ಮಾರ್ಚ್‌ 7ರಿಂದ ಮೂರು ದಿನ ಬೆಂಗಳೂರು- ಇಂಡಿಯಾ ನ್ಯಾನೋ ಸಮಾವೇಶ, 10 ದೇಶಗಳ ಪಾಲ್ಗೊಳ್ಳುವಿಕೆ: ಸಚಿವ ಡಾ. ಅಶ್ವತ್ಥನಾರಾಯಣ

ಬೆಂಗಳೂರು: `ಸುಸ್ಥಿರ ಅಭಿವೃದ್ಧಿಗಾಗಿ ನ್ಯಾನೋ ತಂತ್ರಜ್ಞಾನ’ ಎನ್ನುವ ಧ್ಯೇಯದೊಂದಿಗೆ 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ’ ಸಮಾವೇಶವು ಪ್ರಥಮ ಬಾರಿಗೆ ವರ್ಚುಯಲ್ ಮಾದರಿಯಲ್ಲಿ ಮಾರ್ಚ್ 7ರಿಂದ 9ರ ವರೆಗೆ ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾವೇಶ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ೆಂದು ತಿಳಿಸಿದರು.

12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶ’ಕ್ಕೆ ಕೆನಡಾ, ಇಸ್ರೇಲ್, ಜರ್ಮನಿ, ನೆದರ್ಲೆಂಡ್ಸ್ ಮತ್ತು ಜಪಾನ್ ಸೇರಿದಂತೆ 10 ರಾಷ್ಟ್ರಗಳು ಭಾಗವಹಿಸುತ್ತಿವೆ. ಅಲ್ಲದೆ, ಐದು ಉದ್ಯಮ ಸಂಸ್ಥೆಗಳು ಕೂಡ ಸಮಾವೇಶಕ್ಕೆ ಸಹಕಾರ ನೀಡುತ್ತಿವೆ. ಮಾರ್ಚ್ ಮತ್ತು 7 ಹಾಗೂ 8ರಂದು ಸಮಾವೇಶದ ಚಟುವಟಿಕೆಗಳು ನಡೆಯಲಿದ್ದು, ಮಾರ್ಚ್‌ 9ರಂದು ಇಡೀ ದಿನ ತಲಾ 1 ತಾಸಿನ ಅವಧಿಯ ಟ್ಯುಟೋರಿಯಲ್ ಮಾದರಿಯ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಿಗಾಗಿ ರೂಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ನ್ಯಾನೋ ಮೆಡಿಸಿನ್, ನ್ಯಾನೋ ಫೋಟೋನಿಕ್ಸ್, ನ್ಯಾನೋ ಟೆಕ್ಸ್-ಟೈಲ್ಸ್ ಮತ್ತು ಹೈಡ್ರೋಜನ್ ಆರ್ಥಿಕತೆ ಕುರಿತು ಸಮಾವೇಶದಲ್ಲಿ ಪ್ರಧಾನವಾಗಿ ಗೋಷ್ಠಿಗಳು ನಡೆಯಲಿವೆ. ಒಟ್ಟಾರೆಯಾಗಿ ನವೋದ್ಯಮಗಳು, ಭಾರೀ ಕೈಗಾರಿಕೆಗಳು, ಮಧ್ಯಮ ಮತ್ತು ಸಣ್ಣ ಉದ್ದಿಮೆಗಳು, ವೆಂಚರ್ ಕ್ಯಾಪಿಟಲ್ ಇವುಗಳತ್ತ ಗಮನವನ್ನು ಕೇಂದ್ರೀಕರಿಸಲಾಗುವುದು ಎಂದು ಹೇಳಿದರು.

ಪ್ರಮುಖ ಸುದ್ದಿ :-   ಕೇಂದ್ರ ಮಾಜಿ ಸಚಿವ ಸಂಸದ ವಿ.ಶ್ರೀನಿವಾಸ ಪ್ರಸಾದ ನಿಧನ

ಈ ಸಮಾವೇಶದಲ್ಲಿ 25ಕ್ಕೂ ಹೆಚ್ಚು ಪೂರ್ಣಪ್ರಮಾಣದ ಗೋಷ್ಠಿಗಳನ್ನು ಏರ್ಪಡಿಸಿದ್ದು, 75ಕ್ಕೂ ಹೆಚ್ಚು ಪರಿಣತರು ಮಾತನಾಡಲಿದ್ದಾರೆ. 40 ಪ್ರದರ್ಶನ ಮಳಿಗೆಗಳು ಇರಲಿದ್ದು, ಒಟ್ಟಾರೆಯಾಗಿ 4 ಸಾವಿರಕ್ಕೂ ಹೆಚ್ಚು ಮಂದಿ ನೋಂದಾಯಿತ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ನ್ಯಾನೋ ವಿಜ್ಞಾನದಲ್ಲಿ ಪಿಎಚ್.ಡಿ ಅಧ್ಯಯನ ಮಾಡುತ್ತಿರುವ ಐವರು ಯುವ ಪ್ರತಿಭಾವಂತರಿಗೆ ರಾಜ್ಯ ಸರ್ಕಾರದ ವತಿಯಿಂದ `ನ್ಯಾನೋ ಎಕ್ಸಲೆನ್ಸ್’ ಪುರಸ್ಕಾರ ಮತ್ತು `ಸಿಎನ್ಆರ್ ರಾವ್ ಪುರಸ್ಕಾರ’ಗಳನ್ನು ಪ್ರದಾನ ಮಾಡಲಾಗುತ್ತದೆ. ಇದೇ ಮೊದಲ ಬಾರಿಗೆ ನ್ಯಾನೋ ಫಾರ್ ಯಂಗ್’ ಮತ್ತು ನ್ಯಾನೋ ಕ್ವಿಜ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಸಪ್ರಶ್ನೆಗೆ ಈಗಾಗಲೇ ರಸಪ್ರಶ್ನೆ ಸ್ಪರ್ಧೆಗೆ 23 ರಾಜ್ಯ ಮತ್ತು 5 ಕೇಂದ್ರಾಡಳಿತ ಪ್ರದೇಶಗಳ 650 ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿ ಕೊಂಡಿದ್ದಾರೆ ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದರು.

ನ್ಯಾನೋ ವಲಯದ ವಹಿವಾಟು ಸದ್ಯಕ್ಕೆ ಜಾಗತಿಕವಾಗಿ 75 ಶತಕೋಟಿ ಡಾಲರುಗಳಷ್ಟಿದ್ದು, 2028ರ ಹೊತ್ತಿಗೆ 300 ಶತಕೋಟಿ ಡಾಲರ್ಗಳಷ್ಟಕ್ಕೆ ತಲುಪಲಿದೆ. ಕೊರೊನಾ ಹಾವಳಿಯ ಸಂದರ್ಭದಲ್ಲಿ ನ್ಯಾನೋ ವಿಜ್ಞಾನ, ಜೈವಿಕ ವಿಜ್ಞಾನ ಮತ್ತು ಆರೋಗ್ಯ ವಿಜ್ಞಾನಗಳು ಕೈಜೋಡಿಸಿದ್ದರಿಂದ ಜನರ ಜೀವ ಉಳಿಸಲು ಸಾಧ್ಯವಾಯಿತು ಎಂದು ಅವರು ಸಚಿವರು ಹೇಳಿದರು.
ನ್ಯಾನೋ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಗೆ ರಾಜ್ಯ ಸರ್ಕಾರ ಬೆಳವಣಿಗೆಗೆ ಸಾಕಷ್ಟು ಆದ್ಯತೆ ಕೊಟ್ಟಿದೆ. ರಾಜ್ಯದ 1,500 ಕಾಲೇಜುಗಳಿಗೆ ಸಂಶೋಧನೆಯನ್ನು ಪ್ರೋತ್ಸಾಹಿಸಲು 200 ಕೋಟಿ ರೂ. ವಿತರಿಸಲಾಗಿದ್ದು, ವಿಜ್ಞಾನದ ಬಗ್ಗೆ ಕುತೂಹಲವುಳ್ಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ 1 ಸಾವಿರ ರೂ. ಶಿಷ್ಯವೇತನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾದ ಶಿವಮೂರ್ತಿ ಮುರುಘಾ ಶರಣರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement