ಗೋವಿನ ಸಗಣಿಯಿಂದ ಪೇಂಟ್ ತಯಾರಿಕೆ..! : ದೇಶದ ಮೊದಲ ಘಟಕ ಕಾರ್ಯಾರಂಭ..!!

ನವದೆಹಲಿ: ಮಾನವನಿಗೆ ಹಾನಿಯುಂಟು ಮಾಡುವ ರಾಸಯನಿಕಗಳಿದ ಸಿದ್ಧವಾಗುತ್ತಿರುವ ಬಣ್ಣಗಳ ಮಧ್ಯೆ ಸಗಣಿಯಿಂದ ಪೇಂಟ್ ತಯಾರಿಸುವ ಭಾರತದ ಮೊದಲ ಹಾಗೂ ಏಕೈಕ ಖಾದಿ ಪ್ರಾಕೃತಿಕ ಪೇಂಟ್ ನ ಹೊಸ ಸ್ವಯಂಚಾಲಿತ ಉತ್ಪಾದನಾ ಘಟಕ ಮಂಗಳವಾರ ಜೈಪುರದಲ್ಲಿ ಕಾರ್ಯಾರಂಭಗೊಂಡಿದೆ.

ಖಾದಿ ಪ್ರಾಕೃತಿಕ ಪೇಂಟ್ ನ ಹೊಸ ಸ್ವಯಂಚಾಲಿತ ಉತ್ಪಾದನಾ ಘಟಕವನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ವರ್ಚುವಲ್ ಮೂಲಕ  ಮಂಗಳವಾರ ಲೋಕಾರ್ಪಣೆ ಮಾಡಿದ್ದಾರೆ.

ತಂತ್ರಜ್ಞಾನದ ಹೊಸ ಶೋಧವನ್ನು ಶ್ಲಾಘಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, ಇದು ದೇಶದ ಗ್ರಾಮೀಣ ಮತ್ತು ಕೃಷಿ ಆಧಾರಿತ ಆರ್ಥಿಕತೆಯನ್ನು ಸಶಕ್ತಗೊಳಿಸುವಲ್ಲಿ ದೀರ್ಘಕಾಲೀನ ಪರಿಣಾಮ ಹೊಂದಿರಲಿದೆ ಎಂದು ಹೇಳಿದರು.

ಲಕ್ಷ-ಕೋಟಿ ರೂಪಾಯಿ ಮೌಲ್ಯದ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರೂ ಈ ಉತ್ಪಾದನಾ ಘಟಕವನ್ನು ಉದ್ಘಾಟಿಸಿದಷ್ಟು ಸಂತೋಷ ಮತ್ತು ತೃಪ್ತಿ ದೊರೆತಿರಲಿಲ್ಲ. ಯಶಸ್ವಿ ಸಂಶೋಧನೆಗಾಗಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಡು ಬಡವರ ಅನುಕೂಲಕ್ಕಾಗಿ ಸುಸ್ಥಿರ ಅಭಿವೃದ್ಧಿಯನ್ನು ಸೃಷ್ಟಿಸುವ ಅಪಾರ ಸಾಮರ್ಥ್ಯವನ್ನು ಖಾದಿ ಪ್ರಾಕೃತಿಕ ಪೇಂಟ್ ಹೊಂದಿದೆ. ಪ್ರತಿ ಹಳ್ಳಿಯಲ್ಲಿ ಇದರ ಘಟಕ ಸ್ಥಾಪಿಸುವ ಗುರಿ ಇರಿಸಿಕೊಳ್ಳಿ. ಖಾದಿ ಪ್ರಾಕೃತಿಕ ಪೇಂಟಿಗೆ ತಾವೇ ಪ್ರಚಾರ ರಾಯಭಾರಿ ಆಗುವುದಾಗಿಯೂ ಸಚಿವ ಗಡ್ಕರಿ ಭರವಸೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಮತದಾನಕ್ಕೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ...!

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (ಕೆವಿಐಸಿ) ಜೈಪುರದಲ್ಲಿನ ಘಟಕದ ಕುಮಾರಪ್ಪ ರಾಷ್ಟ್ರೀಯ ಹಸ್ತ ತಯಾರಿಕಾ ಕಾಗದ ಸಂಸ್ಥೆ (ಕೆಎಮ್‌ಎಚ್ಪಿಐ) ಕ್ಯಾಂಪಸ್ ನಲ್ಲಿ ಈ ಹೊಸ ಘಟಕ ಸ್ಥಾಪಿಸಲಾಗಿದೆ. ಈ ಹಿಂದೆ ಪ್ರಾಕೃತಿಕ್ ಪೇಂಟ್ ಕೈಯಿಂದಲೇ ತಯಾರಿಸಲಾಗುತ್ತಿತ್ತು. ಹೊಸ ಉತ್ಪಾದನಾ ಘಟಕ ಸ್ಥಾಪಿಸಿರುವುದರಿಂದ ಉತ್ಪಾದನಾ ಸಾಮರ್ಥ್ಯ ದ್ವಿಗುಣಗೊಳ್ಳಲಿದೆ. ಪ್ರಸ್ತುತ ಪ್ರಾಕೃತಿಕ್ ಪೇಂಟನ ದೈನಂದಿನ ಉತ್ಪಾದನೆ ೫೦೦ ಲೀಟರ್ ಆಗಿದ್ದು, ಇದನ್ನು ದಿನಕ್ಕೆ ೧೦೦೦ ಲೀಟರ್ ಗಳಿಗೆ ಹೆಚ್ಚಿಸಲಾಗುವುದು ಎಂದು ಕೆವಿಐಸಿ ಅಧ್ಯಕ್ಷ ವಿನಯ್ ಕುಮಾರ್ ಸಕ್ಸೇನಾ ಹೇಳಿದ್ದಾರೆ.

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement