ಸಿಜೆಪಿ ಪ್ರತಿಭಟನೆ ವೇಳೆ ಸುಳ್ಳು ಸುದ್ದಿ ಹರಡುತ್ತಿದ್ದ 480ಕ್ಕೂ ಹೆಚ್ಚು ಪಾಕಿಸ್ತಾನದ ಸೋಷಿಯಲ್ ಮೀಡಿಯಾ ಖಾತೆಗಳು ಪತ್ತೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯ ನಡುವೆ ಸುಳ್ಳು ಮಾಹಿತಿ ಹರಡುತ್ತಿರುವ 480ಕ್ಕೂ ಹೆಚ್ಚು ಪಾಕಿಸ್ತಾನ ಮೂಲದ ಸಾಮಾಜಿಕ ಜಾಲತಾಣ ಖಾತೆಗಳನ್ನು ಗುರುತಿಸಲಾಗಿದೆ ಎಂದು ದೆಹಲಿ ಪೊಲೀಸರು ಗುರುವಾರ ತಿಳಿಸಿದ್ದಾರೆ. ಈ ಖಾತೆಗಳಲ್ಲಿ ಬಹಳಷ್ಟು ‘ಆಪರೇಷನ್ ಸಿಂಧೂರ’ ಸಂದರ್ಭದಲ್ಲಿಯೂ ಸಕ್ರಿಯವಾಗಿದ್ದವು ಎಂದು ಪೊಲೀಸರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಸಂದೇಶದಲ್ಲಿ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು, ಪ್ರಸ್ತುತ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ವದಂತಿಗಳು, ನಕಲಿ ಪೋಸ್ಟ್‌ಗಳು ಹಾಗೂ ಎಡಿಟ್‌ ಮಾಡುವ ವಿಡಿಯೊಗಳನ್ನು ಹರಡುವ ಮೂಲಕ ಜನರನ್ನು ಪ್ರಚೋದಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.
“ವಿವಿಧ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ತಪ್ಪು ಮಾಹಿತಿಯನ್ನು ಹರಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದುವರೆಗೆ 480ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳನ್ನು ನಾವು ಗುರುತಿಸಿದ್ದೇವೆ. ಇವುಗಳು ಪ್ರಸ್ತುತ ಪರಿಸ್ಥಿತಿಯ ಲಾಭ ಪಡೆದು ವದಂತಿಗಳನ್ನು ಹರಡುತ್ತಿವೆ. ಈ ಖಾತೆಗಳನ್ನು ನಿರ್ಬಂಧಿಸಲು (ಬ್ಲಾಕ್ ಮಾಡಲು) ಕ್ರಮ ಕೈಗೊಳ್ಳಲಾಗುತ್ತಿದೆ. ಇದೇ ಖಾತೆಗಳು ‘ಆಪರೇಷನ್ ಸಿಂಧೂರ’ ಸಮಯದಲ್ಲಿಯೂ ಸಕ್ರಿಯವಾಗಿದ್ದವು,” ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮಳೆರಾಯನ ಆರ್ಭಟಕ್ಕೆ ತತ್ತರಿಸಿದ ಗುಜರಾತ್: ಹಲವು ನಗರಗಳು ಜಲಾವೃತ, ಗ್ರಾಮಗಳ ಸಂಪರ್ಕ ಕಡಿತ, ನೂರಾರು ಜನರ ಸ್ಥಳಾಂತರ

ಈ ಖಾತೆಗಳ ಪ್ರಮುಖ ಉದ್ದೇಶ ತಪ್ಪು ಮಾಹಿತಿಯನ್ನು ಹರಡುವುದು ಹಾಗೂ ಪರಿಶೀಲಿಸದ ಮತ್ತು ದಾರಿತಪ್ಪಿಸುವ ವಿಷಯಗಳನ್ನು ಆನ್‌ಲೈನ್‌ನಲ್ಲಿ ಹಂಚುವ ಮೂಲಕ ಜನರನ್ನು, ವಿಶೇಷವಾಗಿ ವಿದ್ಯಾರ್ಥಿಗಳನ್ನು ಪ್ರಚೋದಿಸುವುದಾಗಿದೆ ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ ಎಚ್ಚರಿಕೆ ನೀಡಿದ ಅಧಿಕಾರಿ, ನಕಲಿ ಪೋಸ್ಟ್‌ಗಳು, ಎಡಿಟ್‌ ಮಾಡಿದ ವಿಡಿಯೊಗಳು ಹಾಗೂ ಅನಾಮಧೇಯ ಸಾಮಾಜಿಕ ಜಾಲತಾಣ ಖಾತೆಗಳಿಂದ ಹಂಚಲಾಗುವ ಮಾಹಿತಿಯನ್ನು ನಂಬದಂತೆ ಮನವಿ ಮಾಡಿದ್ದಾರೆ. ಗುರುತು ತಿಳಿಯದ ಖಾತೆಗಳಿಂದ ಹಂಚಲಾಗುವ ಇಂತಹ ಮಾಹಿತಿಯಿಂದ ಪ್ರಚೋದಿತರಾಗಬೇಡಿ,” ಎಂದು ಅವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ವಿಷಯವನ್ನು ಹಂಚುವ ಮುನ್ನ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ ಅವರು, “ಯಾವುದೇ ಪೋಸ್ಟ್‌ ಅನ್ನು ಹಂಚುವ ಮೊದಲು ಅದರ ನಿಜಾಂಶಗಳನ್ನು ಖಚಿತಪಡಿಸಿಕೊಳ್ಳಿ. ವದಂತಿಗಳನ್ನು ಹರಡಬೇಡಿ ಹಾಗೂ ಸಮಾಜ ವಿರೋಧಿ ಶಕ್ತಿಗಳು ನಿಮ್ಮ ಭಾವನೆಗಳನ್ನು ದುರುಪಯೋಗಪಡಿಸಿಕೊಳ್ಳಲು ಅವಕಾಶ ನೀಡಬೇಡಿ,” ಎಂದು ಹೇಳಿದ್ದಾರೆ.
“ಶಾಂತಿಯುತ ಪ್ರತಿಭಟನೆ ನಿಮ್ಮ ಹಕ್ಕು. ದೆಹಲಿ ಪೊಲೀಸರು ಈ ಹಕ್ಕನ್ನು ಗೌರವಿಸುತ್ತಾರೆ,” ಎಂದು ಹೇಳಿದ ಅವರು, ಸಾರ್ವಜನಿಕರು ಶಾಂತಿ ಕಾಪಾಡಿಕೊಂಡು ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ವಿಡಿಯೊ | 26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್ ; ಕೇಂದ್ರದ ಭರವಸೆ ಬಳಿಕ ಸೂಪ್ ಸೇವನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement