ಬಾಲ್ ಕ್ಯಾಚ್​ ಹಿಡಿಯುವಾಗ ವಿದ್ಯುತ್ ಸ್ಪರ್ಶ: ಬಾಲಕ ಸಾವು

ಧಾರವಾಡ : ಗೆಳೆಯರೊಂದಿಗೆ ಸೇರಿ ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮೃತ ಬಾಲಕನನ್ನು ಎ‌ಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಶ್ರೇಯಸ್ ಶಿನ್ನೂರ(16 ವರ್ಷ) ಎಂದು ಗುರುತಿಸಲಾಗಿದೆ. ಸ್ನೇಹಿತನ ಪ್ರಾಣವನ್ನು ಉಳಿಸಲು ಯತ್ನಿಸಿದ ಮತ್ತೋರ್ವ ಬಾಲಕನಿಗೆ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೇಯಸ್‌ ಶುಕ್ರವಾರ ಸಂಜೆಯ ಹೊತ್ತು ಕಾಲೊನಿಯ ಇತರ ಗೆಳೆಯರೊಂದಿಗೆ ಸೇರಿ ಮನೆಯ ಟೆರೇಸ್‌ ಮೇಲೆ ಗೆಳೆಯರೊಂದಿಗೆ ಕ್ರಿಕೆಟ್‌ ಆಡುತ್ತಿದ್ದ. ಕ್ರಿಕೆಟ್‌ ಆಡುತ್ತಿದ್ದ ವೇಳೆ ಕ್ಯಾಚ್‌ ಹಿಡಿಯಲು ಪ್ರಯತ್ನಿಸುವಾಗ ವಿದ್ಯುತ್‌ ತಂತಿ ತಗುಲಿ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಮನೆ ಬಳಿ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಗೆಳೆಯ ಎಸೆದ ಚೆಂಡು ಹಿಡಿಯಲು ಹೋದಾಗ ವಿದ್ಯುತ್ ತಗುಲಿದೆ. ಕೈಯಿಂದ ಹೊಟ್ಟೆಯವರೆಗೆ ವಿದ್ಯುತ್ ಶಾಕ್‌ ಹೊಡೆದಿತ್ತು. ತಕ್ಷಣ ಆಸ್ಪತ್ರೆಗೆ ತಂದೆವು. ಆದರೆ ಆತನ ಬದುಕಿ ಉಳಿಯಲಿಲ್ಲ. ಇದ್ದ ಒಬ್ಬನೇ ಒಬ್ಬ ಮಗನನ್ನ ನಾನು ಕಳೆದುಕೊಂಡಿದ್ದೇನೆ ಎಂದು ಶ್ರೇಯಸ್‌ ತಂದೆ ಮಾಧ್ಯಮದ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ದೇವರಾಜೇಗೌಡಗೆ ಪೆನ್ ಡ್ರೈವ್ ಕೊಟ್ಟಿದ್ದು ನಾನೇ, ಬೇರೆ ಯಾರಿಗೂ ಕೊಟ್ಟಿಲ್ಲ : ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ ಹೇಳಿಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement