ನವದೆಹಲಿ: ಆಸ್ಸಾಂ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಬಿಜೆಪಿ ಅಭ್ಯರ್ಥಿ ಕೃಷ್ಣೆಂದು ಪೌಲ್ ಅವರಿಗೆ ಸೇರಿದ ಕಾರಿನಲ್ಲಿ ಇವಿಎಂ ಯಂತ್ರಗಳು ಪತ್ತೆಯಾಗಿವೆ.
ಘಟನೆ ಬಳಿಕ ಉಥರಕಾಂಡಿ ಕ್ಷೇತ್ರದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಈ ಕುರಿತು ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾಧ್ರಾ ಆಗ್ರಹಿಸಿದ್ದಾರೆ. ಪ್ರತಿ ಬಾರಿಯೂ ರಾಜ್ಯದಲ್ಲಿ ಮತದಾನದ ನಂತರ ಇವಿಎಂಗಳನ್ನು ಸಾಗಿಸುವ ವಿಡಿಯೋಗಳು ವೈರಲ್ ಆಗುತ್ತವೆ. ಆದರೂ ಯಾರ ಮೇಲೂ ಕ್ರಮ ಕೈಗೊಳ್ಳುವುದಿಲ್ಲ. ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಇವಿಎಂಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ