ಬೆಂಗಳೂರು: ಬೆಂಗಳೂರಿನ ಹನುಮಂತನಗರದ ಸೀತಾ ಸರ್ಕಲ್ ಬಳಿ ಶುಕ್ರವಾರ ಎರಡು ಬಿಎಂಟಿಸಿ ಬಸ್ ಗಳ ಮಧ್ಯೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿದ್ದು, ಈ ಭೀಕರ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ.
ಶುಕ್ರವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಟೋ ಚಾಲಕ ವಿಜಯಕುಮಾರ (50) ಹಾಗೂ ಪ್ರಯಾಣಿಕ ವಿಷ್ಣು ಬಾಪಟ್(70) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮುಂದೆ ಇದ್ದ ಬಿಎಂಟಿಸಿ ಬಸ್ ಚಾಲಕ ದಿಢೀರ್ ಬ್ರೇಕ್ ಹಾಕಿದ್ದರಿಂದ ಹಿಂದೆ ಬರುತ್ತಿದ್ದ ಆಟೋ ಬಸ್ ಡಿಕ್ಕಿ ಹೊಡೆದಿದೆ. ಅದೇ ವೇಳೆ ಹಿಂದೆ ಬರುತ್ತಿದ್ದ ಮತ್ತೊಂದು ಬಿಎಂಟಿಸಿ ಬಸ್ ಈ ಆಟೊಕ್ಕೆ ಡಿಕ್ಕಿ ಹೊಡೆದಿದೆ. ಎರಡು ಬಸ್ಗಳ ಮಧ್ಯೆ ಆಟೋ ಸಿಲುಕಿ ಅಪ್ಪಚ್ಚಿಯಾಗಿದ್ದು, ಚಾಲಕ ಹಾಗೂ ಪ್ರಯಾಣಿಕ ಮೃತಪಟ್ಟಿದ್ದಾರೆ.
ವಿಷ್ಣು ಅವರು ಆಯುರ್ವೇದ ವೈದ್ಯರಾಗಿದ್ದು, ಹನುಮಂತನಗರದಲ್ಲಿ ವಾಸಿಸುತ್ತಿದ್ದರು. ಹೊಸಕೆರೆಹಳ್ಳಿ ಕ್ರಾಸ್ನ 80 ಅಡಿ ರಸ್ತೆ ಕಡೆಯಿಂದ ಸೀತಾ ಸರ್ಕಲ್ ಕಡೆಗೆ ಬರುತ್ತಿದ್ದಾಗ ಮುಂದಿದ್ದ ಬಿಎಂಟಿಸಿ ಬಸ್ ಬ್ರೇಕ್ ಹಾಕಿದ್ದರಿಂದ ಆಟೊ ಹಿಂಬದಿಯಿಂದ ಗುದ್ದಿದೆ. ಈ ವೇಳೆ ಆಟೊ ಹಿಂದೆ ಬರುತ್ತಿದ್ದ ಬಿಎಂಟಿಸಿ ಬಸ್ ಆಟೊಕ್ಕೆ ಗುದ್ದಿದೆ. ಹೀಗಾಗಿ ಎರಡು ಬಸ್ಗಳ ನಡುವೆ ಸಿಲುಕಿದ ಆಟೊ ಅಪ್ಪಚ್ಚಿಯಾಗಿದೆ. ಅಪ್ಪಚ್ಚಿಯಾದ ಆಟೋದಲ್ಲಿದ್ದ ಚಾಲಕ ಹಾಗೂ ಆಯುರ್ವೇಧ ವೈದ್ಯ ವಿಷ್ಣು ಎಂಬವರು ಸ್ಥಳದಲ್ಲೇ ಸಾವಿಗೀಡಾದ್ದಾರೆ. ಈ ಸಂಬಂದ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ