ನವದೆಹಲಿ: ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ಗಾಗಿ ಪಾಕಿಸ್ತಾನ ಸರ್ಕಾರವು ಪಾಕ್ ತಂಡಕ್ಕೆ ಭಾರತದ ಪ್ರವಾಸಕ್ಕೆ ತೆರಳಲು ಗ್ರೀನ್ ಸಿಗ್ನಲ್ ನೀಡಿದೆ.
ಈ ಹಿಂದೆ ಪಾಕಿಸ್ತಾನ ವಿಶ್ವಕಪ್ಗಾಗಿ ಭಾರತಕ್ಕೆ ಬರುತ್ತದೆಯೋ, ಇಲ್ಲವೋ ಎಂಬ ಅನೇಕ ಊಹಾಪೋಹಗಳಿದ್ದವು. ವಿಶ್ವಕಪ್ಗೆ ಸಂಬಂಧಿಸಿದಂತೆ ಪಾಕಿಸ್ತಾನ ತಂಡದ ಪಂದ್ಯಗಳ ವೇಳಾಪಟ್ಟಿಯಲ್ಲೂ ಬದಲಾವಣೆ ಮಾಡಲಾಗಿದೆ.
ಕ್ರೀಡೆಯನ್ನು ರಾಜಕೀಯದಿಂದ ಪ್ರತ್ಯೇಕವಾಗಿಡಬೇಕು ಎಂಬುದನ್ನು ಪಾಕಿಸ್ತಾನ ಯಾವಾಗಲೂ ನಂಬುತ್ತದೆ.ಹೀಗಾಗಿ ವಿಶ್ವಕಪ್ನಲ್ಲಿ ಪಾಲ್ಗೊಳ್ಳಲು ತಂಡವನ್ನು ಭಾರತಕ್ಕೆ ಕಳುಹಿಸಲು ನಿರ್ಧರಿಸಲಾಗಿದೆ. ಭಾರತದೊಂದಿಗಿನ ದ್ವಿಪಕ್ಷೀಯ ಸಂಬಂಧಗಳ ಸ್ಥಿತಿಯು ಅಂತಾರಾಷ್ಟ್ರೀಯ ಕ್ರೀಡೆಗಳಿಗೆ ಸಂಬಂಧಿಸಿದ ಪಾಕಿಸ್ತಾನದ ಜವಾಬ್ದಾರಿಗಳನ್ನು ಪೂರೈಸುವಲ್ಲಿ ಅಡ್ಡಿಯಾಗಬಾರದು ಎಂದು ಪಾಕಿಸ್ತಾನ ನಂಬುತ್ತದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಆದಾಗ್ಯೂ, ತಂಡದ ಭದ್ರತೆಯ ಬಗ್ಗೆ ತನಗೆ ತೀವ್ರ ಕಳವಳವಿದೆ. ಅದನ್ನು ಐಸಿಸಿ ಮತ್ತು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ)ಗೆ ತಿಳಿಸುವುದಾಗಿ ಸಚಿವಾಲಯ ಹೇಳಿದೆ. ‘ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಭಾರತದಲ್ಲಿ ಸಂಪೂರ್ಣ ಭದ್ರತೆ ಒದಗಿಸಲಾಗುವುದು ಎಂದು ನಾವು ನಿರೀಕ್ಷಿಸುತ್ತೇವೆ’ ಎಂದು ಅದು ಹೇಳಿದೆ.
ಏಕದಿನ ವಿಶ್ವಕಪ್ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವು ತನ್ನ ಮೂರನೇ ಪಂದ್ಯದಲ್ಲಿ ಅಕ್ಟೋಬರ್ 14 ರಂದು ಭಾರತದ ವಿರುದ್ಧ ಸೆಣಸಲಿದೆ.
ನಿಮ್ಮ ಕಾಮೆಂಟ್ ಬರೆಯಿರಿ