ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ ಹತ್ಯೆ ಪ್ರಕರಣ : ಪತ್ನಿ-ಪುತ್ರಿ ವಿರುದ್ಧ ದೂರು ದಾಖಲು, ಪತ್ನಿಯ ಬಂಧನ

ಬೆಂಗಳೂರು : ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಮತ್ತು ಪುತ್ರಿಯ ಮೇಲೆ ಎಫ್‌ಐಆರ್‌ ದಾಖಲಾಗಿದ್ದು, ನಂತರ ಪತ್ನಿ ಪಲ್ಲವಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಓಂ ಪ್ರಕಾಶ ಅವರ ಪುತ್ರ ಕಾರ್ತಿಕೇಶ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ, ಸಹೋದರಿ ಕೃತಿ ವಿರುದ್ಧ ಹೆಚ್‌ಎಸ್‌ಆರ್‌ ಲೇಔಟ್‌ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ 103(ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ನಿ ಪಲ್ಲವಿ ಮತ್ತು ಮಗಳು ಕೃತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಓಂ ಪ್ರಕಾಶ ಅವರ ಪುತ್ರ ಕಾರ್ತಿಕೇಶ ನೀಡಿನ ದೂರಿನಲ್ಲಿ, ಒಂದು ವಾರದಿಂದ ತಾಯಿ ಪಲ್ಲವಿ ಅವರು ತಂದೆಯನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು. ಕೊಲೆ ಬೆದರಿಕೆ ಹಾಕುತ್ತಿದ್ದರಿಂದ ಅವರು ತಮ್ಮ ಸಹೋದರಿ ಸರಿತಾ ಮನೆಗೆ ತಂದೆ ಹೋಗಿದ್ದರು. ಎರಡು ದಿನಗಳ ಬಳಿಕ ತಾಯಿ ಹಾಗೂ ತಂಗಿ ಇಬ್ಬರೂ ಅಲ್ಲಿಗೆ ಹೋಗಿ, ಅವರನ್ನು ಕರೆ ತಂದಿದ್ದರು. ಏ.20ರ ಸಂಜೆ 5 ಗಂಟೆಯ ವೇಳೆ ನಾನು ದೊಮ್ಮಲೂರಿನಲ್ಲಿರುವ ಗಾಲ್ಫ್‌ ಅಸೋಸಿಯೇಷನ್‌ನಲ್ಲಿದ್ದಾಗ ನಮ್ಮ ಮನೆಯೆ ಪಕ್ಕದ ಮನೆಯವರು ಕರೆ ಮಾಡಿ ನಿಮ್ಮ ತಂದೆಯ ದೇಹ ಕೆಳಗಡೆ ಬಿದ್ದಿದೆ ಎಂದು ತಿಳಿಸಿದರು. ಕೂಡಲೇ ಅಲ್ಲಿಂದ ಹೊರಟು ಸಂಜೆ 5:45ಕ್ಕೆ ಮನೆಗೆ ಆಗಮಿಸಿದೆ. ಈ ವೇಳೆ ಸ್ಥಳದಲ್ಲಿ ಪೊಲೀಸರು ಮತ್ತು ಸಾರ್ವಜನಿಕರು ಇದ್ದರು ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ತಂದೆಯ ತಲೆಯಿಂದ ರಕ್ತ ಬರುತ್ತಿತ್ತು. ದೇಹದ ಪಕ್ಕದಲ್ಲಿ ಬಾಟಲ್‌ ಮತ್ತು ಚಾಕು ಇತ್ತು. ನನ್ನ ತಾಯಿ ಪಲ್ಲವಿ ಮತ್ತು ತಂಗಿ ಕೃತಿ ಅವರು ಮನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಅವರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾರ್ತಿಕೇಶ ದೂರಿನಲ್ಲಿ ಹೇಳಿಕೊಂಡಿದ್ದಾರೆ.
ಪ್ರಕಾಶ ಅವರ ಪತ್ನಿ ಪಲ್ಲವಿ (64) ಅವರನ್ನು ಭಾರತೀಯ ನ್ಯಾಯ ಸಂಹಿತಾದ ವಿವಿಧ ನಿಬಂಧನೆಗಳ ಅಡಿಯಲ್ಲಿ ಬಂಧಿಸಲಾಗಿದೆ.
ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಅವರು ಹೈಪ್ರೊಫೈಲ್ ಕೊಲೆ ಪ್ರಕರಣವನ್ನು ಕೇಂದ್ರ ಅಪರಾಧ ಶಾಖೆಗೆ (ಸಿಸಿಬಿ) ವರ್ಗಾಯಿಸಲು ಆದೇಶಿಸಿದ ನಂತರ ಈ ಬೆಳವಣಿಗೆಗಳು ನಡೆದಿವೆ. ಮಂಗಳವಾರದಿಂದ ಸಿಸಿಬಿ ಅಧಿಕೃತವಾಗಿ ತನಿಖೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದೆ.
ಅರವತ್ತೆಂಟು ವರ್ಷದ ಓಂ ಪ್ರಕಾಶ ಅವರನ್ನು ಭಾನುವಾರ ಸಂಜೆ ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಅವರ ನಿವಾಸದಲ್ಲಿ ಅವರ ಪತ್ನಿ ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ದೇಹವು ಹೊಟ್ಟೆ ಮತ್ತು ಎದೆಯ ಮೇಲೆ ಅನೇಕ ಇರಿತದ ಗಾಯಗಳು ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಓಂ ಪ್ರಕಾಶ ಭಾನುವಾರ ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ತಮ್ಮ ಮನೆಯಲ್ಲಿ ಊಟ ಮಾಡುವಾಗ ಪತ್ನಿ ಪಲ್ಲವಿ ಜೊತೆ ಜಗಳವಾಡಿದ್ದಾರೆ. ಈ ಜಗಳ ತಾರಕಕ್ಕೇರಿದ್ದು, ಕೊಲೆಗೆ ಕಾರಣವಾಯಿತು. ಘಟನೆ ನಡೆದಾಗ ಅವರ ಮಗಳು ಕೃತಿ ಕೂಡ ಮನೆಯಲ್ಲಿದ್ದಳು.

ಪ್ರಮುಖ ಸುದ್ದಿ :-   ಅಥಣಿ | ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತ ; ವಿದ್ಯಾರ್ಥಿನಿ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement