ಟಿ 20 ವಿಶ್ವಕಪ್ 2024 : ಭಾರತ ಚಾಂಪಿಯನ್‌

ಬಾರ್ಬಡೋಸ್ : ಬ್ರಿಡ್ಜ್‌ಟೌನ್ ಕೆನ್ಸಿಂಗ್ಟನ್ ಓವಲ್ ನಲ್ಲಿ ನಡೆದ T 20 ವಿಶ್ವಕಪ್ ಫೈನಲ್ ನಲ್ಲಿ ರೋಚಕ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ ಗಳ ಜಯ ಸಾಧಿಸುವ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಗೆಲುವಿನ ಸಮೀಪ ಬಂದು ಕೊನೆ ಕ್ಷಣದಲ್ಲಿ ಪಂದ್ಯ ಕಳೆದುಕೊಂಡ ದಕ್ಷಿಣ ಆಫ್ರಿಕಾ ನಿರಾಸೆ ಅನುಭವಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸುವ ಮೂಲಕ T 20 ವಿಶ್ವಕಪ್ ಫೈನಲ್ ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಹೆಗ್ಗಳಿಕೆಗೆ ಪಾತ್ರವಾಯಿತು. ಆರಂಭದಲ್ಲಿ ನಾಯಕ ರೋಹಿತ್‌ ಶರ್ಮಾ, ರಿಷಭ್‌ ಪಂತ್‌ ಹಾಗೂ ಸೂರ್ಯಕುಮಾರ ಯಾದವ್‌ ಔಟಾಗಿ 34 ಕ್ಕೆ 3 ಪ್ರಮುಖ ವಿಕೆಟ್ ಕಳೆದುಕೊಂಡು ಭಾರತ ಸಂಕಷ್ಟಕ್ಕೆ ಸಿಲುಕಿತ್ತು. ರೋಹಿತ್ ಶರ್ಮ 9, ಪಂತ್ ಶೂನ್ಯಕ್ಕೆ ಔಟಾದರೆ, ಸೂರ್ಯಕುಮಾರ್ ಯಾದವ್ 3 ರನ್ ಗೆ ಔಟಾದರು. ಆಘಾತ ಅನುಭವಿಸಿದ್ದ ಭಾರತದ ತಂಡಕ್ಕೆ ವಿರಾಟ ಕೊಹ್ಲಿ ಹಾಗೂ ಅಕ್ಸರ್‌ ಪಟೇಲ್‌ ಆಸರೆ ನೀಡಿದರು.

ಸರಣಿಯುದ್ದಕ್ಕೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಕೊಹ್ಲಿ 76(59 ಎಸೆತ) ರನ್ ಗಳಿಸಿ ಸಮಯೋಚಿತ ಆಟವಾಡಿದರು. ಈ ವೇಳೆ ಬಿರುಸಿನ ಆಟವಾಡಿದ ಅಕ್ಷರ್ ಪಟೇಲ್ ತಂಡಕ್ಕೆ ನೆರವಾದರು. ಅಕ್ಷರ್ ಪಟೇಲ್ 47(31 ಎಸೆತ) ಗಳಿಸಿದ್ದ ವೇಳೆ ರನ್ ಔಟಾದರು. ಶಿವಂ ದುಬೆ 27(16 ಎಸೆತ) ಕೊಡುಗೆ ನೀಡಿದರು. ಹಾರ್ದಿಕ್ ಪಂದ್ಯ ಔಟಾಗದೆ 5 ರನ್, ರವೀಂದ್ರ ಜಡೇಜ 2 ರನ್ ಗಳಿಸಿದರು.
ಉತ್ತಮ ಮೊತ್ತ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಸಹ ಆರಂಭದಲ್ಲೇ ಆಘಾತ ಅನುಭವಿಸಿತು. 4 ರನ್ ಗಳಿಸಿದ್ದ ರೀಜಾ ಹೆಂಡ್ರಿಕ್ಸ್ ಅವರನ್ನು ಬುಮ್ರಾ ಕ್ಲೀನ್ ಬೌಲ್ಡ್ ಮಾಡಿದರು. 4 ರನ್ ಗಳಿಸಿದ್ದ ನಾಯಕ ಮಾರ್ಕ್ರಾಮ್ ಅವರು ಅರ್ಷದೀಪ್ ಸಿಂಗ್ ಎಸೆದ ಚೆಂಡಿಗೆ ವಿಕೆಟ್ ಕೀಪರ್ ಕೈಗಿತ್ತು ನಿರ್ಗಮಿಸಿದರು.

ಪ್ರಮುಖ ಸುದ್ದಿ :-   ನೆಲಮಂಗಲ ಬಳಿ ರಸ್ತೆ ಜಗಳ-ಹಲ್ಲೆ ಆರೋಪ: ಮಾಜಿ ಸಂಸದ ಅನಂತಕುಮಾರ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ಆದರೆ ತಾಳ್ಮೆಯ ಆಟವಾಡಿದ ಕ್ವಿಂಟನ್ ಡಿ ಕಾಕ್ 39(31 ಎಸೆತ) ರನ್ ಗಳಿಸಿದ್ದ ವೇಳೆ ಕ್ಯಾಚಿತ್ತು ನಿರ್ಗಮಿಸಿದರು. ಟ್ರಿಸ್ಟಾನ್ ಸ್ಟಬ್ಸ್ 31(21 ಎಸೆತ) ಅವರನ್ನು ಅಕ್ಷರ್ ಪಟೇಲ್ ಕ್ಲೀನ್ ಬೌಲ್ಡ್ ಮಾಡಿ ಪೆವಿಲಿಯನ್ ಗೆ ಕಳುಹಿಸಿದರು.
ಆದರೆ ಹೆನ್ರಿಚ್ ಕ್ಲಾಸೆನ್ 27 ಎಸೆತಗಳಲ್ಲಿ 52 ರನ್ ಚಚ್ಚುವ ಮೂಲಕ ದಕ್ಷಿಣ ಆಫ್ರಿಕಾ ಒಂದು ಹಂತದಲ್ಲಿ ಸುಲಭವಾಗಿ ನಿಗದಿತ ಗುರಿ ಮುಟ್ಟಬಹುದು ಎಂದು ಭಾವಿಸುವಂತೆ ಮಾಡಿದ್ದರು. ಅವರು 2 ಬೌಂಡರಿ ಮತ್ತು 5 ಸಿಕ್ಸರ್ ಸಿಡಿಸಿದರು. ಹಾರ್ದಿಕ್ ಪಾಂಡ್ಯ ಅವರನ್ನು ಔಟ್ ಮಾಡಿದರು. ಭಾರತದ ಅಸ್ತರವಾಗಿದ್ದ ಸ್ಪಿನ್ನರ್‌ಗಳೇ ದುಬಾರಿಯಾದರು. ಆದರೆ ವೇಗಿಗಳೇ ಪಂದ್ಯವನ್ನು ಗೆಲ್ಲಿಸಿಕೊಟ್ಟರು.
ಕೊನೆಯ ಓವರ್ ನಲ್ಲಿ ದಕ್ಷಿಣ ಆಫ್ರಿಕಾಕ್ಕೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯಕುಮಾರ ಯಾದವ್ ಅವರ ಅಮೋಘ ಕ್ಯಾಚ್ ಪಡೆದರು. ಸಿಕ್ಸರ್‌ ಆಗಬೇಕಿದ್ದ ಹೊಡೆತವನ್ನು ಕ್ಯಾಚ್‌ ಆಗಿ ವರಿವರ್ತಿಸುವಲ್ಲಿ ಸೂರ್ಯಕುಮಾರ ಯಾದವ್‌ ಯಶಸ್ವಿಯಾದರು. 21 ರನ್ ಗಳಿಸಿದ್ದ ಮಿಲ್ಲರ್ ಪೆವಿಲಿಯನ್ ಗೆ ಮರಳಿದರು. ಎರಡನೇ ಎಸೆತವನ್ನು ರಬಾಡಾ ಬೌಂಡರಿ ಬಾರಿಸಿದರು. ಮೂರನೇ ಎಸೆತದಲ್ಲಿ ಒಂದು ರನ್ ಬಂತು. ಕೊನೆಯ ಎರಡು ಎಸೆತಗಳಲ್ಲಿ 10 ರನ್ ಅಗತ್ಯವಿತ್ತು. ಹಾರ್ದಿಕ್ ಒಂದು ವೈಡ್ ಬೌಲ್‌ ಮಾಡಿದರು. ಆದರೆ ನಂತರ ಎಸೆತದಲ್ಲಿ ರಬಾಡಾ ಕ್ಯಾಚಿತ್ತು ನಿರ್ಗಮಿಸಿದರು. ಆಗ ಭಾರತದ ಗೆಲುವು ಖಚಿತವಾಗಿತ್ತು. ಕೊನೆಯ ಎಸೆತದಲ್ಲಿ ಒಂದು ರನ್ ಮಾತ್ರ ಬಂತು. 8 ವಿಕೆಟ್ ನಷ್ಟಕ್ಕೆ 169 ರನ್ ಮಾತ್ರ ಗಳಿಸಿ ಸೋಲು ಅನುಭವಿಸಿತು.
ಬಿಗಿ ದಾಳಿ ನಡೆಸಿದ ಬುಮ್ರಾ ಹಾಗೂ ಅರ್ಷದೀಪ್‌ ಸಿಂಗ್‌ ತಲಾ ಎರಡು ವಿಕೆಟ್ ಪಡೆದರು. ಕೊನೆಯ ಓವರ್ ನಿಯಂತ್ರಿಸಿ ಹಾರ್ದಿಕ್ ಪಾಂಡ್ಯಾ ಮೂರು ವಿಕೆಟ್‌ ಪಡೆದು ಕೂಡ ಗೆಲುವಿನ ಹೀರೋ ಎನಿಸಿಕೊಂಡರು.
ದಕ್ಷಿಣ ಆಫ್ರಿಕಾ ಪರ ನೋರ್ಟ್ಜೆ ಮತ್ತು ಕೇಶವ್ ಮಹಾರಾಜ್ ತಲಾ 2 ವಿಕೆಟ್ ಪಡೆದರು. ಮಾರ್ಕೊ ಜಾನ್ಸೆನ್ ಮತ್ತು ರಬಾಡಾ ತಲಾ 1 ವಿಕೆಟ್ ಪಡೆದರು.

ಪ್ರಮುಖ ಸುದ್ದಿ :-   ನೀಟ್ ಅಣಕು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ 17 ವರ್ಷದ ಮಗಳನ್ನು ಹೊಡೆದು ಕೊಂದ ಶಿಕ್ಷಕ...!

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement