ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಪ್ರಕಾರ ಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಭೇದ ಭಾವ ಮಾಡದೆ ಕಾನೂನು ಕ್ರಮ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನ ಆರ್.ಟಿ.ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಆಗಲಿ, ನಿಯಮ ಉಲ್ಲಂಘಿಸಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ಪ್ರಕರಣ ದಾಖಲಿಸಬೇಕು. ಅದರಂತೆ ಈಗ ಎಫ್‌ಐಆರ್ ದಾಖಲು ಮಾಡಿದ್ದೇವೆ. ಮುಂದೆ ಪ್ರಕರಣ ದಾಖಲಿಸಿರುವ ಸೆಕ್ಷನ್ ಅಡಿಯಲ್ಲಿ ಕ್ರಮ ನಡೆಯಲಿದೆ ಕಾನೂನಿನ ಮುಂದೆ ಎಲ್ಲರೂ ಒಂದೇ. ದೊಡ್ಡವರು, ಚಿಕ್ಕವರು ಎಂಬ ಭೇದ ಇಲ್ಲ. ಪಾದಯಾತ್ರೆಯ ಸಂಘಟಕರು ಹಾಗೂ ಪ್ರಮುಖ ಸಂಘಟಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಮುಂದೆ ಕಾನೂನು ತನ್ನ ಕೆಲಸ ಮಾಡುತ್ತದೆ ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೋವಿಡ್ ಪರೀಕ್ಷೆಗೆ ಬಂದ ಆರೋಗ್ಯ ಕಾರ್ಯಕರ್ತರ ಮೇಲೆ ಕೂಗಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸರ್ಕಾರದ ನಿಯಮದಂತೆ ಎಲ್ಲರ ಕೊರೊನಾ ಪರೀಕ್ಷೆ ನಡೆದಿದೆ. ಅದರಂತೆ ಡಿ.ಕೆ. ಶಿವಕುಮಾರ್ ಅವರಿಗೂ ತಪಾಸಣೆ ಮಾಡಲು ಆರೋಗ್ಯ ಕಾರ್ಯಕರ್ತರು ಹೋಗಿದ್ದಾರೆ. ಅವರು ಈ ರೀತಿ ಬಾಯಿಗೆ ಬಂದ ಹಾಗೆ ಮಾತನಾಡಿರುವುದು ಸರಿಯಲ್ಲ ಎಂದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೀತಿಯೇ ಸಿದ್ದು, ಪರಮೇಶ್ವರ ವೀಡಿಯೊ ಹೊರಬರಬಹುದು : ರಮೇಶ ಜಾರಕಿಹೊಳಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement