ಹುಬ್ಬಳ್ಳಿ: 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಸೇವಾಸಿಂಧು ಆನಲೈನ್ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟ, ಉತ್ತರ ಕನ್ನಡ (ಶಿರಸಿ), ಹಾವೇರಿ, ಚಿಕ್ಕೋಡಿ ಮತ್ತು ಬೆಳಗಾವಿ, ವಿಭಾಗಗಳ ಘಟಕಗಳ ವ್ಯಾಪ್ತಿಯ ಬಸ್ ನಿಲ್ದಾಣಗಳ ಪಾಸ್ ಕೌಂಟರ್ಗಳಲ್ಲಿ ಸೆಪ್ಟಂಬರ್ 1ರಿಂದ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳು ಸೇವಾಸಿಂಧು ಆನಲೈನ್ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿ ಸಂಸ್ಥೆಯ ವಿದ್ಯಾರ್ಥಿ ರಿಯಾಯಿತಿ ಪಾಸ್ಗಳನ್ನು ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ. ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ