ಯಾಂಡ್ ಮೊಸಲ್ಲಾದಲ್ಲಿ ನಡೆದ … Continued

ಉತ್ತರ ಕನ್ನಡ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ; ಪಿಎಸ್‌ಐ ಬಂಧನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಅಭಿನಂದನ ಅವರನ್ನು ಪೋಕ್ಸೊ (POCSO) ಕಾಯ್ದೆಯಡಿ ಭಟ್ಕಳ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಪ್ರಾಪ್ತ ಬಾಲಕಿಗೆ ಪಿಎಸ್‌ಐ ಅಭಿನಂದನ ಲೈಂಗಿಕ … Continued

ಕಲಬುರಗಿ : ಮೊಬೈಲ್ ಟಾರ್ಚ್ ಬೆಳಕಲ್ಲಿ ಬಸ್ ಚಲಾಯಿಸಿದ ಚಾಲಕ ; ವಿಡಿಯೋ ವೈರಲ್‌

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ)ಕ್ಕೆ ಸೇರಿದ ಬಸ್ ಒಂದು ಹೆಡ್‌ಲೈಟ್‌ಗಳು ಸರಿಯಾಗಿಲ್ಲದೆ ಸಂಚರಿಸಿದ್ದು, ರಸ್ತೆ ಕಾಣುವಂತೆ ಮಾಡಲು ಬಸ್‌ ಕಂಡಕ್ಟರ್‌ ತೋರಿಸಿದ ಮೊಬೈಲ್ ಫೋನ್‌ನ ಟಾರ್ಚ್ ಬೆಳಕಿನಲ್ಲಿ ಚಾಲಕ್‌ ಬಸ್‌ ಓಡಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯು ಕಲಬುರಗಿ ನಗರದಿಂದ … Continued

ತವರು ಮನೆಯಿಂದ ಪತ್ನಿ ಮರಳಿ ಕರೆತರಲು ಹೋದ ವ್ಯಕ್ತಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಬಾವ, ರಕ್ಷಿಸಲು ಹೋದ ಮಹಿಳೆಯೂ ಸಾವು

ತರಣ್ ತಾರಣ್: ಪತ್ನಿಯನ್ನು ಮರಳಿ ಮನೆಗೆ ಕರೆತರಲು ಅತ್ತೆ ಮನೆಗೆ ತೆರಳಿದ್ದ ವ್ಯಕ್ತಿಗೆ ಬಾವನೇ ಬೆಂಕಿ ಹಚ್ಚಿದ್ದರಿಂದ ಆತ ಮೃತಪಟ್ಟಿದ್ದಾರೆ ಹಾಗೂ ಆತನನ್ನು ರಕ್ಷಿಸಲು ಧಾವಿಸಿದ ಮಹಿಳೆಯೂ ತೀವ್ರ ಸುಟ್ಟ ಗಾಯಗಳಿಂದ ಚಿಕಿತ್ಸೆ ವೇಳೆ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ಪಂಜಾಬಿನ ತರಣ್ ತಾರಣ್ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಲವ್‌ಪ್ರೀತ್ ಸಿಂಗ್ ಮತ್ತು ಗುರ್ಜಿತ್ ಕೌರ್ ಎಂದು … Continued

ವಿಡಿಯೋ | ಚಿನ್ನ, ಹಣ ದೋಚಿ ಮಹಿಳೆಯನ್ನು ಬಾವಿಗೆ ತಳ್ಳಿದ ದುಷ್ಕರ್ಮಿ; 21 ಗಂಟೆಗಳ ಕಾಲ ಸಾವಿನೊಂದಿಗೆ ಹೋರಾಡಿ ಬದುಕುಳಿದ ಮಹಿಳೆ

ಕರೀಂನಗರ (ತೆಲಂಗಾಣ) :  ಕೃಷಿ ಬಾವಿಯೊಳಗೆ ಬಿದ್ದಿದ್ದ 55 ವರ್ಷದ ಮಹಿಳೆಯೊಬ್ಬರು ಜೀವ ಉಳಿಸಿಕೊಳ್ಳಲು ಸುಮಾರು 20–21 ಗಂಟೆಗಳ ಕಾಲ ಹರಸಾಹಸ ನಡೆಸಿ ಬದುಕುಳಿದಿರುವ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯ ನುಸ್ತುಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯನ್ನು ದರೋಡೆ ಮಾಡಿ ಆಕೆ ತನ್ನನ್ನು ಗುರುತಿಸಬಹುದು ಎಂಬ ಭಯದಿಂದ ಆಕೆಯನ್ನು ಬಾವಿಗೆ ತಳ್ಳಿದ ಆರೋಪದ ಮೇಲೆ 21 … Continued

ವಿಡಿಯೋ | ಪುಟ್ಟ ಮಕ್ಕಳು ಮಲಗಿದ್ದಾಗಲೇ ಹಾಸಿಗೆಯೊಳಗೆ ಸೇರಿಕೊಂಡಿದ್ದ ಬೃಹತ್‌ ಬೃಹತ್‌ ನಾಗರಹಾವು….!

ಬೆಂಗಳೂರು : ರಾತ್ರಿ ವೇಳೆ ಮನೆಯಲ್ಲಿ ಮಕ್ಕಳು ಮಲಗಿದ್ದಾಗ ಯಾರಿಗೂ ಗೊತ್ತಾಗದಂತೆ ಅವರ ಹಾಸಿಗೆಯೊಳಗೆ ಸೇರಿಕೊಂಡಿದ್ದ 5 ಅಡಿ ಉದ್ದದ ಅಪಾಯಕಾರಿ ನಾಗರಹಾವನ್ನು ಉರಗ ತಜ್ಞರು ಸುರಕ್ಷಿತವಾಗಿ ಹಿಡಿದಿದ್ದು, ಈ ಘಟನೆ ಯಲಹಂಕ ತಾಲೂಕಿನ ಹೆಸರಘಟ್ಟದ ತೋಟಗೆರೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಯಲಹಂಕ ತಾಲೂಕಿನ ಹೆಸರಘಟ್ಟದ ತೋಟಗೆರೆ ಗ್ರಾಮದಲ್ಲಿ ಜುಲೈ 2 ರಾತ್ರಿ 10:50ರ … Continued

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ; ನೂತನ ಮೇಯರ್‌ ಆಗಿ ದುರ್ಗಮ್ಮ ಬಿಜವಾಡ, ಉಪಮೇಯರ್ ಆಗಿ ರತ್ನಾಭಾಯಿ ಆಯ್ಕೆ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್‌ ಆಗಿ ಬಿಜೆಪಿಯ ದುರ್ಗಮ್ಮ ಬಿಜವಾಡ ಹಾಗೂ ಉಪಮೇಯರ್ ಆಗಿ  ರತ್ನಾಬಾಯಿ ನಾಝರೆ ಆಯ್ಕೆಯಾಗಿದ್ದಾರೆ. ಶನಿವಾರ ಪಾಲಿಕೆಯ ಸಭಾಭವನದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಕೈ ಎತ್ತುವ ಮೂಲಕ ಮತದಾನ ನಡೆದು ಇಬ್ಬರೂ ಆಯ್ಕೆಯಾದರು.  ಬಿಜೆಪಿ ಅಭ್ಯರ್ಥಿಗಳ ಪರವಾಗಿ ಸಂಸದರಾದ ಪ್ರಲ್ಹಾದ ಜೋಶಿ, ಎಂ. ನಾಗರಾಜ್, ಶಾಸಕರಾದ ಅರವಿಂದ್ … Continued

ಮಮತಾಗೆ ಮತ್ತೊಂದು ಭಾರಿ ಆಘಾತ ; ತಿಂಗಳ ಹಿಂದಷ್ಟೇ ರಾಜ್ಯಾಧ್ಯಕ್ಷೆಯಾಗಿ ನೇಮಕವಾಗಿದ್ದ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ !

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನುಭವಿಸಿದ ಹಿನ್ನಡೆಯ ನಂತರ ಪಕ್ಷದ ಸಂಘಟನೆಯನ್ನು ಪುನರ್ರಚಿಸಿದ್ದ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಇದೀಗ ಮತ್ತೊಂದು ಭಾರೀ ಆಘಾತ ಎದುರಾಗಿದೆ. ಜೂನ್ 3ರಂದು ಟಿಎಂಸಿಯ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷೆಯಾಗಿ ನೇಮಕಗೊಂಡಿದ್ದ ಚಂದ್ರಿಮಾ ಭಟ್ಟಾಚಾರ್ಯ, ಕೇವಲ ಒಂದು ತಿಂಗಳಲ್ಲೇ ಪಕ್ಷದ ಎಲ್ಲ ಹುದ್ದೆಗಳಿಗೆ … Continued