ಬಲೂಚಿಸ್ತಾನದಲ್ಲಿ ‘ಸ್ವಾತಂತ್ರ್ಯದ ಘೋಷಣೆ’: ಪಾಕ್‌ ಆಕ್ರಮಿತ ಕಾಶ್ಮೀರಕ್ಕಿಂತಲೂ ಇದು ಪಾಕಿಸ್ತಾನಕ್ಕೆ ಹೆಚ್ಚು ಆತಂಕದ ವಿಷಯ ಯಾಕೆ ?

ಬಲೂಚಿಸ್ತಾನವು ಪಾಕಿಸ್ತಾನದಿಂದ ಪ್ರತ್ಯೇಕಗೊಂಡಿದೆ ಎಂದು ಘೋಷಿಸಿಕೊಂಡಿದೆ. ಇದರ ಬೆನ್ನಲ್ಲೇ ಪಾಕಿಸ್ತಾನವು ಒಂದೇ ಸಮಯದಲ್ಲಿ ಎರಡು ವಿಭಿನ್ನ ಭದ್ರತಾ ಮತ್ತು ರಾಜಕೀಯ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ಒಂದೆಡೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK)ದಲ್ಲಿ ಆರ್ಥಿಕ ಸಂಕಷ್ಟ ಮತ್ತು ರಾಜಕೀಯ ಹಕ್ಕುಗಳ ಬೇಡಿಕೆ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದರೆ, ಮತ್ತೊಂದೆಡೆ ಬಲೂಚಿಸ್ತಾನದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರ ದಾಳಿಗಳು ಹೆಚ್ಚಾಗುತ್ತಿವೆ. ಮೊದಲ … Continued

ʼವಂದೇ ಮಾತರಂ’ಗೆ ಅವಮಾನಿಸಿದರೆ ಜೈಲು ಶಿಕ್ಷೆ: ಸಂಸತ್ತಿನಲ್ಲಿ ಮಸೂದೆ ಮಂಡಿಸಲಿರುವ ಅಮಿತ್ ಶಾ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನ ಮುಂಗಾರು ಅಧಿವೇಶನದ ಸೋಮವಾರದ ಕಲಾಪದಲ್ಲಿ ‘ಪ್ರಿವೆನ್ಷನ್ ಆಫ್ ಇನ್ಸಲ್ಟ್ಸ್ ಟು ನ್ಯಾಷನಲ್ ಹಾನರ್ (ತಿದ್ದುಪಡಿ) ಮಸೂದೆ, 2026’ ಅನ್ನು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಮಸೂದೆಯ ಕಾನೂನು ಮತ್ತು ನ್ಯಾಯಾಂಗ ರಕ್ಷಣೆಗಳನ್ನು ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ನೀಡುವ ಉದ್ದೇಶ ಹೊಂದಿದೆ. ಕೇಂದ್ರ … Continued

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಇರಾನ್‌ನಲ್ಲಿ ಇಲ್ವಂತೆ?; ಇಸ್ರೇಲಿ ಮೂಲ ಉಲ್ಲೇಖಿಸಿ ಸೌದಿ ಮಾಧ್ಯಮದ ವರದಿ

ಇರಾನ್‌ನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರು ಪ್ರಸ್ತುತ ಇರಾನ್‌ನಲ್ಲಿಲ್ಲ ಎಂದು ಇಸ್ರೇಲ್‌ನ ಭದ್ರತಾ ಮೂಲವೊಂದು ಹೇಳಿದೆ ಎಂದು ಸೌದಿ ಅರೇಬಿಯಾದ ಅಲ್-ಹದಾಥ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಆದರೆ ಅವರು ಈಗ ಎಲ್ಲಿದ್ದಾರೆ ಎಂಬುದರ ಕುರಿತು ಯಾವುದೇ ಮಾಹಿತಿ ನೀಡಲಾಗಿಲ್ಲ. ಅಲ್ಲದೆ, ಈ ಹೇಳಿಕೆಯನ್ನು ಸಮರ್ಥಿಸುವಂತಹ ಯಾವುದೇ ಸಾಕ್ಷ್ಯ ಅಥವಾ ಅಧಿಕೃತ ದೃಢೀಕರಣವೂ ಲಭ್ಯವಾಗಿಲ್ಲ. … Continued

ತೃಣಮೂಲ ಬಂಡಾಯ ಸಂಸದರನ್ನು ಯಾಕೆ ಆಹ್ವಾನಿಸಿದ್ದೀರಿ ? : ಸರ್ವಪಕ್ಷ ಸಭೆಗೆ ಕೆಲಕಾಲ ಬಹಿಷ್ಕರಿಸಿದ ವಿಪಕ್ಷಗಳು

ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಭಾನುವಾರ ಕೇಂದ್ರ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ, ಹೊಸದಾಗಿ ರಚನೆಯಾದ ʼನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ (ಎನ್‌ಸಿಪಿಐ)ʼಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಸಭೆಯಿಂದ ಕೆಲಕಾಲ ಹೊರನಡೆದರು. ಆದರೆ, ಕೆಲವೇ ನಿಮಿಷಗಳಲ್ಲಿ ಅವರು ಮತ್ತೆ ಸಭೆಗೆ ಮರಳಿದರು. ಕಳೆದ ತಿಂಗಳು ತೃಣಮೂಲ ಕಾಂಗ್ರೆಸ್‌ನ … Continued