ಶಿರಸಿ : ಬಂಡಲ ಬಳಿ ಬಸ್‌-ಕಾರು ಡಿಕ್ಕಿ, ಐವರು ಸಾವು

ಶಿರಸಿ: ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕುಮಟಾ-ಶಿರಸಿ ಹೆದ್ದಾರಿಯ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಬಳಿ ನಡೆದಿದೆ ಎಂದು ವರದಿಯಾಗಿದೆ.
ಅಪಘಾತದಲ್ಲಿ ಮಂಗಳೂರು ತಾಲೂಕಿನ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಕಾರು ಚಾಲಕ ಚೆನ್ನೈ ಮೂಲದವರು ಎಂದು ಹೇಳಲಾಗಿದೆ.
ಮೃತರನ್ನು ದಕ್ಷಿಣ ಕನ್ನಡದ ಮಂಗಳೂರು ತಾಲೂಕಿನ ಕಿನ್ನಿಕಂಬಳದ ರಾಮಕೃಷ್ಣರಾವ್ ಬಾಬುರಾವ್ (71), ವಿದ್ಯಾಲಕ್ಷ್ಮಿ ಕೊಂ ರಾಮಕೃಷ್ಣರಾವ್ (67) ಪುಷ್ಪಾ ಮೋಹನ ರಾವ್ (62), ಸುಹಾಸ ಗಣೇಶ್ ರಾವ್ (30) ಹಾಗೂ ಚೆನ್ನೈನ ಅರವಿಂದ (45) ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿರಸಿ ಕಡೆಯಿಂದ ಕುಮಟಾಕ್ಕೆ ಹೋಗುತ್ತಿದ್ದ ಬಸ್‌ ಹಾಗೂ ಕುಮಟಾ ಕಡೆಯಿಂದ ಶಿರಸಿ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಶಿರಸಿ ರಾಘವೆಂದ್ರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಮದುವೆ ಸಮಾರಂಭಕ್ಕೆ  ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಬಸ್ ನಲ್ಲಿ ಐವತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಪ್ರಯಾಣಿಕರಿಗೆ ಕೂಡ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ: ಸರ್ಕಾರದ ಆದೇಶ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement