ಬೆಳಗಾವಿ : ಭಾರಿ ಮಳೆಯ ನಡುವೆ ಮಹದಾಯಿ ಜಲಾನಯನ ಪ್ರದೇಶಕ್ಕೆ ಇಂದು, ಭಾನುವಾರ (ಜುಲೈ 7) ಕೇಂದ್ರದ ಪ್ರವಾಹ ತಂಡದ ಸದಸ್ಯರು ಭೇಟಿ ನೀಡಿದ್ದಾರೆ.
ಕರ್ನಾಟಕ ಮತ್ತು ಗೋವಾ ಗಡಿಯ ಚೋರ್ಲಾ ಘಾಟ್ ಪ್ರದೇಶ ಹಾಗೂ ಹರತಾಳ ನಾಲೆ ಬಳಿ ಮಳೆಯಲ್ಲಿ ತಂಡದ ಸದಸ್ಯರು ವೀಕ್ಷಣೆ ನಡೆಸಿದರು. ಕೇಂದ್ರದ ಪ್ರವಾಹ ತಂಡದ ಸದಸ್ಯರಿಗೆ ನೀರಾವರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.
ಯಾವುದೇ ಅನುಮತಿ ಇಲ್ಲದೆ ಕರ್ನಾಟಕ ಸರ್ಕಾರವು ಮಹದಾಯಿ ಯೋಜನೆ ಕಾಮಗಾರಿ ಆರಂಭಿಸಿದೆ ಎಂಬ ಗೋವಾ ಸರ್ಕಾರದ ಆರೋಪದ ಹಿನ್ನೆಲೆಯಲ್ಲಿ ಕೇಂದ್ರದ ಪ್ರವಾಹ ತಂಡದ ಸದಸ್ಯರು ಪರಿಶೀಲನೆ ನಡೆಸಿದ್ದಾರೆ. ಆದರೆ, ಯಾವುದೇ ಕಾಮಗಾರಿ ನಡೆದಿಲ್ಲ ಎಂದು ಕೇಂದ್ರ ತಂಡಕ್ಕೆ ನೀರಾವರಿ ಇಲಾಖೆ ಅಧಿಕಾರಿಗಳು ವಿವರಿಸಿದರು. ನಂತರ ಕಣಕುಂಬಿ ಅತಿಥಿ ಗೃಹದಲ್ಲಿ ಸಭೆ ನಡೆಸಿದ ಕೇಂದ್ರದ ಪ್ರವಾಹ ತಂಡಕ್ಕೆ ನೀರಾವರಿ ಇಲಾಖೆ ಅಧಿಕಾರಿಗಳು ಕರ್ನಾಟಕ ಕೈಗೊಂಡಿರುವ ಕಳಸ ಬಂಡೂರಿ ನಾಲಾ ಯೋಜನೆಯ ಸಮಗ್ರ ವಿವರಣೆ ನೀಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ