ಬಿಜೆಪಿಯಲ್ಲಿ ಈಗ ಆಡಿಯೋ ಸಂಚಲನ: ಪೊಲೀಸ್‌ ದೂರು ಕೊಡದೆ ಸಿಎಂಗೆ ಪತ್ರ ಬರೆಯುವೆ ಎಂದು ಕಟೀಲು ಹೇಳಿದ್ಯಾಕೆ..?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬಲದಾವಣೆ ಕುರಿತಾಗಿನ ಆಡಿಯೊವೊಂದು ರಾಜ್ಯ ರಾಜಕೀಯ ವಲಯದಲ್ಲಿ ಅಲ್ಲೋಲ- ಕಲ್ಲೋಲ ಸೃಷ್ಟಿಸಿದೆ.ಇದು ಭಾನುವಾರ ಸಂಜೆ ವೈರಲ್ ಆಗಿದ್ದು, ಈ ಆಡಿಯೋ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರಿಗೆ ಸೇರಿದ್ದು ಎಂದೇ ಬಿಂಬಿತವಾಗಿದೆ. ಆದರೆ ಕಟೀಲ ಈ ಬಗ್ಗೆ ಮಾತನಾಡಿದ್ದು, ಈ ಅಡಿಯೋ ನನ್ನದಲ್ಲ, ಇದನ್ನು ಯಾರು ಮಾಡಿದ್ದಾರೋ ನನಗೆ ಗೊತ್ತಿಲ್ಲ. ನಮ್ಮ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಮಾತೇ ಇಲ್ಲ. ನನ್ನ ಅಡಿಯೋ ಫೇಕ್ ಮಾಡಿರುವ ಬಗ್ಗೆ ಮುಖ್ಯಮಂತ್ರಿಗಳಿಗೆ ದೂರು ಕೊಟ್ಟು ತನಿಖೆಗೆ ಕೋರುತ್ತೇನೆ ಎಂದು ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡಿದ್ದಾರೆ.
ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ದೂರು ನೀಡುವ ವಿಚಾರ ಪ್ರಸ್ತಾಪ ಮಾಡುವ ಬದಲು ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೇಕು ದೂರು ನೀಡಿಲ್ಲ ಎಂಬ ಪ್ರಶ್ನೆಯೂ ಉದ್ಭವವಾಗಿದೆ. ಕಟೀಲು ಅವರಿಗೆ ಈ ಅಡಿಯೋ ಸೇರಿದ್ದು ಅಲ್ಲ ಎನ್ನುತ್ತಿದ್ದರೆ ಮೊದಲು ಅವರು ಮುಖ್ಯಮಂತ್ರಿಗೆ ದೂರು ನೀಡುವುದಲ್ಲ. ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಬೇಕಿತ್ತು ಎಂಬ ಅಭಿಪ್ರಾಯಗಳೂ ವ್ಯಕ್ತವಾಗಿವೆ.
ಪೊಲೀಸ್ ದೂರು ಕೊಡಲು ಯಾಕೆ ಹಿಂದೇಟು..?:
ನನ್ನ ಹೆಸರಿನಲ್ಲಿ ಯಾರೋ ಮಾತನಾಡಿದ್ದಾರೆ. ಈ ಆಡಿಯೋದಿಂದ ಮುಖ್ಯಮಂತ್ರಿಗಳ ಘನತೆಗೆ ಕುತ್ತು ಬಂದಿದೆ. ಇದನ್ನು ಸಾಮಾಜಿಕ ಜಾಲ ತಾಣದಲ್ಲಿ ಬಿಡುಗಡೆ ಮಾಡಿದ್ದಾರೆ ಎಂದು ಪೊಲೀಸ್‌ ದೂರು ಕೊಡಬೇಕಿತ್ತು. ಮಾತ್ರವಲ್ಲ ತನ್ನ ಧ್ವನಿ ಮಾದರಿಯನ್ನು ಪೊಲೀಸರ ಮೂಲಕ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಒಳಪಡಿಸಿಕೊಳ್ಳಬೇಕಿತ್ತು. ಇದು ಕಾನೂನಾತ್ಮಕವಾಗಿ ತಾನು ತಪ್ಪೇ ಮಾಡಿಲ್ಲ ಎಂಬುದನ್ನು ಸಾಬೀತು ಪಡಿಸಿಕೊಳ್ಳಲು ಇರುವ ಏಕೈಕ ದಾರಿ.ಆದರೆ ಅವರು ಯಾಕೆ ಹಾಗೆ ಮಾಡುತ್ತಿಲ್ಲ ಎಂಬುದರ ರಾಜಕೀಯ ವಲಯದಲ್ಲಿರುವ ಹಲವರ ಪ್ರಶ್ನೆ.
ಹೀಗಾಗಿ ನಳಿನಕುಮಾರ ಕಟೀಲು ಅವರು ಸದ್ಯ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡರೆ ಸಾಕು ಎಂಬ ರೀತಿಯಲ್ಲಿ ಮುಖ್ಯಮಂತ್ರಿಗೆ ಈ ಬಗ್ಗೆ ದೂರು ನೀಡಿ ವಷಯ ತಣ್ಣಗಾಗಿಸಲು ಹೊರಟಿದ್ದಾರೆ ಎಂದು ಬಿಜೆಪಿ ವಲಯದಲ್ಲಿಯೇ ಕೆಲವರು ಹೇಳುತ್ತಾರೆ.
ತಮ್ಮದೆಂದು ಹೇಳಲಾಗುತ್ತಿರುವ ಆಡಿಯೋ ಬಗ್ಗೆ ಇದು ತಮ್ಮದಲ್ಲ ಎಂದು ಕಟೀಲು ಅವರು ಈವರೆಗೆ ದೂರು ನೀಡಿಲ್ಲ. ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಎಂದಷ್ಟೇ ಹೇಳಿದ್ದಾರೆ. ವಾಸ್ತವದಲ್ಲಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದರೆ, ಅವರು ಕೂಡ ಇದನ್ನು ತನಿಖೆ ಮಾಡಿ ಎಂದು ಪೊಲೀಸರಿಗೆ ದೂರು ನೀಡಬೇಕು. ಇಲ್ಲವೇ ಆ ಆಡಿಯೋ ಸಂಗ್ರಹಿಸಿ, ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ . ಇವರ ಧ್ವನಿ ಹಾಗೂ ಆಡಿಯೋ ಧ್ವನಿಗೆ ಹೋಲಿಕೆಯಾಗುತ್ತಿಲ್ಲ ಎಂಬುದು ಸಾಬೀತಾದರೆ ಮಾತ್ರ ಬೇರೆ ಯಾರೋ ಕಟೀಲು ಅವರ ಧ್ವನಿ ಅನುಕರಣೆ ಮಾಡಿ ಮಾತನಾಡಿರುವ ಅಡಿಯೋ ಎಂಬ ತೀರ್ಮಾನಕ್ಕೆ ಬರಬೇಕಾಗುತ್ತದೆ. ಈ ವಾಸ್ತವ ಗೊತ್ತಿದ್ದರೂ ಕಟೀಲು ಅವರು ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಎಂಬಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆಯುತ್ತೇನೆ ಎಂದು ಹೇಳುತ್ತೀದ್ದಾರೆ. ಈ ಬಗ್ಗೆ ಬಿಜೆಪಿ ವಲಯದಲ್ಲಿಯೇ ಸ್ಪಷ್ಟತೆ ಇಲ್ಲ.
ಒಂದು ನಳೀನ್ ಕುಮಾರ್ ಕಟೀಲು ಮಾತನಾಡಿದ್ದಾರೆ ಎನ್ನಲಾದ ವೈರಲ್ ಅಗಿರುವ ಆಡಿಯೋದಲ್ಲಿ ಕಟೀಲು ಅವರ ಮಾತು ಮಾತ್ರ ಇದ್ದು, ಇದನ್ನು ವ್ಯವಸ್ಥತಿವಾಗಿ ಸೋರಿಕೆ ಮಾಡಲಾಗಿದೆಯೇ ಎಂಬ ಪ್ರಶ್ನೆ ಸಹ ಉದ್ಭವಿಸುತ್ತದೆ. ಯಾಕೆಂದರೆ ಕಟೀಲು ಯಾರ ಜೊತೆ ಇದನ್ನು ಮಾತನಾಡಿದ್ದಾರೆಯೋ ಅವರ ಧ್ವನಿ ಇದರಲ್ಲಿ ಇಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ ಅದರ ಒರಿಗಿನಲ್‌ ಧ್ವನಿ ಮುದ್ರಿಕೆ ಸಿಕ್ಕಿದರೆ ಈ ಆಡಿಯೋಕ್ಕೆ ಇನ್ನಷ್ಟು ಸ್ಪಷ್ಟತೆ ಸಿಗಬಹುದು.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement