ಕಬಡ್ಡಿ ಆಟದಲ್ಲಿ ರೈಡ್‌ ಮಾಡುತ್ತಿರುವಾಗಲೇ ಆಟಗಾರ ಕುಸಿದ ಬಿದ್ದು ಸಾವು : ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಚೆನ್ನೈ: 22ರ ಹರೆಯದ ವಿದ್ಯಾರ್ಥಿಯೊಬ್ಬ ಭಾನುವಾರ ರಾತ್ರಿ ಪನ್ರುತಿ ಸಮೀಪದ ಮನಡಿಕುಪ್ಪಂನಲ್ಲಿ ಕಬಡ್ಡಿ ಆಡುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತ ಆಟಗಾರನನ್ನು ವಿಮಲ್‌ರಾಜ್ ಎಂದು ಗುರುತಿಸಲಾಗಿದ್ದು, ಸೇಲಂ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್‌ಸಿ ಪ್ರಾಣಿಶಾಸ್ತ್ರ ವ್ಯಾಸಂಗ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕಡಲೂರು ಜಿಲ್ಲೆಯ ಕಡಂಪುಲಿಯೂರು ಸಮೀಪದ ಪುರಂಗಿಣಿ ಗ್ರಾಮದವರಾದ ವಿಮಲ್‌ರಾಜ್ ಅವರು ಮನ್ನಾಡಿಕುಪ್ಪಂನಲ್ಲಿ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮುರಟ್ಟು ಕಾಳೈ ತಂಡದ ಪರ ಆಡುತ್ತಿದ್ದರು. ಮೃತ ವಿಮಲರಾಜ್ ವಾರಾಂತ್ಯಕ್ಕೆ ಮನೆಗೆ ಬಂದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸೋಮವಾರ ಸಂಜೆ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮುರಟ್ಟು ಕಾಳಾಯಿ ತಂಡವನ್ನು ಪ್ರತಿನಿಧಿಸುತ್ತಿದ್ದರು. ಅವರು ಆಟದಲ್ಲಿ ರೈಡ್‌ಗೆ ಹೋದಾಗ, ಎದುರಾಳಿ ತಂಡದ ಸದಸ್ಯರು ಅವರನ್ನು ಕೆಳಕ್ಕೆ ಎಳೆದ ತಕ್ಷಣ ಅವರು ನೆಲದ ಮೇಲೆ ಕುಸಿದರು. ತಕ್ಷಣ ಅವರನ್ನು ಪಂರುತಿ ಜನರಲ್ ಆಸ್ಪತ್ರೆಗೆ ದಾಖಲಿಸಿದರು.

ತಕ್ಷಣ ಅವರನ್ನು ಪನ್ರುತಿ ಜನರಲ್ ಆಸ್ಪತ್ರೆಗೆ ಒಯ್ಯಲಾಯಿತು, ವೈದ್ಯರು ವಿಮಲ್‌ರಾಜ್‌ ಮೃತಪಟ್ಟಿರುವುದಾಗಿ ಘೋಷಿಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ವಿಲ್ಲುಪುರಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ. ಕಡಂಪುಲಿಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅವರು ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...| ಶಿವಸೇನೆ ನಾಯಕಿ ಕರೆದೊಯ್ಯಲು ಬಂದಿದ್ದ ಹೆಲಿಕಾಪ್ಟರ್ ಅಪಘಾತ

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement