ಕಾನ್ಪುರ: ಚುನಾವಣಾ ಆಯೋಗವು ಕೋವಿಡ್ ಕುರಿತು ಸಮಾವೇಶ, ಸಭೆ-ಸಮಾರಂಭಗಳನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಅಭ್ಯರ್ಥಿಗಳು ಮನೆ-ಮನೆಗೆ ಭೇಟಿ ನೀಡುತ್ತಿದ್ದಾರೆ.
ಕಾನ್ಪುರದಿಂದ ವ್ಯಾಪಕವಾಗಿ ಹಂಚಿಕೊಂಡ ವಿಡಿಯೊವೊಂದರಲ್ಲಿ ಬಿಜೆಪಿ ಶಾಸಕರೊಬ್ಬರು ಮತದಾರ ಸ್ನಾನದ ಮಾಡುತ್ತಿರುವಾಗಲೇ ಭೇಟಿ ಮಾಡಿ ವಿಚಾರಿಸಿದ ವಿಡಿಯೊವೊಂದು ಈಗ ಸುದ್ದಿ ಮಾಡುತ್ತಿದೆ.
ಕಾನ್ಪುರದ ಬಿಜೆಪಿ ಶಾಸಕ ಸುರೇಂದ್ರ ಮೈತಾನಿ ಅವರು ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿರುವಾಗ ಜನರೊಂದಿಗೆ ಸಂವಹನ ನಡೆಸುತ್ತಿರುವ ಹಲವಾರು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ, ಕೆಲವರು ಹಣೆಗೆ ತಿಲಕವನ್ನು ಹಚ್ಚಿದ್ದಾರೆ. ಆದರೆ ವೈರಲ್ ಆಗಿರುವ ಈ ವಿಡಿಯೊದಲ್ಲಿ, ಶಾಸಕರು ವ್ಯಕ್ತಿಯೊಬ್ಬ ಸ್ನಾನ ಮಾಡುತ್ತಿರುವಾಗ ಆ ವ್ಯಕ್ತಿಯೊಂದಿಗೆ ಮಾತನಾಡುತ್ತಾರೆ; ಶಾಸಕರು ಪ್ರಶ್ನೆಗಳನ್ನು ಕೇಳಲು ಪ್ರಾರಂಭಿಸಿದರು.
ಎಲ್ಲವೂ ಚೆನ್ನಾಗಿದೆಯೇ? ನಿಮ್ಮ ಮನೆಯನ್ನು ಸರಿಯಾಗಿ ನಿರ್ಮಿಸಲಾಗಿದೆಯೇ? ನಿಮ್ಮ ಬಳಿ ಪಡಿತರ ಚೀಟಿ ಇದೆಯೇ” ಎಂದು ಶಾಸಕರು ಸ್ನಾನದ ಮಧ್ಯದಲ್ಲಿದ್ದ ವ್ಯಕ್ತಿಯನ್ನು ಕೇಳುತ್ತಾರೆ.
“ಹೌದು, ಹೌದು,” ಎಂದು ಮೈಗೆ ಸಾಬೂನು ಹಚ್ಚುತ್ತಲೇ ಆ ವ್ಯಕ್ತಿ ಉತ್ತರಿಸುತ್ತಾನೆ..! ಬಿಜೆಪಿ ಶಾಸಕರು ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.
ವಸತಿ ಯೋಜನೆಯಡಿ ಮನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ನಾನು ಫಲಾನುಭವಿಯೊಬ್ಬರ ಮನೆಗೆ ತೆರಳಿ ಅವರನ್ನು ಅಭಿನಂದಿಸಿದ್ದೇನೆ. ನಾನು ಕಮಲ (ಬಿಜೆಪಿ ಚಿಹ್ನೆ) ಒತ್ತಿ ಮತ್ತು ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡುವಂತೆ ವಿನಂತಿಸಿದೆ” ಎಂದು ಶಾಸಕರು ಬರೆದಿದ್ದಾರೆ.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.
ನಿಮ್ಮ ಕಾಮೆಂಟ್ ಬರೆಯಿರಿ