ನವ ದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ 9.5 ಕೋಟಿಗೂ ಹೆಚ್ಚು ರೈತ ಫಲಾನುಭವಿಗಳಿಗೆ 20,000 ಕೋಟಿ ರೂ.ಗಳ ಎಂಟನೇ ಕಂತನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬಿಡುಗಡೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಹಾಜರಿದ್ದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಾತನಾಡಿ, ಪಶ್ಚಿಮ ಬಂಗಾಳವು ಈ ಯೋಜನೆಗೆ ಸೇರ್ಪಡೆಗೊಂಡಿದ್ದು, ರಾಜ್ಯದ 7 ಲಕ್ಷಕ್ಕೂ ಹೆಚ್ಚು ರೈತರು ಇಂದು ಇದರ ಲಾಭ ಪಡೆಯುತ್ತಿದ್ದಾರೆ ಎಂದರು.
ಪಿಎಂ-ಕಿಸಾನ್ ಯೋಜನೆಯಡಿ ಸರ್ಕಾರವು ವಾರ್ಷಿಕವಾಗಿ 14 ಕೋಟಿ ರೈತರಿಗೆ ಮೂರು ಸಮಾನ ಕಂತುಗಳಲ್ಲಿ 6,000 ರೂ. ನೇರ ಲಾಭ ವರ್ಗಾವಣೆ (ಡಿಬಿಟಿ) ಮೋಡ್ ಮೂಲಕ ಮೊತ್ತವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ.
2019 ರ ಫೆಬ್ರವರಿ 24 ರಂದು ಪ್ರಾರಂಭಿಸಲಾದ ಪಿಎಂ-ಕಿಸಾನ್ ಯೋಜನೆಯಡಿ ಇದುವರೆಗೆ 1.15 ಲಕ್ಷ ಕೋಟಿ ರೂ.ಗಳನ್ನು ರೈತ ಫಲಾನುಭವಿಗಳಿಗೆ ವರ್ಗಾಯಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ