ಹುಬ್ಬಳ್ಳಿ : ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಗುರುವಾರ ಮುಂಜಾನೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ರಾತ್ರಿ ಬೆಟ್ಟದಲ್ಲಿ ಚಿರತೆ ನೋಡಿರುವುದಾಗಿ ಸಾರ್ವಜನಿಕರಿಂದ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯ ಬಂದ ಬಗ್ಗೆ ಹೆಜ್ಜೆ ಗುರುತುಗಳ ಪರಿಶೀಲನೆ ನಡೆಸುತ್ತಿದ್ದಾರೆ. ಗುರುವಾರ ಮುಮಜಅನೆಯಿಂದಲೇ ಪರಿಶೀಲನೆ ನಡೆಸುತ್ತಿದ್ದಾರೆ.
ಕೆಲವು ದಿನಗಳ ಹಿಂದೆ ಚಿರತೆ ಹುಬ್ಬಳ್ಳಿ ಸಮೀಪದ ಅಂಚಟಗೇರಿಯಲ್ಲಿ ಕಾಣಿಸಿಕೊಂಡಿತ್ತು ಎಂದು ವರದಿಯಾಗಿತ್ತು. ಅಲ್ಲಿ ಚಿರತೆ ಹಿಡಿಯಲು ಅರಣ್ಯ ಇಲಾಖೆಯವರು ಬೋನ್ ಸಹ ಇಟ್ಟಿದ್ದರು. ಆದರೆ ಬೋನಿನ ವರೆಗೆ ಬಂದ ಚಿರತೆ ಪುನಃ ವಾಪಸ್ಸು ಹೋಗಿತ್ತು. ಈಗ ಅದೇ ಚಿರತೆಯೇ ಹುಬ್ಬಳ್ಳಿ ನೃಪತುಂಗ ಬೆಟ್ಟದಲ್ಲಿ ಕಾಣಿಸಿಕೊಂಡಿದೆಯೇ ಎಂಬ ಅನುಮಾನದ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಮುಖ್ಯವಾಗಿ ಅದರ ಹೆಜ್ಜೆ ಗುರುತುಗಳನ್ನು ಹುಡುಕುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ