ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಚೆನ್ನೈ: ಬಹುಜನ ಸಮಾಜ ಪಕ್ಷದ ತಮಿಳುನಾಡು ಘಟಕದ ಅಧ್ಯಕ್ಷರನ್ನು ಬೈಕ್‌ನಲ್ಲಿ ಬಂದ ಆರು ಮಂದಿ ದುಷ್ಕರ್ಮಿಗಳು ಅವರ ಮನೆಯ ಸಮೀಪವೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದಾರೆ.
ಪೊಲೀಸರ ಪ್ರಕಾರ, ದಾಳಿಗೆ ಸಂಬಂಧಿಸಿದಂತೆ ಎಂಟು ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಆರ್ಮ್‌ಸ್ಟ್ರಾಂಗ್ ಅವರು ನಗರದ ಸೇಂಬಿಯಂ ಪ್ರದೇಶದಲ್ಲಿನ ಅವರ ಮನೆಯ ಬಳಿ ಪಕ್ಷದ ಕೆಲವು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸುತ್ತಿದ್ದಾಗ ಆರು ಜನರು ಗುಂಪು ಅವರ ಮೇಲೆ ಹಲ್ಲೆ ನಡೆಸಿ ನಂತರ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ತಕ್ಷಣವೇ ಕುಟುಂಬದವರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು, ಆದರೆ ಅವರು ಮೃತಪಟ್ಟಿದ್ದಾರೆ ಎಂದು ಪ್ರಕಟಿಸಲಾಯಿತು.
“ಕೊಲೆ ಪ್ರಕರಣದಲ್ಲಿ ನಾವು ಇದುವರೆಗೆ 8 ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಇದು ಪ್ರಾಥಮಿಕ ತನಿಖೆಯಾಗಿದೆ. ಹತ್ತು ತಂಡಗಳನ್ನು ರಚಿಸಲಾಗಿದೆ. ಶಂಕಿತರ ವಿಚಾರಣೆಯ ನಂತರ, ಕೊಲೆಯ ಹಿಂದಿನ ಉದ್ದೇಶ ಗೊತ್ತಾಗಲಿದೆ. ಹತ್ಯೆ ಮಾಡಲು ಹರಿತವಾದ ಆಯುಧಗಳನ್ನು ಬಳಸಲಾಗಿದೆ ಎಂದು ಚೆನ್ನೈನ ಹಿರಿಯ ಪೊಲೀಸ್ ಅಧಿಕಾರಿ ಆಸ್ರಾ ಗಾರ್ಗ್ ಹೇಳಿದ್ದಾರೆ.

ಪ್ರಕರಣವನ್ನು ಭೇದಿಸುವ ಕೆಲಸವನ್ನು ಸೆಂಬಿಯಂ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ವಹಿಸಲಾಗಿದೆ.
ಪ್ರತಿಪಕ್ಷಗಳು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಈ ಹತ್ಯೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ವಿಪಕ್ಷದ ನಾಯಕ ಎಡಪ್ಪಾಡಿ ಪಳನಿಸ್ವಾಮಿ ಮಾತನಾಡಿ, ”ರಾಷ್ಟ್ರೀಯ ಪಕ್ಷವೊಂದರ ರಾಜ್ಯ ಮುಖ್ಯಸ್ಥನ ಕೊಲೆಯಾದಾಗ ನಾನೇನು ಹೇಳಲಿ, ಕಾನೂನು ಸುವ್ಯವಸ್ಥೆಯೇ ನಾಚಿಕೆಗೇಡಾಗಿದೆ. ಕಾನೂನು, ಪೊಲೀಸರ ಭಯವಿಲ್ಲ” ಎಂದು ಹೇಳಿದರು.

ಪ್ರಮುಖ ಸುದ್ದಿ :-   ವೀಡಿಯೊ..| ಬಾಹ್ಯಾಕಾಶಕ್ಕೆ ಹಾರಿದ ಶುಭಾಂಶು ಶುಕ್ಲಾ ; 41 ವರ್ಷಗಳ ನಂತರ ಈ ಸಾಧನೆ ಮಾಡಿದ ಎರಡನೇ ಭಾರತೀಯ

ವಕೀಲರಾಗಿದ್ದ ಆರ್ಮ್‌ಸ್ಟ್ರಾಂಗ್ ಅವರು 2006 ರಲ್ಲಿ ಚೆನ್ನೈ ಕಾರ್ಪೊರೇಷನ್ ಕೌನ್ಸಿಲ್‌ಗೆ ಆಯ್ಕೆಯಾದರು. ಎರಡು ವರ್ಷಗಳ ಹಿಂದೆ ಚೆನ್ನೈನಲ್ಲಿ ಮೆಗಾ ರ್ಯಾಲಿಯನ್ನು ಆಯೋಜಿಸಿದ ನಂತರ ಮತ್ತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿಯನ್ನು ಆಹ್ವಾನಿಸಿದ ನಂತರ ಅವರು ಖ್ಯಾತಿಯನ್ನು ಗಳಿಸಿದರು.
X ನಲ್ಲಿನ ಪೋಸ್ಟ್‌ನಲ್ಲಿ, ಮಾಯಾವತಿ ಅವರು “ತಮಿಳುನಾಡು ರಾಜ್ಯ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಅವರ ಚೆನ್ನೈನ ಮನೆಯ ಹೊರಗೆ ಅವರ ಭೀಕರ ಹತ್ಯೆ ಅತ್ಯಂತ ಶೋಚನೀಯ ಮತ್ತು ಖಂಡನೀಯ. ವೃತ್ತಿಯಲ್ಲಿ ವಕೀಲರಾಗಿದ್ದ ಅವರು ರಾಜ್ಯದಲ್ಲಿ ಪ್ರಬಲ ದಲಿತ ಧ್ವನಿ ಎಂದು ಹೆಸರಾಗಿದ್ದರು. ರಾಜ್ಯ ಸರ್ಕಾರ ತಪ್ಪಿತಸ್ಥರನ್ನು ಶಿಕ್ಷಿಸಬೇಕು” ಎಂದು ಬರೆದಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement