ಗೂಗಲ್ ಮ್ಯಾಪ್ ನಂಬಿ ದಾರಿತಪ್ಪಿ ಖಾನಾಪುರ ಕಾಡಿನಲ್ಲಿ ರಾತ್ರಿ ಕಳೆದ ಕುಟುಂಬ…!

ಬೆಳಗಾವಿ : ಗೂಗಲ್ ಮ್ಯಾಪ್ ಆಗಾಗ ಪ್ರಯಾಣಿಕರ ಹಾದಿಯನ್ನು ತಪ್ಪಿಸಿ ಅನಾಹುತ ನಡೆಯುವ ಘಟನೆ ವರದಿಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲೂ ಗೂಗಲ್ ಪ್ರಯಾಣಿಕರ ಹಾದಿ ತಪ್ಪಿಸಿ ಅವರು ರಾತ್ರಿಯಿಡೀ ಕಾಡಿನಲ್ಲೇ ಕಳೆದ ಘಟನೆ ಬೆಳಕಿಗೆ ಬಂದಿದೆ.
ಗೂಗಲ್ ಮ್ಯಾಪ್ ನಂಬಿದ್ದ ಹಾದಿ ತಪ್ಪಿ ಕುಟುಂಬವೊಂದು ಕಾಡಿನಲ್ಲೇ ರಾತ್ರಿ ಕಳೆದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ. ಬಿಹಾರದ ರಾಜದಾಸ ರಣಜಿತ ದಾಸ ಅವರ ಕುಟುಂಬ ಉಜ್ಜಯಿನಿಯಿಂದ ಗೋವಾ ಪ್ರವಾಸಕ್ಕೆ ಹೊರಟಿತ್ತು. ಗೋವಾದಲ್ಲಿ ತಲುಪಬೇಕಿದ್ದ ಸ್ಥಳದ ಲೊಕೇಶನ್ ಹಾಕಿಕೊಂಡು ಅವರು ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು.

ಗೂಗಲ್ ಮ್ಯಾಪ್ ಪ್ರಕಾರವೇ ಹೋಗುತ್ತಿದ್ದ ಅವರು ದಾರಿ ಸಾಗಿದಂತೆ ಶಿರೋಲಿ ಮತ್ತು ಹೆಮ್ಮಡಗಾ ಮಾರ್ಗ ಮಧ್ಯೆ ಮುಖ್ಯ ರಸ್ತೆಯಿಂದ 7-8 ಕಿಮೀ ಒಳಗೆ ಭೀಮಗಡ ವನ್ಯಧಾಮದ ಅರಣ್ಯದೊಳಗೆ ಹೋಗಿದ್ದಾರೆ. ಕಗ್ಗತ್ತಲ ಕಾಡಿನಲ್ಲಿ ಮೊಬೈಲ್ ನೆಟ್‌ವರ್ಕ್ ಸಿಗದೇ ದಟ್ಟ ಅರಣ್ಯದಲ್ಲಿ ಕುಟುಂಬ ಸಿಲುಕಿಕೊಂಡಿದೆ.
ರಾಜದಾಸ ಅವರ ಕುಟುಂಬದ ಸದಸ್ಯರು ಕಂಗೆಡದೆ ರಾತ್ರಿ ಅಲ್ಲೇ ಕಳೆದಿದ್ದಾರೆ. ಜೀವ ಕೈಯಲ್ಲಿ ಹಿಡಿದು ರಾತ್ರಿ ಕಳೆದ ಕುಟುಂಬ, ಬೆಳಗಾಗುತ್ತಲೇ ತಾವಿದ್ದ ಸ್ಥಳದಿಂದ ಮೂರ್ನಾಲ್ಕು ಕಿಲೋ ಮೀಟರ್ ದೂರ ಕ್ರಮಿಸಿ, ಮೊಬೈಲ್ ನೆಟ್ವರ್ಕ್ ದೊರೆತ ಬಳಿಕ ಅವರು 100 ಸಂಖ್ಯೆಗೆ ಕರೆ ಮಾಡಿ ಪೊಲೀಸ್ ಕಂಟ್ರೋಲ್ ರೂಂ ಜತೆ ಸಂಪರ್ಕ ಸಾಧಿಸಿ ವಿಚಾರ ಹೇಳಿದ್ದಾರೆ. ತಕ್ಷಣ ಕುಟುಂಬದ ಸಹಾಯಕ್ಕೆ ನೆರವಾದ ಖಾನಾಪುರ ಪೊಲೀಸರು ಕುಟುಂಬವನ್ನು ಅಲ್ಲಿಂದ ಪಾರು ಮಾಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement