ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ರಿಲೀಫ್‌ : ಅಮಾನತು ಆದೇಶಕ್ಕೆ ಕೆಎಟಿ ತಡೆ

ಕಲಬುರಗಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನದಲ್ಲಿ ಭಾಗವಹಿಸಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಇಬ್ಬರು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (KAT) ಕಲಬುರಗಿ ಪೀಠ ತಡೆ ನೀಡಿದೆ. ಹುಣಸಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುರುರಾಜ ಜೋಶಿ ಹಾಗೂ ಕುಪ್ಪಿ ಶಾಲೆಯ ಅಣ್ಣಾಸಾಹೇಬ ದೇಶಮುಖ್ ಅವರು … Continued

ಕೆಪಿಎಸ್‌ಸಿ ನೇಮಕಾತಿ ಹಗರಣ: ಮೊದಲ ತಲೆದಂಡ, ಐಎಎಸ್‌ ಅಧಿಕಾರಿ ಜ್ಞಾನೇಂದ್ರಕುಮಾರ ಅಮಾನತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಅಕ್ರಮ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರಕುಮಾರ ಅವರನ್ನು ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಈ ಕುರಿತು ಸರ್ಕಾರ ಹೊರಡಿಸಿರುವ ಆದೇಶದಲ್ಲಿ, ʼಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು–1969ರ ನಿಯಮ 3(2) ಮತ್ತು 3(3)ʼರ ಅಡಿಯಲ್ಲಿ ಜ್ಞಾನೇಂದ್ರಕುಮಾರ ಅವರನ್ನು … Continued

ಕುಮಟಾ : ಕುಂಬೇಶ್ವರ ದೇವಸ್ಥಾನದ ಅರ್ಚಕರ ಕೊಲೆ ಪ್ರಕರಣ ; ಮೂವರಿಗೆ ಜೀವಾವಧಿ ಶಿಕ್ಷೆ

ಕಾರವಾರ : ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕುಮಟಾದ ಅರ್ಚಕರೊಬ್ಬರನ್ನು ಪೂಜೆಯ ನೆಪವೊಡ್ಡಿ ಕರೆದೊಯ್ದು ಭೀಕರವಾಗಿ ಹತ್ಯೆಗೈದು ತೋಟದಲ್ಲೇ ಹೂತುಹಾಕಿದ್ದ ಆರು ವರ್ಷಗಳ ಹಿಂದಿನ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯವು ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಕುಮಟಾದ ಕುಂಭೇಶ್ವರ ದೇವಾಲಯದ ಅರ್ಚಕರಾಗಿದ್ದ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ಕೈಬಿಡಲು ಆಗ್ರಹಿಸಿ ಕಾರವಾರದಲ್ಲಿ ಬೃಹತ್ ಪ್ರತಿಭಟನೆ

ಕಾರವಾರ:  ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮಘಟ್ಟ ಹಾಗೂ ನದಿಕಣಿವೆಗಳ ಪರಿಸರಕ್ಕೆ ಧಕ್ಕೆ ಉಂಟು ಮಾಡುವ ಸಾಧ್ಯತೆ ಇರುವ ಪ್ರಸ್ತಾಪಿತ ಬೇಡ್ತಿ–ವರದಾ ಹಾಗೂ ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆಗಳನ್ನು ಕೈಬಿಡುವಂತೆ ಆಗ್ರಹಿಸಿ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು.  ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿವಿಧ ತಾಲೂಕುಗಳಿಂದ ಆಗಮಿಸಿದ್ದ … Continued

ತೆಲಂಗಾಣ ಕಾಂಗ್ರೆಸ್‌ನಲ್ಲಿ ಬಿರುಗಾಳಿ : ಮಗಳ ಮಾತಿಗೆ ತಾಯಿಯ ಸಚಿವ ಸ್ಥಾನಕ್ಕೆ ಕುತ್ತು: ರೇವಂತ ರೆಡ್ಡಿ ಸಂಪುಟದಿಂದ ದಿಢೀರ್ ವಜಾ !

ಹೈದರಾಬಾದ್: ತೆಲಂಗಾಣ ಕಾಂಗ್ರೆಸ್ ಸರ್ಕಾರದ ಆಂತರಿಕ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಅರಣ್ಯ ಸಚಿವೆ ಕೊಂಡ ಸುರೇಖಾ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಿದ್ದಾರೆ. ಈ ಕುರಿತು ಶಿಫಾರಸು ಪತ್ರವನ್ನು ರಾಜ್ಯಪಾಲ ಶಿವಪ್ರತಾಪ ಶುಕ್ಲಾ ಅವರಿಗೆ ಕಳುಹಿಸಿಕೊಡಲಾಗಿದೆ. ಕೊಂಡ ಸುರೇಖಾ ಅವರ ಮಗಳು ಮುಖ್ಯಮಂತ್ರಿ ರೇವಂತ ರೆಡ್ಡಿ … Continued

ಒಂದೇ ದಿನದಲ್ಲಿ 500ಕ್ಕೂ ಹೆಚ್ಚು ಅಧಿಕ ಅರ್ಜಿಗಳ ವಿಚಾರಣೆ ; ನ್ಯಾಯಮೂರ್ತಿ ನಾಗಪ್ರಸನ್ನ ಮತ್ತೊಂದು ಮೈಲಿಗಲ್ಲು

ಬೆಂಗಳೂರು : ತುರ್ತು ವಿಚಾರಣೆಗೆ ಕೋರಿದ್ದ 250ಕ್ಕೂ ಹೆಚ್ಚು ಅರ್ಜಿಗಳನ್ನು ಬುಧವಾರ ವಿಚಾರಣೆ ನಡೆಸುವ ಮೂಲಕ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಇದೇ ಮೊದಲ ಬಾರಿಗೆ ಹೈಕೋರ್ಟ್‌ ಕಲಾಪಗಳ ಇತಿಹಾಸದಲ್ಲೇ ಹೊಸ ದಾಖಲೆ ಬರೆದರು. ಅವರು ಒಟ್ಟು 550ಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆ ನಡೆಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಬುಧವಾರ (ಸೆಪ್ಟೆಂಬರ್ 2) ಬೆಳಿಗ್ಗೆ … Continued

ಖ್ಯಾತ ಕನ್ನಡ ನಟ ದುನಿಯಾ ವಿಜಯ – ನಾಗರತ್ನ ದಂಪತಿ ವಿಚ್ಛೇದನ : 2 ಕೋಟಿ ಜೀವನಾಂಶ ನೀಡಲು ಆದೇಶ

ಬೆಂಗಳೂರು: ಖ್ಯಾತ ಕನ್ನಡ ನಟ ದುನಿಯಾ ವಿಜಯ ಮತ್ತು ಅವರ ಪತ್ನಿ ನಾಗರತ್ನ ಅವರ ನಡುವಿನ ಸುದೀರ್ಘ ವೈವಾಹಿಕ ವಿವಾದ ಅಂತ್ಯಗೊಂಡಿದೆ. ಗುರುವಾರ ಕರ್ನಾಟಕ ಹೈಕೋರ್ಟ್ ಇಬ್ಬರಿಗೂ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇದರ ಜೊತೆಗೆ, ಪತ್ನಿ ನಾಗರತ್ನ ಅವರಿಗೆ ಒಂದು ಬಾರಿಯ ಕಾಯಂ ಜೀವನಾಂಶವಾಗಿ (ಅಲಿಮೋನಿ) 2 ಕೋಟಿ ರೂಪಾಯಿ ಪಾವತಿಸುವಂತೆ ನಟ … Continued

ಪಾಕ್ ಯುದ್ಧವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ: ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರ್ಪಡೆ ; ವರದಿ

ನವದೆಹಲಿ: 2019ರ ಭಾರತ-ಪಾಕಿಸ್ತಾನ ವೈಮಾನಿಕ ಕಾದಾಟದ ನಂತರ ಜಾಗತಿಕ ಮಟ್ಟದಲ್ಲಿ ಮನೆಮಾತಾಗಿದ್ದ ಭಾರತೀಯ ವಾಯುಪಡೆಯ ಮಾಜಿ ಗ್ರೂಪ್ ಕ್ಯಾಪ್ಟನ್ ಹಾಗೂ ವೀರ ಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್ ವಾಯುಪಡೆಯ ಸೇವೆಯಿಂದ ಅವಧಿಪೂರ್ವ ನಿವೃತ್ತಿ (Premature Retirement) ಪಡೆದಿದ್ದಾರೆ. ಪ್ರಸ್ತುತ ಅವರು  ಗೋವಾ ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆಯಾದ ‘ಫ್ಲೈ91’ (FLY91) ಗೆ ಕಮರ್ಷಿಯಲ್ ಪೈಲಟ್ ಆಗಿ … Continued

ಬೆಂಗಳೂರು : ಓವರ್‌ಟೇಕ್‌ ವಿಚಾರಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ: ನಟ ದುನಿಯಾ ವಿಜಯ ಪುತ್ರನ ವಿರುದ್ಧ ದೂರು

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದುನಿಯಾ ವಿಜಯ ಅವರ ಪುತ್ರ ಸಾಮ್ರಾಟ ವಿರುದ್ಧ ಸಹಪಾಠಿಯ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದ ಓವರ್‌ಟೇಕ್‌ ಮಾಡಿದ ಹಿನ್ನೆಲೆಯಲ್ಲಿ ಈ ಗಲಾಟೆ ನಡೆದಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ದೂರಿನ ಪ್ರಕಾರ, ಸಾಮ್ರಾಟ ಹಾಗೂ ಅವರ ಸ್ನೇಹಿತರು ಜಿಪ್ಸಿ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಆರ್‌.ಆರ್‌.ನಗರದ … Continued

ಹಲ್ಲುಗಳ ನಡುವಿನ ಕೊಳೆ ತಾನೇ ಪತ್ತೆಹಚ್ಚಿ ಸ್ವಚ್ಛಗೊಳಿಸುವ ಎಐ(AI) ಕ್ಯಾಮೆರಾ-ಜೆಟ್ ತಂತ್ರಜ್ಞಾನದ ಟೂತ್‌ಬ್ರಶ್‌ ಈಗ ಲಭ್ಯ

ಹಲ್ಲುಗಳನ್ನು ಆರೋಗ್ಯಕರವಾಗಿಡಲು ಸಾಮಾನ್ಯವಾಗಿ ಬ್ರಷ್ ಮಾಡುವುದು, ಹಲ್ಲುಗಳ ನಡುವಿನ ಭಾಗವನ್ನು ಫ್ಲಾಸ್‌ನಿಂದ ಸ್ವಚ್ಛಗೊಳಿಸುವುದು ಮತ್ತು ಮೌತ್‌ರಿನ್ಸ್ ಬಳಸುವುದು ಅಗತ್ಯ. ಆದರೆ ಈ ಮೂರು ಕೆಲಸಗಳನ್ನು ಒಂದೇ ಸಾಧನದ ಮೂಲಕ ಸುಲಭಗೊಳಿಸುವ ಉದ್ದೇಶದಿಂದ ಡೈಸನ್ (Dyson) ಸಂಸ್ಥೆ ಹೊಸ ‘ಕ್ಯಾಮೆರಾಜೆಟ್’ (CameraJet) ಸ್ಮಾರ್ಟ್ ಟೂತ್‌ಬ್ರಶ್ ಅನ್ನು ಬಿಡುಗಡೆ ಮಾಡಿದೆ. ಕೃತಕ ಬುದ್ಧಿಮತ್ತೆ (AI) ಆಧಾರಿತ ಕ್ಯಾಮೆರಾವನ್ನು ಹೊಂದಿರುವ … Continued