ಬೆಳಗಾವಿ: ತಾಲೂಕಿನ ಸುಳೇಬಾವಿ ಗ್ರಾಮದ ಮಹರ್ಷಿ ವಾಲ್ಮೀಕಿ ದೇವಸ್ಥಾನದಲ್ಲಿ ಸೋಮವಾರ ಸಂಜೆ ವಿದ್ಯುತ್ ಸ್ಪರ್ಶದಿಂದ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಮೃತರನ್ನು ಗ್ರಾಮಸ್ಥರಾದ ಸವಿತಾ ಫಕ್ಕೀರಪ್ಪ ಒಂಟಿ (34) ಹಾಗೂ ಕಲಾವತಿ ಮಾರುತಿ ಬೀದರವಾಡಿ (41) ಎಂದು ಗುರುತಿಸಲಾಗಿದೆ.
ಸೋಮವಾರ ಮಹಿಳಾ ಮಂಡಳದ ಸಭೆ ದೇವಸ್ಥಾನದಲ್ಲಿ ನಿಗದಿಯಾಗಿತ್ತು. ಎಲ್ಲರೂ ದೇವಸ್ಥಾನದಲ್ಲಿ ಸೇರಿದ್ದರು. ಸಭೆ ಬಳಿಕ ದೇವಸ್ಥಾನ ಆವರಣವನ್ನು ನೀರಿನಿಂದ ಶುಚಿಗೊಳಿಸಿದರು. ಆದರೆ, ನೀರಿನಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಸ್ವಚ್ಛತಾ ಕೆಲಸ ಮುಗಿಸಿ, ಕಬ್ಬಿಣದ ಗೇಟ್ ಹಾಕಿ ಹೊರ ಹೋಗುವಾಗ ಗೇಟ್ಗೆ ವಿದ್ಯುತ್ ಪ್ರವಹಿಸಿ ಇಬ್ಬರೂ ಮೃತಪಟ್ಟಿದ್ದಾರೆ’ ಎಂದು ಹೇಳಲಾಗಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಕೊಂಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ