ಧಾರವಾಡ: ಕಾರು ಪಲ್ಟಿಯಾಗಿ ಇಬ್ಬರು ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತರನ್ನು ವಿನಯ ಹಿರೇಮಠ (24) ಹಾಗೂ ಸಂದೀಪ (29) ಎಂದು ಗುರುತಿಸಲಾಗಿದೆ. ಧಾರವಾಡದಿಂದ ದಾಬಾಕ್ಕೆ ಊಟಕ್ಕೆಂದು ಹೋಗಿದ್ದ ಇವರು ಊಟ ಮಾಡಿಕೊಂಡು ವಾಪಸ್ ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ ಓರ್ವ ಸ್ಥಳದಲ್ಲೇ ಸಾವಿಗೀಡಾದರೆ ಮತ್ತೋರ್ವರು ಆಸ್ಪತ್ರೆಗೆ ಸಾಗಿಸಿದ ನಂತರ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ. ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡಿದ್ದಾರೆ
ನಿಮ್ಮ ಕಾಮೆಂಟ್ ಬರೆಯಿರಿ