ಸೌದಿ ಅರೇಬಿಯಾದ ಮದೀನಾ ಬಳಿ ಬಸ್-ಟ್ಯಾಂಕರ್ ಡಿಕ್ಕಿ: 42 ಭಾರತೀಯರು ಮೃತಪಟ್ಟಿರುವ ಶಂಕೆ

ಮದೀನಾ: ಉಮ್ರಾ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಜನರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ. ಈ ದುರಂತವು ಸೌದಿ ಅರೇಬಿಯಾದ ಮದೀನಾ ಬಳಿ ಸಂಭವಿಸಿದ್ದು, ಸೌದಿ ಅರೇಬಿಯಾದ ಸ್ಥಳೀಯ ಮಾಧ್ಯಮಗಳ ಪ್ರಕಾರ, ಮೃತಪಟ್ಟವರಲ್ಲಿ ಹೆಚ್ಚಿನವರು ಭಾರತೀಯ ಪ್ರಜೆಗಳು ಎಂದು ನಂಬಲಾಗಿದೆ.
ಬಸ್ ಮಕ್ಕಾದಿಂದ ಮದೀನಾಗೆ ತೆರಳುತ್ತಿದ್ದಾಗ, ಭಾರತೀಯ ಕಾಲಮಾನ ಸುಮಾರು ಬೆಳಗಿನ ಜಾವ 1:30 ರ ಸುಮಾರಿಗೆ ಮುಫ್ರಿಹಾತ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.
ಖಲೀಜ್ ಟೈಮ್ಸ್ ವರದಿಯ ಪ್ರಕಾರ, ಬಸ್‌ನಲ್ಲಿದ್ದ ಹೆಚ್ಚಿನ ಪ್ರಯಾಣಿಕರು ತೆಲಂಗಾಣದ ಹೈದರಾಬಾದ್‌ನವರು ಆಗಿದ್ದರು.
ಗಲ್ಫ್ ನ್ಯೂಸ್ ವರದಿಯ ಪ್ರಕಾರ, ಡಿಕ್ಕಿಯಾದ ನಂತರ ಬಸ್ ಬೆಂಕಿಗೆ ಆಹುತಿಯಾಗಿದ್ದು, ಅಪಘಾತದ ಸಮಯದಲ್ಲಿ ಅನೇಕ ಪ್ರಯಾಣಿಕರು ನಿದ್ರೆಯಲ್ಲಿದ್ದ ಕಾರಣ ಅವರಿಗೆ ತಪ್ಪಿಸಿಕೊಳ್ಳಲು ಅವಕಾಶವಾಗಲಿಲ್ಲ. ಮೃತರ ಪೈಕಿ ಕನಿಷ್ಠ 11 ಮಹಿಳೆಯರು ಮತ್ತು 10 ಮಕ್ಕಳು ಸೇರಿದ್ದಾರೆ ಎಂದು ವರದಿ ತಿಳಿಸಿದೆ, ಆದರೆ ಅಧಿಕಾರಿಗಳು ಇನ್ನೂ ಸಂಖ್ಯೆಗಳನ್ನು ದೃಢಪಡಿಸಿಲ್ಲ.

ತೆಲಂಗಾಣ ಸರ್ಕಾರದ ಕ್ರಮ
ತೆಲಂಗಾಣ ಸರ್ಕಾರವು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದೆ ಎಂದು ತಿಳಿಸಿದೆ. ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಅಧಿಕಾರಿಗಳಿಗೆ ರಾಯಭಾರ ಕಚೇರಿಯ ಅಧಿಕಾರಿಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸಲು ಸೂಚಿಸಿದ್ದಾರೆ.
ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಬಸ್ ಬೆಂಕಿ ಹತ್ತಿಕೊಂಡಾಗ ಅದರಲ್ಲಿ 42 ಉಮ್ರಾ ಯಾತ್ರಾರ್ಥಿಗಳು ಇದ್ದರು ಎಂದು ಹೇಳಿದ್ದಾರೆ. ಅವರು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಡೆಪ್ಯೂಟಿ ಚೀಫ್ ಆಫ್ ಮಿಷನ್ (DCM) ಜೊತೆ ಸಂಪರ್ಕದಲ್ಲಿದ್ದು, ಅಪಘಾತದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
ಮೃತರ ದೇಹಗಳನ್ನು ಭಾರತಕ್ಕೆ ತರಲು ಮತ್ತು ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ಓವೈಸಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿ :-   200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement