ಕೆಎಸ್‌ಆರ್‌ಟಿಸಿ ಬಸ್ಸುಗಳಿಗೆ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಟೆಕ್ನಾಲಜಿ ಅಳವಡಿಕೆ: ಡಿಸಿಎಂ ಸವದಿ

ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಮೊದಲ ಬಾರಿಗೆ ಎ.ಐ(ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಟೆಕ್ನಾಲಜಿ ಅಳವಡಿಸುವ ಮಹತ್ವದ ಯೋಜನೆಗೆ ಹೆಜ್ಜೆ ಇಡಲಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ‌.
ಕೆಲವೇ ಮುಂದುವರಿದ ರಾಷ್ಟ್ರಗಳಲ್ಲಿ ಇಂತಹ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ. ನಮ್ಮ ಸರ್ಕಾರಿ ಸಾರಿಗೆ ಕ್ಷೇತ್ರದ ಇತಿಹಾಸದಲ್ಲಿ ಇದೊಂದು ವಿನೂತನ ಪ್ರಯೋಗ ಎನ್ನಲಾಗಿದೆ. ಸಿಡಬ್ಲ್ಯುಎಸ್ ಮತ್ತು ಡಿಡಿಎಸ್. ಸಿಡಬ್ಲ್ಯುಎಸ್ ಎಂದರೆ ಕೊಲಿಜಿಯನ್ ವಾರ್ನಿಂಗ್ ಸಿಸ್ಟಮ್. ಡಿಡಿಎಸ್ ಎಂದರೆ ಡ್ರೈವರ್ ಡ್ರೋಜಿನೆಸ್ ಡಿಟೆಕ್ಷನ್ ಸಿಸ್ಟಮ್ ಎಂದು ಎರಡು ರೀತಿಯ ಟೆಕ್ನಾಲಜಿ ಅಳವಡಿಸಲಾಗಿದೆ.
ಈ ಎರಡು ಟೆಕ್ನಾಲಜಿಗಳನ್ನು ವಾಹನಗಳಲ್ಲಿ ಅಳವಡಿಸಲಾಗುವುದು. ಇದರಿಂದ ನಮ್ಮ ಬಸ್ಸಿನ ಸಮೀಪಕ್ಕೆ ಬರುವ ಇತರೆ ವಾಹನಗಳು ಹಾಗೂ ಚಾಲಕ ನಿದ್ರಿಸಿ ಡಿವೈಡರ್ ಕಡೆ ಹೋಗುವುದನ್ನು ಮತ್ತು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವಂತಹ ಟೆಕ್ನಾಲಜಿ ಇರಲಿದೆ. ವಾಹನದ ಸಮೀಪಕ್ಕೆ ಬಂದಾಗ ಅಥವಾ ಚಾಲಕ ನಿದ್ರಿಸುತ್ತಿರುವಾಗ ಶಬ್ದ ಮಾಡಿ ಎಚ್ಚರಿಸುತ್ತದೆ. ಜೊತೆಗೆ ಕಂಟ್ರೋಲ್ ರೂಮ್ ಗೆ ಮಾಹಿತಿ ರವಾನೆ ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ. ಅಪಘಾತ ರಹಿತ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ಟೆಕ್ನಾಲಜಿಯನ್ನು ಕರಾರಸಾ ನಿಗಮದ 1044 ಬಸ್ಸುಗಳಿಗೆ ಮೊದಲು ಅಳವಡಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ವಾಹನಗಳಿಗೆ ಹೆಚ್ಚಿಸುವ ನಿಟ್ಟಿನಲ್ಲಿ ಕೆಎಸ್ ಆರ್ ಟಿಸಿ ಚಿಂತನೆ ಮಾಡಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement