ಕೆನಡಾದಲ್ಲಿ ಗ್ಯಾಂಗ್ ವಾರ್‌ನಲ್ಲಿ ಖಲಿಸ್ತಾನಿ ಭಯೋತ್ಪಾದಕ ಸುಖಾ ದುನೆಕೆ ಹತ್ಯೆ : ಮೂಲಗಳು

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಸುಖಾ ದುನೆಕೆ ಕೆನಡಾದಲ್ಲಿ ಗ್ಯಾಂಗ್ ನಡುವಿನ ಪೈಪೋಟಿಯಲ್ಲಿ ಹತ್ಯೆಗೀಡಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ದುನೆಕೆ ಕೆನಡಾದಲ್ಲಿ ಖಲಿಸ್ತಾನ್ ಚಳವಳಿಯ ಭಾಗವಾಗಿದ್ದ.
ದುನೆಕೆ ಕೆನಡಾ ಮೂಲದ ಗ್ಯಾಂಗ್‌ಸ್ಟರ್‌ ಅರ್ಶ್‌ದೀಪ್ ಸಿಂಗ್ ಅಲಿಯಾಸ್ ಅರ್ಶ್ ದಲಾ ಎಂಬಾತನೊಂದಿಗೆ ನಿಕಟ ಸಂಬಂಧ ಹೊಂದಿದ್ದ.
ಜೂನ್‌ನಲ್ಲಿ ಕೆನಡಾದ ನೆಲದಲ್ಲಿ ನಡೆದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ ಹತ್ಯೆಗೂ ಭಾರತೀಯ ಸರ್ಕಾರಿ ಏಜೆಂಟರಿಗೂ ಸಂಬಂಧವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಈ ವಾರದ ಆರಂಭದಲ್ಲಿ ಹೌಸ್ ಆಫ್ ಕಾಮನ್ಸ್‌ಗೆ ತಿಳಿಸಿದ ನಂತರ ಭಾರತ ಮತ್ತು ಕೆನಡಾ ನಡುವಿನ ದೊಡ್ಡ ರಾಜತಾಂತ್ರಿಕ ಗದ್ದಲ ಏರ್ಪಟ್ಟಿದೆ. ಇದೇವೇಳೆ ದುನೆಕೆ ಹತ್ಯೆಯಾಗಿದೆ.
ಟ್ರುಡೊ ಅವರ ಆರೋಪದ ನಂತರ ಭಾರತ ಮತ್ತು ಕೆನಡಾ ಪರಸ್ಪರ ಒಬ್ಬ ಹಿರಿಯ ರಾಜತಾಂತ್ರಿಕರನ್ನು ಹೊರಹಾಕಿವೆ. ಭಾರತವು ಆರೋಪಗಳನ್ನು ನಿರಾಕರಿಸಿದ್ದು, ಅವುಗಳನ್ನು “ಅಸಂಬದ್ಧ” ಮತ್ತು “ಪ್ರೇರಿತ” ಎಂದು ಕರೆದಿದೆ.

ನಿಜ್ಜರ್, 45, ಭಾರತೀಯ ಭಯೋತ್ಪಾದಕ ಮತ್ತು ನಿಷೇಧಿತ ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥನಾಗಿದ್ದ. ಈತ ಜೂನ್ 18 ರಂದು ಬ್ರಿಟಿಷ್ ಕೊಲಂಬಿಯಾದ ಸರ್ರೆಯ ಗುರುದ್ವಾರದ ಹೊರಗೆ ಹತ್ಯೆಗೀಡಾದ. ಆತ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ, ಆತನ ಮೇಲೆ ₹ 10 ಲಕ್ಷ ನಗದು ಬಹುಮಾನವಿತ್ತು.
ನಿನ್ನೆ, ಕೆನಡಾ ಭಾರತದಲ್ಲಿ ಪ್ರಯಾಣಿಸಲು ತನ್ನ ನಾಗರಿಕರಿಗೆ ತನ್ನದೇ ಆದ ಸಲಹೆಯನ್ನು ನವೀಕರಿಸಿದ ಒಂದು ದಿನದ ನಂತರ ಭಾರತವು ಕೆನಡಾದಲ್ಲಿರುವ ತನ್ನ ನಾಗರಿಕರಿಗೆ ಪ್ರಯಾಣ ಸಲಹೆಯನ್ನು ನೀಡಿದೆ. ಭಾರತದ ಬಲವಾದ ಪ್ರಯಾಣ ಸಲಹೆಯು ಹೆಚ್ಚುತ್ತಿರುವ ಭಾರತ ವಿರೋಧಿ ಚಟುವಟಿಕೆ ಮತ್ತು “ರಾಜಕೀಯವಾಗಿ ದ್ವೇಷದ ಅಪರಾಧಗಳ ಸಂಭವನೀಯತೆ” ಬಗ್ಗೆ ಎಚ್ಚರಿಸಿದೆ. ಕೆನಡಾದಲ್ಲಿರುವ ಭಾರತೀಯ ನಾಗರಿಕರು ಮತ್ತು ಅಲ್ಲಿಗೆ ಪ್ರಯಾಣಿಸಲು ಯೋಜಿಸುತ್ತಿರುವವರು ಎಚ್ಚರಿಕೆ ವಹಿಸುವಂತೆ ಸಲಹೆಯು ಒತ್ತಾಯಿಸಿದೆ.

ಕೆನಡಾದಲ್ಲಿ ಹೆಚ್ಚುತ್ತಿರುವ ಭಾರತ-ವಿರೋಧಿ ಚಟುವಟಿಕೆಗಳು ಮತ್ತು ರಾಜಕೀಯವಾಗಿ ಮನ್ನಣೆ ಪಡೆದ ದ್ವೇಷದ ಅಪರಾಧಗಳು ಮತ್ತು ಕ್ರಿಮಿನಲ್ ಹಿಂಸಾಚಾರದ ದೃಷ್ಟಿಯಿಂದ, ಅಲ್ಲಿನ ಎಲ್ಲಾ ಭಾರತೀಯರು ಮತ್ತು ಪ್ರಯಾಣವನ್ನು ಆಲೋಚಿಸುತ್ತಿರುವವರು ಅತ್ಯಂತ ಜಾಗರೂಕರಾಗಿರಲು ಕೋರಲಾಗಿದೆ. ಇತ್ತೀಚೆಗೆ, ಬೆದರಿಕೆಗಳು ವಿಶೇಷವಾಗಿ ಭಾರತೀಯ ರಾಜತಾಂತ್ರಿಕರು ಮತ್ತು ಭಾರತೀಯ ಸಮುದಾಯದ ವಿಭಾಗಗಳನ್ನು ಗುರಿಯಾಗಿಸಿಕೊಂಡಿವೆ.
ಎರಡು ರಾಷ್ಟ್ರಗಳ ನಡುವಿನ ಈ ಬಿಕ್ಕಟ್ಟಿನ ನಡುವೆ, ಗಾಯಕ ಸಿಧು ಮೂಸೆವಾಲಾ ಅವರನ್ನು ಕೊಂದ ಆರೋಪ ಹೊತ್ತಿರುವ ದರೋಡೆಕೋರ ಗೋಲ್ಡಿ ಬ್ರಾರ್‌ನ ಸಹಚರರ ಮೇಲೆ ಪಂಜಾಬ್ ಪೊಲೀಸರು ಗುರುವಾರ ರಾಜ್ಯಾದ್ಯಂತ ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ.
ಪೊಲೀಸರ ಪ್ರಕಾರ, ಬ್ರಾರ್ ಖಲಿಸ್ತಾನಿ ಪ್ರತ್ಯೇಕತಾವಾದಿ ಚಳವಳಿಯೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದು, ಕೆನಡಾದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ನಂಬಲಾಗಿದೆ.

4.3 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement