ತುರ್ತು ವಾಟ್ಸಪ್ ಸಹಾಯವಾಣಿಯಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥಗೆ ಜೀವ ಬೆದರಿಕೆ: ವರದಿ

ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವ ಬೆದರಿಕೆಯ ವಾಟ್ಸಪ್ ಸಂದೇಶವೊಂದು ಉತ್ತರ ಪ್ರದೇಶ ಪೊಲೀಸರ ಟೆಕ್ಷ್ಟ್‌ ಸಹಾಯವಾಣಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಲಕ್ನೋ ಅಧಿಕಾರಿಗಳು ಇಂದು, ಮಂಗಳವಾರ ತಿಳಿಸಿದ್ದಾರೆ.
ಡಯಲ್-112 ಸಹಾಯವಾಣಿಯ ವಾಟ್ಸಪ್ ಸಂಖ್ಯೆಗೆ ಶಾಹಿದ್ ಎಂಬ ವ್ಯಕ್ತಿಯಿಂದ ಸಂದೇಶ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಮುಖ್ಯಮಂತ್ರಿಗೆ “ಬಾಂಬ್” ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಲಕ್ನೋದ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಧಾನ ಕಛೇರಿ ಸ್ಟೇಷನ್ ಕಮಾಂಡರ್ ಸುಭಾಷಕುಮಾರ್ ಎಫ್‌ಐಆರ್ ದಾಖಲಿಸಿದ್ದಾರೆ.
ಆರೋಪಿಗಳನ್ನು ಬಂಧಿಸಲು ಹಲವು ತಂಡಗಳನ್ನು ರಚಿಸಲಾಗಿದೆ. ಸೈಬರ್ ಸೆಲ್ ಮತ್ತು ಕಣ್ಗಾವಲು ತಂಡಗಳು ಸಹ ಕಾರ್ಯನಿರ್ವಹಿಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದ್ವೇಷ ಭಾಷಣ : ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗ ; ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ನಿಮ್ಮ ಕಾಮೆಂಟ್ ಬರೆಯಿರಿ

advertisement